ಮೊಂಬತ್ತಿ ಉರಿಯೋಕೆ ರೆಡಿಯಾಗಿದೆ!
Team Udayavani, Nov 24, 2017, 11:47 AM IST
ಅಂತೂ ಇಂತೂ ಮೊಂಬತ್ತಿ ಉರಿಯೋಕೆ ರೆಡಿಯಾಗಿದೆ. ಹೌದು, ಶ್ರೀನಿವಾಸ್ ಕೌಶಿಕ್ ನಿರ್ದೇಶನದ ಈ ಚಿತ್ರ ಕ್ರೈಮ್ ಮತ್ತು ಥ್ರಿಲ್ಲರ್ ಕಥೆ ಹೊಂದಿದೆ. ಇಲ್ಲಿ ಮಾನಸಿಕ ಖನ್ನತೆಗೆ ಒಳಗಾದ ವ್ಯಕ್ತಿಯೊಬ್ಬ ಅಪರಾಧ ಮಾಡುತ್ತಾನೆ. ಅವನನ್ನು ತನಿಖಾಧಿಕಾರಿಗಳು ಹೇಗೆಲ್ಲಾ ಪತ್ತೆ ಹಚ್ಚುತ್ತಾರೆ ಅನ್ನೋದೇ ಚಿತ್ರದ ಕಥೆ.
ಇಲ್ಲಿ ಪೋಷಕರು ಮಕ್ಕಳಿಗೆ ಒತ್ತಾಯವಾಗಿ ಓದುವುದನ್ನು ಮಾಡಿದರೆ, ಆ ಮಕ್ಕಳ ಮೇಲೆ ಎಂತಹ ಪರಿಣಾಮಗಳು ಬೀರುತ್ತವೆ ಹಾಗು ಅವರು ಹೇಗೆ ಕೆಟ್ಟ ಹಾದಿ ಹಿಡಿಯುತ್ತಾರೆ ಎಂಬುದನ್ನು ಹೇಳಲಾಗಿದೆ. ಇನ್ನು, ಮಕ್ಕಳಿಗೆ ಸ್ವತಂತ್ರ ಕೊಟ್ಟರೆ ಜವಾಬ್ದಾರಿ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಸಾಧ್ಯ ಎಂಬ ಸಂದೇಶವೂ ಇಲ್ಲಿದೆ.
ಬೆಂಗಳೂರು, ಮಂಗಳೂರು ಸೇರಿದಂತೆ ಇತರೆ ಕಡೆ ಚಿತ್ರೀಕರಿಸಲಾಗಿದೆ. ರವಿಕುಮಾರ್ ನಾಯಕರಾಗಿ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದಾರೆ. ನೀತು ಇಲ್ಲಿ ಎಸಿಪಿ ಶಿವಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ಯತಿರಾಜ್ ಇತರರು ನಟಿಸಿದ್ದಾರೆ.
ಹಾಡೊಂದಕ್ಕೆ ಬಿಗ್ಬಾಸ್ ಖ್ಯಾತಿಯ ಸಂಜನಾ ಹೆಜ್ಜೆ ಹಾಕಿದರೆ, ಆರಂಭದ ಗೀತೆ ಬರೆದು ಹಾಡುವುದರ ಜತೆಗೆ ಚಂದನ್ಶೆಟ್ಟಿ ಕುಣಿದಿದ್ದಾರೆ. ಎಂ.ಪ್ರಭಾಕರ್ ಚಿತ್ರದ ನಿರ್ಮಾಪಕರು. ಜಾನ್ಪದ ರಚಿಸಿರುವ ಮೂರು ಹಾಡುಗಳಿಗೆ ಸತೀಶ್ಬಾಬು ಸಂಗೀತ ನೀಡಿದ್ದಾರೆ. ಈ ವಾರ ಸುಮಾರು 80 ಚಿತ್ರಮಂದಿರಗಳಲ್ಲಿ ಚಿತ್ರ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…