ಕೋವಿಡ್ ಸಮಯದಲ್ಲಿ ಸಿನಿಮಾ ಹವಾ ಇಡೋದೇ ಸವಾಲು!

ಪೋಸ್ಟರ್‌, ಫ‌ಸ್ಟ್‌ಲುಕ್‌, ಟೀಸರ್‌, ಸಾಂಗ್‌ ಆಧಾರ...

Team Udayavani, Jul 31, 2020, 1:00 PM IST

ಕೋವಿಡ್ ಸಮಯದಲ್ಲಿ ಸಿನಿಮಾ ಹವಾ ಇಡೋದೇ ಸವಾಲು!

ಚಿತ್ರಮಂದಿರಗಳು ಮುಚ್ಚಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಅಪ್ಪಟ ಸಿನಿಮಾ ಪ್ರೇಕ್ಷಕನಿಗೆ ತನ್ನ ನೆಚ್ಚಿನ ನಟನ ಸಿನಿಮಾಗಳನ್ನು ನೋಡುವ ತವಕ ಹೆಚ್ಚುತ್ತಿದೆ. ಆದರೆ, ಕೋವಿಡ್ ಮಾತ್ರ ಸದ್ಯಕ್ಕೆ ಅದಕ್ಕೆ ಅವಕಾಶ ಕೊಡುವ ಲಕ್ಷಣಗಳು ಕಾಣುತ್ತಿಲ್ಲ. ಆಗಸ್ಟ್‌ನಲ್ಲೂ ಚಿತ್ರಮಂದಿರಗಳು ತೆರೆಯುವ ಯಾವ ಸೂಚನೆಯೂ ಇಲ್ಲ. ಒಂದು ವೇಳೆ ಚಿತ್ರಮಂದಿರ ತೆರೆದರೂ ಈಗಲೇ ಸಿನಿಮಾ ಬಿಡುಗಡೆ ಮಾಡಲು ಅನೇಕ ನಿರ್ಮಾಪಕರು ಸಿದ್ಧರಿಲ್ಲ. ಜನರಲ್ಲಿ ಕೋವಿಡ್ ಭಯ ದೂರವಾದ ನಂತರವಷ್ಟೇ ಸಿನಿಮಾ ಬಿಡುಗಡೆ ಎನ್ನುತ್ತಿದ್ದಾರೆ. ಆದರೆ, ಸಿನಿಮಾ ಮಂದಿಗೆ ತಮ್ಮ ಸಿನಿಮಾಗಳನ್ನು ಚಾಲ್ತಿಯಲ್ಲಿ ಡೋದೇ ಒಂದು ಸವಾಲು. ಇಲ್ಲವಾದಲ್ಲಿ ಎಲ್ಲಿ ಪ್ರೇಕ್ಷಕ ತಮ್ಮ ಸಿನಿಮಾವನ್ನು ಮರೆತು ಬಿಡುತ್ತಾನೋ ಎಂಬ ಭಯ ಒಂದು ಕಡೆಯಾದರೆ, ಸಿನಿಮಾ ಅಪ್‌ಡೇಟ್ಸ್‌ ಗಾಗಿ ಕುತೂಹಲದಿಂದ ಎದುರು ನೋಡುತ್ತಿರುವ ಸಿನಿಪ್ರೇಮಿಗಳಿಗೆ ಹೊಸದನ್ನು ನೀಡುವ ಅನಿವಾರ್ಯತೆಯೂ ಸಿನಿಮಾ ಮಂದಿಗಿದೆ. ಅದೇ ಕಾರಣದಿಂದ ಒಂದಷ್ಟು ಚಿತ್ರತಂಡಗಳು ತಮ್ಮ ಚಿತ್ರದ ಹೊಸ ಪೋಸ್ಟರ್‌, ಫ‌ಸ್ಟ್‌ಲುಕ್‌, ಲಿರಿಕಲ್‌ ವಿಡಿಯೋ, ಹಾಡು, ಮೋಶನ್‌ ಪೋಸ್ಟರ್‌ … ಹೀಗೆ ಒಂದೊಂದನ್ನೇ ಬಿಡುಗಡೆ ಮಾಡುತ್ತಾ ಸಿನಿಮಾ ಅಪ್‌ಡೇಟ್ಸ್‌ ಕೊಡುತ್ತಿವೆ. ಇದಕ್ಕೆ ಹಬ್ಬ, ಹುಟ್ಟುಹಬ್ಬ, ವಿಶೇಷ ದಿನಗಳು ಒಂದು ನೆಪವಷ್ಟೇ.

ಇತ್ತೀಚೆಗೆ ಆ ತರಹ ಪೋಸ್ಟರ್‌, ಹಾಡು ಮೂಲಕ ಅಭಿಮಾನಿಗಳನ್ನು ಖುಷಿಪಡಿಸಿದ ಸಿನಿಮಾಗಳ ಬಗ್ಗೆ ಹೇಳ್ಳೋದಾದರೆ ಮುಖ್ಯವಾಗಿ ಪೊಗರು. ಧ್ರುವ ಸರ್ಜಾ ನಾಯಕರಾಗಿರುವ
ಪೊಗರು ಸಿನಿಮಾದ ಖರಾಬು ಸಾಂಗ್‌ ಲಾಕ್‌ಡೌನ್‌ ವೇಳೆಯಲ್ಲೇ ಬಿಡುಗಡೆಯಾಗಿ ದೊಡ್ಡ ಹಿಟ್‌ ಆಗಿದೆ. ಅದರಲ್ಲೂ ಮಾಸ್‌ ಅಭಿಮಾನಿಗಳ ಈ ಹಾಡಿಗೆ ಫಿದಾ ಆಗಿದ್ದಾರೆ. ಇನ್ನು ದರ್ಶನ್‌ ಅಭಿನಯದ “ರಾಬರ್ಟ್‌’ ಚಿತ್ರದ ಪೋಸ್ಟರ್‌ಗಳು ಕೂಡಾ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಆ ಚಿತ್ರದ ನಿರ್ಮಾಪಕ ಉಮಾಪತಿಯವರ ಹುಟ್ಟುಹಬ್ಬಕ್ಕೆ ರಾಬರ್ಟ್‌ ತಂಡ ಚಿತ್ರದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿ ಶುಭಕೋರಿದೆ.

ಇನ್ನು, ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಸಂಜಯ್‌ ದತ್‌ ಅವರ ಅಧೀರ ಪಾತ್ರದ ಲುಕ್‌ ಅನ್ನು ಬಿಡುಗಡೆ ಮಾಡಿದೆ. ಪುನೀತ್‌ ರಾಜ್‌ ಕುಮಾರ್‌ ಅವರ “ಯುವರತ್ನ’ ಚಿತ್ರದ
ಪೋಸ್ಟರ್‌ ಇಂದು (ಜುಲೈ 31) ಬಿಡುಗಡೆಯಾಗುತ್ತಿದೆ. ಇಷ್ಟೇ ಅಲ್ಲದೇ, ಇನ್ನೊಂದಿಷ್ಟು ಮಂದಿ ಹೊಸಬರು ಕೂಡಾ ತಮ್ಮ ಸಿನಿಮಾದ ಪೋಸ್ಟರ್‌, ಲಿರಿಕಲ್ ವೀಡಿಯೋ ಸಾಂಗ್
ಅನ್ನು ಬಿಡುಗಡೆ ಮಾಡಿವೆ. ಸಹಜವಾಗಿಯೇ ಒಂದು ಪ್ರಶ್ನೆ ಬರುತ್ತದೆ. ಅದೇನೆಂದರೆ ಇಡೀ ಚಿತ್ರರಂಗ ಸ್ತಬ್ಧವಾಗಿರುವ ಈ ಸಮಯದಲ್ಲಿ ಈ ತರಹ ಪೋಸ್ಟರ್‌ ಮತ್ತಿತರ ಅಂಶಗಳನ್ನು ಬಿಡುಗಡೆ ಮಾಡಿದರೆ ಅದರಿಂದ ಸಿನಿಮಾಗಳಿಗೆ ಲಾಭವಿದೆಯೇ ಎಂದು ನೀವು ಕೇಳಬಹುದು. ಇಲ್ಲಿ ಲಾಭ-ನಷ್ಟದ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಇಂತಹ ಸಮಯದಲ್ಲಿ ಸಿನಿಮಾವನ್ನು ಚಾಲ್ತಿಯಲ್ಲಿಡೋದು ಮುಖ್ಯ. ಪಕ್ಕಾ ಗಾಂಧಿನಗರದ ಭಾಷೆಯಲ್ಲಿ ಹೇಳ್ಳೋದಾದರೆ ಹವಾ ಮೆಂಟೇನ್‌ ಮಾಡೋದು!

ಇದೊಂಥರ ದೂರದೃಷ್ಟಿತ್ವದ ಲೆಕ್ಕಾಚಾರ ಎನ್ನಬಹುದು. ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಚಿತ್ರಮಂದಿರ ತೆರೆಯುತ್ತಿದ್ದಂತೆ ಸಾಲು ಸಾಲು ಸಿನಿಮಾಗಳು ಬಿಡುಗಡೆಯ ಸರತಿಯಲ್ಲಿ ನಿಲ್ಲಲಿವೆ. ಹಾಗಾಗಿ, ಪ್ರೇಕ್ಷಕನಿಗೆ ತಮ್ಮ ಸಿನಿಮಾಗಳ ಆಗು-ಹೋಗುಗಳನ್ನು ನೀಡುವ ಜವಾಬ್ದಾರಿ ಸಿನಿಮಾ ಮಂದಿಗಿದೆ. ಏಕೆಂದರೆ ಪ್ರೇಕ್ಷಕನಿಗೆ ಆಯ್ಕೆಗಳು ಹೆಚ್ಚಿವೆ ಮತ್ತು ಹೊಸ ಹೊಸ ಮನರಂಜನಾ ಮಾಧ್ಯಮಗಳು ಕೂಡಾ ತೆರೆದುಕೊಳ್ಳುತ್ತಿವೆ. ಈ ಎಲ್ಲಾ ಕಾರಣಗಳಿಂದಾಗಿ ಸಿನಿಮಾ ಮಂದಿ ತಮ್ಮ ಸಿನಿಮಾಗಳ ಅಪ್‌ ಡೇಟ್‌ಗೆ ಹೊಸ ಮಾರ್ಗ ಹುಡುಕುತ್ತಲೇ ಇರಬೇಕಾಗುತ್ತದೆ.

ರವಿ ಪ್ರಕಾಶ್‌ ರೈ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.