ತೆರೆಗೆ ಬಂತು ನೈಜ ಕಥೆ ಆಧಾರಿತ ‘ತನುಜಾ’
Team Udayavani, Feb 3, 2023, 9:51 AM IST
2020ರ ಸಮಯದಲ್ಲಿ ಇಡೀ ದೇಶವೇ ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗಿತ್ತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು, ದೊಡ್ಡ ಸುದ್ದಿಯಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ
ಡಾ ಕೆ. ಸುಧಾಕರ್ ಮತ್ತು ಸರ್ಕಾರ ತನುಜಾಳಿಗೆ ನೀಟ್ ಪರೀಕ್ಷೆ ಬರೆಯಲು ಅನುಕೂಲ ಮಾಡಿತ್ತು. ಸಾಕಷ್ಟು ಅಡೆತಡೆಗಳನ್ನು ಎದುರಿಸಿ, ಕೊನೆಗೂ ಅಂದುಕೊಂಡಂತೆ ತನುಜಾ ನೀಟ್ ಪರೀಕ್ಷೆ ಬರೆಯುವಲ್ಲಿ ಯಶಸ್ವಿಯಾಗಿದ್ದರು. ಈಗ ಇದೇ ನೈಜ ಘಟನೆಯನ್ನು ಆಧರಿಸಿ “ತನುಜಾ’ ಎಂಬ ಹೆಸರಿನಲ್ಲಿ ಸಿನಿಮಾವಾಗಿ ಇಂದು ತೆರೆ ಕಾಣುತ್ತಿದೆ.
ಇದನ್ನೂ ಓದಿ:ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿಯಲ್ಲಿ ಅತೃಪ್ತಿಯ ಹೊಗೆ
“”ತನುಜಾ’ ನಮ್ಮ ನಾಡಿನ ಗ್ರಾಮೀಣ ಭಾಗದ ಹೆಣ್ಣುಮಗಳೊಬ್ಬಳ ಸಾಧನೆಯ ನೈಜ ಘಟನೆಯಾಧರಿತ ಚಿತ್ರ. ಒಬ್ಬ ವಿದ್ಯಾರ್ಥಿ ಮನಸ್ಸು ಮಾಡಿದರೆ ಯಾವುದೇ ಅಡೆ ತಡೆ ಬಂದರು ಮೆಟ್ಟಿ ನಿಂತು ಹೇಗೆಲ್ಲಾ ಸಾಧನೆ ಮಾಡಬಹುದು, ತಾಯಿಯ ಇಚ್ಛಾಶಕ್ತಿಯಿಂದ ಮಕ್ಕಳ ಭವಿಷ್ಯ ಹೇಗೆಲ್ಲಾ ರೂಪಿಸಬಹುದು? ಶಿಕ್ಷಕರು ನಿರ್ಧಾರ ಮಾಡಿದರೆ ವಿದ್ಯಾರ್ಥಿಗಳ ಗುರಿ ಮುಟ್ಟಲು ಹೇಗೆ ನೆರವಾಗಬಹುದು? ಒಂದು ಆಡಳಿತಾತ್ಮಕ ವ್ಯವಸ್ಥೆ ಸಾಮಾನ್ಯ ಜನರಿಗೆ ಸೂಕ್ತ ಸಮಯಕ್ಕೆ ಸ್ಪಂದಿಸಿದರೆ ಏನೆಲ್ಲಾ ಅಚ್ಚರಿ ನಡೆಯಬಹುದು? ಎನ್ನುವುದಕ್ಕೆ “ತನುಜಾ’ ಚಿತ್ರ ಒಂದು ಉತ್ತಮ ಉದಾಹರಣೆ.
ಅನೇಕರಿಗೆ ಪ್ರೇರಣೆಯಾಗುವಂಥ ಅಪರೂಪದ ನೈಜ ಘಟನೆ ಈ ಸಿನಿಮಾದಲ್ಲಿದೆ’ ಎಂಬುದು ಚಿತ್ರದ ಬಗ್ಗೆ ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ಮಾತು. ಇನ್ನು “ತನುಜಾ’ ಸಿನಿಮಾದಲ್ಲಿ ಸಪ್ತ ಪಾವೂರ್ ನಾಯಕಿ ಯಾಗಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ