ಅಮರಾವತಿ ಎಂಬ ಕಸದ ನಗರಿ


Team Udayavani, Feb 10, 2017, 3:45 AM IST

Amaravathi.jpg

“ಜಟ್ಟ’ ಚಿತ್ರದ ಚಿತ್ರೀಕರಣವನ್ನು ಮುಗಿಸಿ ಗಿರಿರಾಜ್‌ ಮತ್ತು ತಂಡದವರು ಬೆಂಗಳೂರಿಗೆ ಬರುವಷ್ಟರಲ್ಲಿ ಕಸದ ಸಮಸ್ಯೆ ಶುರುವಾಗಿತ್ತಂತೆ. ಆಗಲೇ ಯಾಕೆ ಈ ವಿಷಯದ ಕುರಿತು ಒಂದು ಸಿನಿಮಾ ಮಾಡಬಾರದು ಎಂಬ ಯೋಚಸ‌ನೆ ಗಿರಿರಾಜ್‌ಗೆ ಬಂದಿತ್ತಂತೆ.

“ಮೂರು ದಿನಗಳ ಕಾಲ ಅವರು ಧರಣಿ ಕೂತರು. ಆಗ ಶುರುವಾದ ಕಸದ ಸಮಸ್ಯೆ, ಇನ್ನೂ ಬಗೆಹರಿದಿಲ್ಲ. ಕಸದ ಸಮಸ್ಯೆ ಬಹಳ ದೊಡ್ಡದು. ಪೌರ ಕಾರ್ಮಿಕರ ಸಮಸ್ಯೆ ಸಹ ದೊಡ್ಡದು. ಸಾಂಕ್ರಾಮಿಕ ರೋಗಗಳ ವಿರುದ್ಧ ಅವರು ಹೋರಾಡಬೇಕು, ಎಷ್ಟೋ ಜನ ಚರಂಡಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಅವರ ಬಗ್ಗೆ ಯಾರಿಗೂ ಹೆಚ್ಚಿಗೆ ಗಮನವಿಲ್ಲ’ ಎಂದು ಗಿರಿರಾಜ್‌ ಹೇಳಿಕೊಂಡರು. ಆ ಸಿನಿಮಾದ ಹೆಸರೇ “ಅಮರಾವತಿ’. ಈ ವಾರ ಬಿಡುಗಡೆಯಾಗುತ್ತಿರುವ ಐದು ಚಿತ್ರಗಳಲ್ಲಿ ಅದೂ ಸಹ ಒಂದು. ಬಿಡುಗಡೆಗೆ ಒಂದು ವಾರವಿದೆ ಅನ್ನುವಷ್ಟರಲ್ಲಿ ಚಿತ್ರದ ಬಗ್ಗೆ ಮಾತನಾಡುವುದರ ಜೊತೆಗೆ, ಹಾಡುಗಳನ್ನು ಸಹ ಬಿಡುಗಡೆ ಮಾಡಿಸಿದರು ಗಿರಿರಾಜ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿಸುವುದಕ್ಕೆ ಹಿರಿಯ ನಿರ್ದೇಶಕ ಶಿವಮಣಿ ಅವರನ್ನು ಕರೆಸಿದ್ದರು. ಹಾಡುಗಳ ಬಿಡುಗಡೆಗೂ ಮುನ್ನ ಮಾತುಗಳು.

“ಮೊದಲೇ ಹೇಳಿದಂತೆ ಹಲವು ವಿಷಯಗಳಿವೆ. ಪ್ರಮುಖವಾಗಿ ನಾವು ಕಸ ಹಾಕುವಾಗ ವಿಂಗಡೆ ಮಾಡಿ ಹಾಕಬೇಕು. ಈ ವಿಷಯದ ಕುರಿತು ಅರಿವಾದರೆ, ಸಮಸ್ಯೆ ಬಗೆಹರಿಯಬಹುದು. ನಾನು ಒಂದು ವರದಿ ಓದುತ್ತಿದ್ದೆ. ದೆಹಲಿಯಲ್ಲಿ ಅದೆಷ್ಟೋ ಪೌರಕಾರ್ಮಿಕರು ಏಡ್ಸ್‌ಗೆ ತುತ್ತಾಗಿದ್ದರು. ಈ ಕುರಿತು ತನಿಖೆ ನಡೆಸಿದಾಗ ಗೊತ್ತಾಗಿದ್ದೇನೆಂದರೆ, ಅವೆಲ್ಲಾ ಆಸ್ಪತ್ರೆಯೊಂದರ ತ್ಯಾಜ್ಯವನ್ನು ಎಸೆಯುವಾಗ ಹತ್ತಿದ ಸೋಂಕು ಅಂತ. ಆ ಆಸ್ಪತ್ರೆಯಲ್ಲಿ ಏಡ್ಸ್‌ ರೋಗಿಗಳ ವಿಭಾಗವಿತ್ತಂತೆ. ಅವರಿಗೆ ಚುಚ್ಚಿದ ಸಿರಿಂಜ್‌ಗಳು, ಇವರಿಗೆ ಚುಚ್ಚಿ ಏಡ್ಸ್‌ ಸೋಂಕು ತಗಲಿದೆ. ಈ ಒಂದು ನಿರ್ಲಕ್ಷ್ಯದಿಂದ ಆದ ಅನಾಹುತ ಅಷ್ಟಿಷ್ಟಲ್ಲ. ಮೈಮರೆತಾಗ ಆಗುವ ಅವಾಂತರದಿಂದ ಏನೆಲ್ಲಾ ಆಗುತ್ತದೆ ಎನ್ನುವುದನ್ನು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದೇನೆ’ ಎನ್ನುತ್ತಾರೆ ಗಿರಿರಾಜ್‌.

ಈ ಚಿತ್ರವನ್ನು ಮಾಧವ ರೆಡ್ಡಿ ಎನ್ನುವವರು ನಿರ್ಮಿಸಿದ್ದಾರೆ. ಅವರು ಗಿರಿರಾಜ್‌ ಅವರ ತಂದೆಯ ಸ್ನೇಹಿತರಂತೆ. ಅವರಿಗೆ ಈ ಕಥೆಯ ರಿಸ್ಕ್ ಹೇಳಿದಾಗ ಅವರು, ಈ ಚಿತ್ರದಿಂದ ದುಡ್ಡು ಬರುತ್ತದೋ ಇಲ್ಲವೋ ಗೊತ್ತಿಲ್ಲ, ಹೆಮ್ಮೆ ಇರಬೇಕು ಅಂದರಂತೆ. ಅದರಂತೆ ಅವರೇ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ, 18 ರಂಗಭೂಮಿ ಪ್ರತಿಭೆಗಳನ್ನು ಪರಿಚಯಿಸಲಾಗಿದೆ. ಜೊತೆಗೆ ಅಚ್ಯುತ್‌ ಕುಮಾರ್‌, ವೈಶಾಲಿ ದೀಪಕ್‌ ಮುಂತಾದವರು ನಟಿಸಿದ್ದಾರೆ. ಅಭಿಲಾಷ್‌ ಲಾಖÅ ಮತ್ತು ಜೋಯೆಲ್‌ ಡುಬ್ಬ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.