ಪಾಸಿಟಿವ್ ಮನಸ್ಸುಗಳ ಆರಂಭ

ಫ್ಯಾಮಿಲಿ ಎಂಟರ್‌ಟೈನರ್‌

Team Udayavani, Mar 13, 2020, 5:03 AM IST

ಪಾಸಿಟಿವ್ ಮನಸ್ಸುಗಳ ಆರಂಭ

ಜಗತ್ತಿನಲ್ಲಿ ಎಲ್ಲವೂ ಆರಂಭವಾಗಿ ನಂತರ ಅಂತ್ಯವಾಗುತ್ತದೆ. ಪ್ರತಿಯೊಂದಕ್ಕೂ ಮೊದಲು ಆರಂಭ ನಂತರ ಅಂತ್ಯ ಅಂತಿರುತ್ತದೆ. ಆದರೆ ಇಲ್ಲೊಂದು ಚಿತ್ರತಂಡ ಅದನ್ನೇ ಸಕಾರಾತ್ಮಕ ದೃಷ್ಟಿಕೋನದಲ್ಲಿ ಎಲ್ಲ ಅಂತ್ಯಕ್ಕೂ ಒಂದು ಆರಂಭವಿರುತ್ತದೆ ಎಂದು ತಮ್ಮ ಚಿತ್ರದ ಮೂಲಕ ಹೇಳಲು ಹೊರಟಿದೆ. ಅಂದಹಾಗೆ, ಆ ಚಿತ್ರಕ್ಕೆ ಚಿತ್ರತಂಡ ಕೊಟ್ಟಿರುವ ಹೆಸರು “ಅಂತ್ಯವಲ್ಲ ಆರಂಭ’.

ಸಾಮಾಜಿಕ ಕಾಳಜಿ, ಸಾಂಸಾರಿಕ ಜವಾಬ್ದಾರಿ, ಜೊತೆಗೊಂದು ಸಂದೇಶ, ನಡುವೆಯೊಂದು ಪ್ರೇಮಕಥೆ ಇದೆಲ್ಲವನ್ನು ಇಟ್ಟುಕೊಂಡು ಇಟ್ಟುಕೊಂಡು ಅದನ್ನು ಮನರಂಜನಾತ್ಮಕವಾಗಿ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುತ್ತದೆ “ಅಂತ್ಯವಲ್ಲ ಆರಂಭ’ ಚಿತ್ರತಂಡ. ಚಿತ್ರದಲ್ಲಿ ಸಂಚಾರಿ ವಿಜಯ್‌, ಶೃತಿ ಹರಿಹರನ್‌ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹಿರಿಯ ನಟ ನರಸಿಂಹರಾಜು ಮೊಮ್ಮಗ ವೆಂಕಟರಾಜು, ಶಿಶರ್‌, ಹರ್ಷ, ನಚಿಕೇತನ್‌, ದೀಪಕ್‌ ಸೇರಿದಂತೆ ಹಲವು ಹೊಸ ಕಲಾವಿದರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಚಿತ್ರದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ “ಅಂತ್ಯವಲ್ಲ ಆರಂಭ’ ಚಿತ್ರದ ಆಡಿಯೋವನ್ನು ಹೊರತರುವ ಮೂಲಕ ಚಿತ್ರದ ಪ್ರಮೋಶನ್‌ ಕಾರ್ಯಗಳಿಗೆ ಚಾಲನೆ ನೀಡಿದೆ.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಡಾ.ಎನ್‌.ಬಿ ಜಯಪ್ರಕಾಶ್‌, “ಒಂದು ಸುಂದರ ಸಂಸಾರದಲ್ಲಿ ಎಲ್ಲ ಇದ್ದರೂ, ಗಂಡ-ಹೆಂಡತಿ ನಡುವೆ ಪ್ರೀತಿ-ಪ್ರೇಮ ಇರುವುದಿಲ್ಲ. ಮುಂದೆ ನಡೆಯುವ ಘಟನೆಯೊಂದು ಗಂಡ-ಹೆಂಡತಿ ಇಬ್ಬರನ್ನೂ ಕಾಡುತ್ತಾ ಹೋಗುತ್ತದೆ. ಕೊನೆಗೆ ಅದು ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂಬುದೇ ಸಿನಿಮಾದ ಕ್ಲೈಮ್ಯಾಕ್ಸ್‌. ಜಗತ್ತಿನಲ್ಲಿ ಯಾವುದಕ್ಕೂ ಕೊನೆ ಎಂಬುದಿರುವುದಿಲ್ಲ. ಎಲ್ಲದಕ್ಕೂ ಒಂದು ಪ್ರಾರಂಭವಿರುತ್ತದೆ ಎಂಬುದನ್ನು ಸನ್ನಿವೇಶಗಳ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಪರೀಕ್ಷೆಯಲ್ಲಿ ಫೇಲಾಗಿರುವವರು, ಜೀವನದಲ್ಲಿ ಸೋತವರು, ಪ್ರೇಮ ವೈಫ‌ಲ್ಯವಾದವರು ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಾರೆ. ಆದರೆ ಸತ್ತವರಿಗೆ ಆರಂಭವಿಲ್ಲದಿದ್ದರೂ, ಇಂಥ ಮನಸ್ಥಿತಿಯಲ್ಲಿರುವವರಿಗೆ ಮತ್ತೆ ಶುಭಾರಂಭ ಇರುತ್ತದೆಂಬ ಸಂದೇಶ ಚಿತ್ರದಲ್ಲಿದೆ’ ಎಂದು ಕಥಾಹಂದರವನ್ನು ತೆರೆದಿಟ್ಟರು.

ಮತ್ತೂಬ್ಬ ನಿರ್ದೇಶಕ ನಡಹಳ್ಳಿ ಶ್ರೀಪಾದರಾವ್‌ “ಅಂತ್ಯವಲ್ಲ ಆರಂಭ’ ಚಿತ್ರದ ನಿರ್ದೇಶನದಲ್ಲಿ ಕೈ ಜೋಡಿಸಿದ್ದಾರೆ. ಇಲ್ಲಿಯವರೆಗೆ ಸುಮಾರು ಐದಾರು ಚಿತ್ರಗಳ ನಿರ್ಮಾಣ ಮಾಡಿ, ಹಲವು ಧಾರವಾಹಿಗಳಿಗೆ ಬಂಡವಾಳ ಹೂಡಿರುವ ಗಣೇಶ್‌ ಕುಮಾರ್‌ ಈ ಚಿತ್ರಕೆ ನಿರ್ಮಾಪಕರಾಗಿ ಬಂಡವಾಳ ಹೂಡಿದ್ದಾರೆ.

ಸಾಗರ, ಬೆಂಗಳೂರು ಸುತ್ತಮುತ್ತ “ಅಂತ್ಯವಲ್ಲ ಆರಂಭ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ಐದು ಹಾಡುಗಳಿಗೆ ಸುಹಾಸ್‌ ಸಂಗೀತ ಸಂಯೋಜಿಸಿದ್ದು, ವಸುಮತಿ ಉಡುಪ ಸಾಹಿತ್ಯ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ನಾಗೇಶ್‌ ಆಚಾರ್ಯ-ಮಲ್ಲಿಕಾರ್ಜುನ ಛಾಯಾಗ್ರಹಣ, ಸುರೇಶ್‌ ಅರಸ್‌ ಸಂಕಲನವಿದೆ. ಸದ್ಯ ಹಾಡುಗಳ ಮೂಲಕ ಹೊರಬಂದಿರುವ “ಅಂತ್ಯವಲ್ಲ ಆರಂಭ’ ಇದೇ ಏಪ್ರಿಲ್‌ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.