ಮಕ್ಕಳ ಸಹಾಯವಾಣಿ ಸಂಖ್ಯೆ ಚಿತ್ರವಾಯ್ತು


Team Udayavani, Jun 8, 2018, 6:00 AM IST

cc-29.jpg

“ಮಕ್ಕಳೇ ತೊಂದರೆಯಲ್ಲಿದ್ದೀರಾ…? ಕೂಡಲೇ ಕರೆ ಮಾಡಿ 1098…!
ಇಂಥದ್ದೊಂದು ಸಂದೇಶ ಹೊತ್ತು ಮಕ್ಕಳ ಸಿನಿಮಾವೊಂದು ಬರುತ್ತಿದೆ. ಆ ಚಿತ್ರಕ್ಕೆ “1098′ ಎಂದು ನಾಮಕರಣ ಮಾಡಲಾಗಿದೆ. “ಸೇವ್‌ ಚೈಲ್ಡ್‌ಹುಡ್‌’ ಎಂಬ ಅಡಿಬರಹವೂ ಇದೆ. ಅಲ್ಲಿಗೆ ಇದು ಪಕ್ಕಾ ಮಕ್ಕಳ ಕುರಿತಾದ ಚಿತ್ರ ಅಂತ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಈ ಚಿತ್ರದ ಮೂಲಕ ಶ್ವೇತಾ ಎನ್‌.ಎ.ಶೆಟ್ಟಿ ನಿರ್ದೇಶಕರಾಗಿದ್ದಾರೆ. ಕಥೆ, ಚಿತ್ರಕಥೆಯ ಜವಾಬ್ದಾರಿಯೂ ಇವರದೇ. ಚಿತ್ರ ಪೂರ್ಣಗೊಳಿಸಿರುವ ನಿರ್ದೇಶಕಿ ಶ್ವೇತಾ, ಇದೇ ಜೂನ್‌ 12 ರಂದು ಬಿಡುಗಡೆಗೆ ತಯಾರಿ ಮಾಡಿಕೊಂಡಿದ್ದಾರೆ. ಜೂನ್‌ 12 ಮಂಗಳವಾರ. ಅಂದು ಚಿತ್ರ ಬಿಡುಗಡೆಯೇ? ಈ ಪ್ರಶ್ನೆ ಎದುರಾಗಬಹುದು. ಅದಕ್ಕೆ ಕಾರಣ ಕೊಡುವ ಶ್ವೇತಾ, ಅಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ. ಹಾಗಾಗಿ ಅಂದೇ ಚಿತ್ರ ಬಿಡುಗಡೆ ಮಾಡುವುದು ತಂಡದ ಉದ್ದೇಶ ಎನ್ನುತ್ತಾರೆ ಶ್ವೇತಾ.

 “1098′ ಅನ್ನೋದು ಮಕ್ಕಳ ಸಹಾಯವಾಣಿ ಸಂಖ್ಯೆ. ಹಲವು ಸಂಸ್ಥೆಗಳು ಈ ನಂಬರ್‌ ಬಳಕೆ ಮಾಡುತ್ತವೆ. ನಮ್ಮ ಕಥೆಗೆ ಈ ಶೀರ್ಷಿಕೆಯೇ ಸರಿಹೊಂದುತ್ತೆ ಎಂಬ ಕಾರಣಕ್ಕೆ ನಾಮಕರಣ ಮಾಡಲಾಗಿದೆ. ಚಿತ್ರ ಕಳೆದ 2016 ರಲ್ಲೇ ರೆಡಿಯಾಗಿತ್ತು. ಆದರೆ, ಒಂದಷ್ಟು ಸಮಸ್ಯೆಗಳು ಎದುರಾದವು. ಹಲವು ಅಡೆತಡೆ ಎದುರಿಸಿ ಬರಬೇಕಾಯಿತು. ಚಿತ್ರದಲ್ಲಿ ಸಾಕಷ್ಟು ಅಂಶಗಳಿವೆ. ತಾಯಿ ಸೆಂಟಿಮೆಂಟ್‌ ಇದೆ, ಮುಗ್ಧ ಬಾಲಕರ ನೋವು, ನಲಿವಿನ ಚಿತ್ರಣವಿದೆ, ಬ್ರೋಕರ್‌ಗಳು ಮಕ್ಕಳನ್ನು ಹೇಗೆಲ್ಲಾ ದುರುಪಯೋಗ ಪಡಿಸಿಕೊಳ್ತಾರೆ ಎಂಬ ಸಂದೇಶವಿದೆ, ವಿನಾಕಾರಣ ಮನೆಬಿಟ್ಟು ಬರುವ ಮಕ್ಕಳು ಹೇಗೆಲ್ಲಾ ಸಮಸ್ಯೆಗೆ ಸಿಲುಕಿ ಪರದಾಡುತ್ತಾರೆ ಎಂಬ ಮನಕಲಕುವ ಚಿತ್ರಣವೂ ಇದೆ. ನಾನು ಈ ಹಿಂದೆ ಹಲವು ಎನ್‌ಜಿಓ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದೇನೆ. ಹತ್ತಿರದಿಂದ ಬಾಲಕಾರ್ಮಿಕರ ಸಮಸ್ಯೆ ನೋಡಿದ್ದೇನೆ. ಕೆಲವು ಬೀದಿ ನಾಟಕ, ಶಾರ್ಟ್‌ ಫಿಲ್ಮ್ ಮಾಡುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದ್ದುಂಟು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮಕ್ಕಳ ಕುರಿತ ಸಮಸ್ಯೆಯನ್ನು ಎಲ್ಲರಿಗೂ ಗೊತ್ತಾಗುವಂತೆ ಮಾಡಬೇಕು ಅದರಲ್ಲೂ 1098 ಅಂದರೆ ಏನೆಂಬುದು ತಿಳಿಯಬೇಕು. ಅದಕ್ಕಾಗಿ ಈ ಚಿತ್ರ ಮಾಡಿದ್ದೇವೆ’ ಎಂದು ವಿವರ ಕೊಡುತ್ತಾರೆ ಶ್ವೇತಾ.

ಮಂಗಳವಾರ ಚಂದ್ರೋದಯ ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಅಂದು 14 ವರ್ಷದ ಒಳಗಿನ ಮಕ್ಕಳಿಗೆ ಉಚಿತ ಪ್ರವೇಶವಿದೆ. ನಂತರ ಬರುವ ಶುಕ್ರವಾರ ಮಲ್ಟಿಪ್ಲೆಕ್ಸ್‌ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಇಲ್ಲಿ ಹಣಕ್ಕಾಗಿ ಯಾರೂ ಕೆಲಸ ಮಾಡಿಲ್ಲ. ಮಕ್ಕಳ ಸಮಸ್ಯೆ ಎಲ್ಲರಿಗೂ ಗೊತ್ತಾಗಬೇಕು. ಆ ಸಮಸ್ಯೆಗೆ 1098 ಮುಖ್ಯ ಪರಿಹಾರ ಎಂಬುದನ್ನು ತಿಳಿಸಬೇಕು. ಹಾಗಾಗಿ 100 ನಿಮಿಷ ಅವಧಿಯ ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಅಂದರು ಶ್ವೇತಾ.

ನಿರ್ಮಾಪಕ ಶಂಕರ್‌ ಸೊಗಟಿ ಅವರಿಗೆ ಒಳ್ಳೆಯ ಚಿತ್ರ ಮಾಡಿದ ಖುಷಿಯಂತೆ. ಚಿತ್ರ ತಡವಾಗಿದೆ. ಕಾರಣ, ಸಿನಿಮಾ ಶುರುವಾದಾಗ, ನೋಟ್‌ ಬ್ಯಾನ್‌ ಆಯ್ತು. ಹಣದ ಸಮಸ್ಯೆ ಎದುರಾಯ್ತು. ಆದರೂ, ಒಳ್ಳೆಯ ವಿಷಯ ಇರುವ ಚಿತ್ರ ಬಿಡಬಾರದು ಅಂತ ನಿಧಾನವಾದರೂ, ಸಮಾಜಕ್ಕೊಂದು ಸಂದೇಶ ಸಾರುವ ಚಿತ್ರ ಮಾಡಿದ್ದೇವೆ ಎನ್ನುತ್ತಾರೆ ಶಂಕರ್‌ ಸೊಗಟಿ. ಚಿತ್ರದಲ್ಲಿ ಅಭಿನಯಿಸಿರುವ ಮಾಸ್ಟರ್‌ ಪ್ರೀತಮ್‌, ಮಾಸ್ಟರ್‌ ಆಯುಷ್‌, ಕುಮಾರಿ ಮಿಲನ, ಪುನೀತ್‌, ಪವನ್‌, ಶಿವಕುಮಾರ್‌ ಆರಾಧ್ಯ, ಮಾಲಿನಿ ಪಿ.ರಾವ್‌, ಛಾಯಾಗ್ರಾಹಕ ಕೃಷ್ಣ ಕೆಂಚನಹಳ್ಳಿ ಹಾಗೂ ಸಂಪತ್‌ “1098′ ಕುರಿತು ಮಾತನಾಡಿದರು. ವಿನಯ್‌ ಸಹನಿರ್ದೇಶನವಿದೆ. ವಿಶ್ವನಾಥ್‌ ಪೈ ಸಂಗೀತ ನೀಡಿದರೆ, ತೇಜಸ್‌ ಸಂಕಲನ ಮಾಡಿದ್ದಾರೆ. ಚಿತ್ರಕ್ಕೆ ಜೆ.ಎಂ.ಪ್ರಹ್ಲಾದ್‌ ಸಂಭಾಷಣೆ, ಸಾಹಿತ್ಯ ಬರೆದಿದ್ದಾರೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.