ಕಾಪಿಕಟ್ಟೆಯಲ್ಲಿ ಹಿರಿಯರ ಮಾತು-ಕತೆ

ಹಾಸ್ಯನಟರ ಸಮಾಗಮ

Team Udayavani, Aug 2, 2019, 5:19 AM IST

k-30

ಯಾವುದೇ ಊರಿರಲಿ, ಸಾಮಾನ್ಯವಾಗಿ ಅಲ್ಲಿನ ಹಿರಿಯ ನಾಗರೀಕರು ಪ್ರತಿದಿನ ನಿಗದಿತ ಸಮಯಕ್ಕೆ ಏರಿಯಾದ ಯಾವುದಾದರೂ ಒಂದು ಸ್ಥಳದಲ್ಲಿ ಖಾಯಂ ಆಗಿ ಸೇರಿ, ಹರಟೆ, ಮಾತು-ಕತೆ ನಡೆಸುವುದನ್ನು ನೀವು ಆಗಾಗ್ಗೆ ನೋಡಿರುತ್ತೀರಿ. ಅದರಲ್ಲೂ ಸಣ್ಣ ಹೋಟೆಲ್‌ಗ‌ಳು, ಕಾಫಿ ಶಾಪ್‌ಗ್ಳಲ್ಲಿ ಇಂತಹ ದೃಶ್ಯಗಳು ಹೆಚ್ಚಾಗಿ ಕಾಣಸಿಗುತ್ತವೆ. ಈಗ ಇದೇ ಸನ್ನಿವೇಶವನ್ನು ಇಟ್ಟುಕೊಂಡು ಕನ್ನಡದಲ್ಲಿ ಚಿತ್ರವೊಂದು ತಯಾರಾಗುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಕಾಪಿಕಟ್ಟೆ’. ಆಡು ಭಾಷೆಯಲ್ಲಿ “ಕಾಫಿ’ ಎನ್ನುವ ಬದಲು “ಕಾಪಿ’ ಎಂದೇ ಬಳಸುವುದರಿಂದ ಚಿತ್ರಕ್ಕೆ “ಕಾಪಿಕಟ್ಟೆ’ ಎಂದು ಹೆಸರಿಡಲಾಗಿದೆ.

ಹೆಸರೇ ಹೇಳುವಂತೆ ಇದೊಂದು “ಕಾಪಿಕಟ್ಟೆ’ ಎನ್ನುವ ಕಾಫಿ ಶಾಪ್‌ನ ಸುತ್ತಮುತ್ತ ನಡೆಯುವ ಘಟನೆಗಳ ಸುತ್ತ ನಡೆಯುವ ಚಿತ್ರ. ನಿವೃತ್ತಿ ಜೀವನ ನಡೆಸುತ್ತಿರುವ ಹಿರಿಯರ ನೋವು-ನಲಿವು, ಕಷ್ಟ-ಸುಖ, ಮಾತುಕತೆ ಎಲ್ಲವೂ ಈ ಚಿತ್ರದಲ್ಲಿ ಇರಲಿದೆಯಂತೆ. ಇನ್ನೊಂದು ವಿಶೇಷವೆಂದರೆ, “ಕಾಪಿಕಟ್ಟೆ’ ಚಿತ್ರದ ಬಹುತೇಕ ಮುಖ್ಯ ತಾರಾಗಣದಲ್ಲಿ ಸುಮಾರು 35ಕ್ಕೂ ಹೆಚ್ಚು ಕನ್ನಡದ ಹಿರಿಯ ಹಾಸ್ಯನಟರು ಅಭಿನಯಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನೃತ್ಯ ಸಂಯೋಜಕರಾಗಿ, ಚಿತ್ರ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಎಂ.ಆರ್‌ ಕಪಿಲ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆದ ಸಮಾರಂಭದಲ್ಲಿ ಚಿತ್ರ ಸೆಟ್ಟೇರಿದೆ.

ಇದೇ ವೇಳೆ ಚಿತ್ರದ ಬಗ್ಗೆ ಮೊದಲು ಮಾತಿಗಿಳಿದ ನಿರ್ದೇಶಕ ಎಂ.ಆರ್‌ ಕಪಿಲ್‌, “ನಿವೃತ್ತಿ ಜೀವನವನ್ನು ಸಾಗಿಸುತ್ತಿರುವ, ಇಂದಿನ ಹಿರಿಯರ ಜೀವನ ಶೈಲಿ, ಅವರ ಮನಸ್ಥಿತಿ ಎಲ್ಲವೂ ಚಿತ್ರದಲ್ಲಿ ಅನಾವರಣಗೊಳ್ಳಲಿದೆ. 60ರ ನಂತರ ಎಲ್ಲರೂ ಏಕಾಂಗಿಯಾಗುತ್ತಾರೆ. ತಮ್ಮ ಏಕಾಂತವನ್ನು ಕಳೆಯಲು ಸಾಮಾನ್ಯವಾಗಿ ಎಲ್ಲಾ ಹಿರಿಯರು ದಿನಕ್ಕೊಂದು ಬಾರಿ ಕಾಫಿ ಕುಡಿಯಲು ತಮ್ಮದೇ ವಯಸ್ಸಿನವರ ಜೊತೆ ಒಂದೆಡೆ ಸೇರುತ್ತಾರೆ. ಅಲ್ಲಿ ಅವರದ್ದೇ ಆದ ಅನೇಕ ಚರ್ಚೆಗಳು ನಡೆಯುತ್ತಿರುತ್ತವೆ. ಅವರ ಮಾತು-ಕತೆಯಲ್ಲಿ ಹಾಸ್ಯ, ವಿನೋದ, ವಿಷಾದ ಎಲ್ಲವೂ ತುಂಬಿರುತ್ತದೆ. ಇದೇ ಸಂಗತಿಗಳನ್ನು ಇಟ್ಟುಕೊಂಡೆ “ಕಾಪಿಕಟ್ಟೆ’ ಚಿತ್ರ ಮಾಡುತ್ತಿದ್ದೇನೆ. “ಕಾಪಿಕಟ್ಟೆ’ ಅನ್ನೋದು ಎಲ್ಲರಿಗೂ ಅರ್ಥವಾಗುವ ಮತ್ತು ಎಲ್ಲರಿಗೂ ಅನ್ವಯಿಸುವ ಪದವಾಗಿದ್ದರಿಂದ ಅದನ್ನೇ ಟೈಟಲ್‌ ಆದ ಕಾರಣ ಇಟ್ಟಿದ್ದೇವೆ’ ಎಂದು ಚಿತ್ರದ ಬಗ್ಗೆ ವಿವರಣೆ ನೀಡಿದರು.

ಇನ್ನು “ಕಾಪಿಕಟ್ಟೆ’ ಚಿತ್ರದ ಟೈಟಲ್‌ಗೆ “ಫಿಲ್ಟರ್‌ ಕಾಫಿ ವಿತ್‌ ಸೀನಿಯರ್‌ ಸಿಟಿಜನ್ಸ್‌’ ಎನ್ನುವ ಟ್ಯಾಗ್‌ ಲೈನ್‌ ಇದ್ದು, “ಆರ್‌.ವಿ ಸಿನಿಮಾ ವರ್ಲ್ಡ್’ ಬ್ಯಾನರ್‌ ಮೂಲಕ ಜಿ. ರಾಘವೇಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. “ಕಾಪಿಕಟ್ಟೆ’ ಚಿತ್ರದ ಹಾಡುಗಳಿಗೆ ಗೋಪಿ ಕಲಾಕಾರ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಬಿ.ಆರ್‌ ನರಸಿಂಹಮೂರ್ತಿ ಚಿತ್ರಕತೆ-ಸಂಭಾಷಣೆ ಇದೆ. ಚಿತ್ರಕ್ಕೆ ಸಿ. ನಾರಾಯಣ್‌ ಛಾಯಾಗ್ರಹಣ, ಆರ್‌.ಡಿ ರವಿ ಸಂಕಲನ ಕಾರ್ಯವಿದೆ. “ಕಾಪಿಕಟ್ಟೆ’ ಚಿತ್ರದ ಪ್ರತಿ ಸನ್ನಿವೇಶದಲ್ಲೂ 11 ಜನ ಕಲಾವಿದರು ಕಾಣಿಸಿಕೊಳ್ಳಲಿದ್ದು, ಚಿತ್ರದಲ್ಲಿ ಮನರಂಜನೆ ಜೊತೆಗೆ ಒಂದು ಒಳ್ಳೆಯ ಸಂದೇಶ ಕೂಡ ಇದೆ ಎನ್ನುತ್ತದೆ ಚಿತ್ರತಂಡ.

ಉಳಿದಂತೆ ಹಿರಿಯ ನಟರಾದ ಉಮೇಶ್‌, ಹೊನ್ನವಳ್ಳಿ ಕೃಷ್ಣ, ಬ್ಯಾಂಕ್‌ ಜನಾರ್ದನ್‌, ಮೈಸೂರು ರಮಾನಂದ್‌, ಬಿರಾದಾರ್‌, ಮನದೀಪ್‌ ರಾಯ…, ಶಂಕರ್‌ ಭಟ್‌, ಮಿಮಿಕ್ರಿ ದಯಾನಂದ್‌, ಶಂಖನಾದ ಅರವಿಂದ್‌, ಡಿಂಗ್ರಿ ನಾಗರಾಜ್‌, ರೇಖಾದಾಸ್‌ ಮೊದಲಾದವರು “ಕಾಪಿಕಟ್ಟೆ’ಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.