ಮದ್ವೆ ಮಾಡಿದ್ರೆ ಸರಿ ಹೋಗ್ತಾನಾ ?

ಸೋಮಾರಿ ಹುಡುಗನ ಮ್ಯಾರೇಜ್‌ ಸ್ಟೋರಿ

Team Udayavani, Jan 10, 2020, 5:39 AM IST

26

ಕೆಲ ಚಿತ್ರಗಳು ಶೀರ್ಷಿಕೆ ಹಾಗೂ ಪೋಸ್ಟರ್‌ಗಳಲ್ಲೇ ಸುದ್ದಿ ಮಾಡಿಬಿಡುತ್ತವೆ. ಆ ಮೂಲಕವೇ ಗಮನಸೆಳೆದು ಒಂದೊಮ್ಮೆ ಸಿನಿಮಾ ನೋಡಬೇಕು ಎಂಬಷ್ಟರಮಟ್ಟಿಗೆ ಇಷ್ಟವಾಗುತ್ತವೆ. ಅಂತಹ ಚಿತ್ರಗಳ ಸಾಲಿಗೆ “ಮದುವೆ ಮಾಡ್ರೀ ಸರಿ ಹೋಗ್ತಾನೆ’ ಚಿತ್ರವೂ ಸೇರಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇತ್ತೀಚೆಗೆ ಟೀಸರ್‌ ಬಿಡುಗಡೆ ಮಾಡುವ ಮೂಲಕ ಒಂದಷ್ಟು ಕುತೂಹಲ ಮೂಡಿಸಿದೆ.

ನಿರ್ದೇಶಕ ಗೋಪಿ ಕೆರೂರು ಅವರಿಗೆ ಇದು ಎರಡನೇ ಸಿನಿಮಾ. ಈ ಕುರಿತು ಮಾತನಾಡಲು ತಮ್ಮ ಚಿತ್ರತಂಡದ ಜೊತೆ ಆಗಮಿಸಿದ್ದರು. “ಇಡೀ ಚಿತ್ರ ಉತ್ತರ ಕರ್ನಾಟಕ ಭಾಷೆಯಲ್ಲಿದೆ. ಪಕ್ಕಾ ಕಮರ್ಷಿಯಲ್‌ ಸಿನಿಮಾ ಇದಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಿಸಲಾಗಿದೆ. ಊರಲ್ಲಿ ಸೋಮಾರಿ ಹುಡುಗನೊಬ್ಬನ ಮದುವೆ ಪುರಾಣ ಇಲ್ಲಿದೆ. ಸದಾ ಊರ ಜನರಿಂದ ಬೈಯಿಸಿಕೊಳ್ಳುವ ಹುಡುಗ ಕೊನೆಗೆ ಹೇಗೆ ಅದೇ ಊರ ಜನರಿಗೆ ಇಷ್ಟವಾಗುತ್ತಾನೆ ಎಂಬುದು ಕಥೆ. ಇಲ್ಲಿ 11 ಹಾಡುಗಳಿದ್ದರೂ, ಎಲ್ಲವೂ ಕಥೆಗೆ ಪೂರಕವಾಗಿವೆ. ನಮ್ಮನ್ನು ನಂಬಿ ನಿರ್ಮಾಪಕರು ಚಿತ್ರ ಮಾಡಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳುವ ನಂಬಿಕೆ ನಮಗಿದೆ’ ಎಂದರು ಗೋಪಿ ಕೆರೂರು.

ನಿರ್ಮಾಪಕ ಶಿವರಾಜ್‌ ಲಕ್ಷ್ಮಣರಾವ್‌ ದೇಸಾಯಿ ಅವರಿಗೆ ಇದು ಮೊದಲ ಚಿತ್ರ. ನಿರ್ದೇಶಕರು ನಾಲ್ಕು ವರ್ಷದ ಗೆಳೆಯರು. ಒಮ್ಮೆ ಈ ಚಿತ್ರದ ಕಥೆ ಬಗ್ಗೆ ಮಾತನಾಡಿದಾಗ, ಆಸಕ್ತಿ ಬಂದು, ಕಥೆ ಕೇಳಿದ್ದಾರೆ. ಅದರಲ್ಲೂ ಕಥೆಯ ಜೊತೆಗೆ “ಮದುವೆ ಮಾಡ್ರೀ ಸರಿ ಹೋಗ್ತಾನೆ’ ಶೀರ್ಷಿಕೆ ಕೇಳಿದಾಗಲೇ ಅವರಿಗೆ ಮಜವಾದ ಸಿನಿಮಾ ಆಗುತ್ತೆ ಎಂದೆನಿಸಿ ನಿರ್ಮಾಣ ಮಾಡಿದರಂತೆ. ಇದು ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿದೆ. ಒಂದೊಳ್ಳೆಯ ಚಿತ್ರ ಮಾಡಿದ ಖುಷಿ ನನ್ನದು’ ಎಂದರು ಶಿವರಾಜ್‌ ಲಕ್ಷ್ಮಣರಾವ್‌ ದೇಸಾಯಿ.

ನಾಯಕ ಶಿವ ಚಂದ್ರಕುಮಾರ್‌ ಅವರಿಗೂ ಇದು ಮೊದಲ ಚಿತ್ರ. ಆಡಿಷನ್‌ ಮೂಲಕ ಅವರು ಹೀರೋ ಆದ ಬಗ್ಗೆ ಹೇಳಿಕೊಂಡು, “ನನ್ನ ಭವಿಷ್ಯ ರೂಪಿಸುವ ಸಿನಿಮಾ ಇದಾಗುತ್ತೆ ಎಂಬ ನಂಬಿಕೆ ಇದೆ. ಚಿತ್ರದಲ್ಲಿ ನಾನೊಬ್ಬ ಪಡ್ಡೆ ಹುಡುಗ. ಸದಾ ಎಲ್ಲರಿಂದಲೂ ಬೈಯಿಸಿಕೊಳ್ಳುವ ಪಾತ್ರವಾಗಿದ್ದು, ಮದುವೆ ನಂತರ ಸರಿಹೋಗ್ತಾನಾ ಇಲ್ಲವಾ ಅನ್ನೋದೇ ಕಥೆ’ ಎಂದರು ಅವರು.

ಸಂಗೀತ ನಿರ್ದೇಶಕ ಅವಿನಾಶ್‌ ಬಾಸೂತ್ಕರ್‌ ಅವರಿಗೆ ಇದು ನಿರ್ದೇಶಕರ ಜೊತೆ ಎರಡನೇ ಚಿತ್ರ. ಹಿಂದೆ “ರಂಕಲ್‌ ರಾಟೆ’ಗೂ ಸಂಗೀತ ನೀಡಿದ್ದರು. ಇಲ್ಲಿ ಹನ್ನೊಂದು ಹಾಡುಗಳಿವೆ. ಆ ಬಗ್ಗೆ ಈಗಲೇ ಹೇಳಲ್ಲ. ಯಾಕೆಂದರೆ, ಆಡಿಯೋ ಬಿಡುಗಡೆ ವೇಳೆ ಸಂಪೂರ್ಣ ವಿವರ ಕೊಡುತ್ತೇನೆ. ಆದರೆ, ನಿರ್ಮಾಪಕರ ಬಗ್ಗೆ ಹೇಳಲೇಬೇಕು. ನಾನು ಕೇಳಿದ್ದೆಲ್ಲವನ್ನೂ ಒದಗಿಸಿದ್ದಾರೆ. ಇಲ್ಲಿ ಲೈವ್‌ ವಾದ್ಯ ಬಳಸಿದ್ದೇವೆ. ಒಂದು ಮನರಂಜನೆಯ ಸಿನಿಮಾ ಇದಾಗಿದ್ದು, ಎಲ್ಲಾ ವರ್ಗದವರು ನೋಡುವ ಹಾಸ್ಯಮಯ ಸಿನಿಮಾ ಎಂದರು ಅವಿನಾಶ್‌ ಬಾಸೂತ್ಕರ್‌.

ಹಿರಿಯ ರಂಗಕರ್ಮಿ ಕೃಷ್ಣಮೂರ್ತಿ ಕವಾತ್ತರ್‌ ಇಲ್ಲಿ ನೆಗೆಟಿವ್‌ ಪಾತ್ರ ಮಾಡಿದ್ದಾರಂತೆ. ನಿರ್ದೇಶಕರು ತುಂಬ ಕಷ್ಟಪಟ್ಟು, ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಎಲ್ಲರಿಗೂ ರುಚಿಸುವ ಚಿತ್ರ ಇದಾಗಲಿದೆ’ ಎಂದರು ಕೃಷ್ಣಮೂರ್ತಿ ಕವಾತ್ತರ್‌.

ಲಹರಿ ವೇಲು ಅವರು ಈ ಚಿತ್ರದ ಮೂಲಕ ಈ ವರ್ಷದ ಮೊದಲ ಚಿತ್ರದ ಆಡಿಯೋ ಹಕ್ಕು ಖರೀದಿಸಿದ ಬಗ್ಗೆ ಹೇಳಿಕೊಂಡರು. ಕಲಾವಿದರಾದ ಚಿತ್ಕಲ ಬಿರಾದಾರ, ಸದಾನಂದ ಕಾಳಿ, ಚಕ್ರವರ್ತಿ ದಾವಣಗೆರೆ ಮಾತನಾಡಿದರು. ಚಿತ್ರಕ್ಕೆ ಸುರೇಶ್‌ ಬಾಬು ಛಾಯಾಗ್ರಹಣವಿದೆ. ವೆಂಕಿ ಸಂಕಲನವಿದೆ.

ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.