ಅನಿವಾಸಿ ಕನ್ನಡಿಗರ ಸಿನಿಮಾ


Team Udayavani, May 17, 2019, 6:00 AM IST

11

ಚಂದನವನದಲ್ಲಿ ಕಳೆದ ಕೆಲ ದಿನಗಳಿಂದ ತನ್ನ ಹಾಡುಗಳು ಮತ್ತು ಟ್ರೇಲರ್‌ ಮೂಲಕ ಸಾಕಷ್ಟು ಸದ್ದು ಮಾಡುತ್ತಿರುವ ಹೊಸ ಪ್ರತಿಭೆಗಳ “ರತ್ನಮಂಜರಿ’ ಚಿತ್ರ ತೆರೆಗೆ ಬರೋದಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ “ರತ್ನಮಂಜರಿ’ಯ ವಿಶೇಷತೆಗಳ ಬಗ್ಗೆ ಮಾತನಾಡಿದೆ.

“ರತ್ನಮಂಜರಿ’ಯ ಮೊದಲ ವಿಶೇಷವೆಂದರೆ, ಇದು ಕನ್ನಡ ಚಿತ್ರರಂಗದ ಮೇಲೆ ಪ್ರೀತಿಯಿರುವ ಅನಿವಾಸಿ ಕನ್ನಡಿಗರ ಕೈಯಲ್ಲಿ ಮೂಡಿಬಂದಿರುವ ಚಿತ್ರ. ಚಿತ್ರದ ನಿರ್ದೇಶಕ ಪ್ರಸಿದ್ಧ್, ನಿರ್ಮಾಪಕರಾದ ಸಂದೀಪ್‌, ನಟರಾಜ್‌ ಹಳೆಬೀಡು, ಡಾ. ನವೀನ್‌ ಕೃಷ್ಣ ಹೀಗೆ ಬಹುತೇಕರು ಅನಿವಾಸಿ ಕನ್ನಡಿಗರು. ಇನ್ನು ಚಿತ್ರದಲ್ಲಿ ಕೂಡ ಚಿತ್ರದ ನಾಯಕ, ನಾಯಕಿ ಇಬ್ಬರೂ ಅನಿವಾಸಿ ಕನ್ನಡಿಗರಂತೆ. ಅಲ್ಲದೆ “ರತ್ನಮಂಜರಿ’ ಚಿತ್ರದ ಅರ್ಧದಷ್ಟು ಭಾಗವನ್ನು ಅಮೆರಿಕಾದಲ್ಲಿ, ಉಳಿದ ಅರ್ಧದಷ್ಟು ಭಾಗವನ್ನು ಕನ್ನಡ ನೆಲದಲ್ಲಿ ಚಿತ್ರೀಕರಿಸಲಾಗಿದೆ. ಇನ್ನು ಚಿತ್ರದಲ್ಲಿ ಕನ್ನಡದವರು ಮಾತ್ರವಲ್ಲದೆ, ಅಮೆರಿಕದವರೂ ಹಲವರು ನಟಿಸಿ¨ªಾರೆ ಎನ್ನುತ್ತದೆ ಚಿತ್ರತಂಡ.

ಚಿತ್ರತಂಡ ಹೇಳುವ ಪ್ರಕಾರ, ಚಿತ್ರದಲ್ಲಿ ನೈಜ ಘಟನೆಯನ್ನು ತೆರೆಮೇಲೆ ತರಲಾಗುತ್ತಿದೆ. ಈ ಕಥೆಯ ಅರ್ಧದಷ್ಟು ಭಾಗ ವಿದೇಶದಲ್ಲಿ ನಡೆದರೆ, ಇನ್ನರ್ಧ ಭಾಗ ಇಲ್ಲಿ ನಡೆಯುತ್ತದೆಯಂತೆ. ಅಮೆರಿಕಾದಲ್ಲಿ ನಡೆಯುವ ಜೋಡಿ ಕೊಲೆ ಆನಂತರ ನಡೆದ ಬೆಳವಣಿಗೆಗಳನ್ನು ಆಧಾರವಾಗಿಟ್ಟುಕೊಂಡು ಈ ಚಿತ್ರ ಮಾಡಲಾಗಿದೆ. ಅಮೆರಿಕಾದಿಂದ ಕೊಡಗಿನವರೆಗೂ ಆ ಕೊಲೆಯ ನಂಟಿರುತ್ತದೆ. ಹಾಗಾದರೆ, “ಅಮೆರಿಕಾದಲ್ಲಿ ನಡೆದ ಆ ಕ್ರೈಂ ಸ್ಟೋರಿಗೆ ಕನ್ನಡದ ನಂಟು ಹೇಗೆ, ಆ ಘಟನೆ ಯಾವುದು’ ಎಂಬ ಪ್ರಶ್ನೆಗೆ ಸಿನಿಮಾ ನೋಡಿದಾಗ ಉತ್ತರ ಸಿಗುತ್ತದೆ ಎನ್ನುತ್ತದೆ “ರತ್ನಮಂಜರಿ’ ಚಿತ್ರತಂಡ.

ರತ್ನಮಂಜರಿ’ ತೆರೆ ಮುಂದೆ, ತೆರೆ ಹಿಂದೆ ಬಹುತೇಕ ಹೊಸ ಪ್ರತಿಭೆಗಳಿಂದಲೆ ಮೂಡಿಬಂದಿದೆ. ಚಿತ್ರದಲ್ಲಿ ರಾಜ್‌ ಚರಣ್‌ ನಾಯಕನಾಗಿ, ಅಖೀಲಾ ಪ್ರಕಾಶ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪಲ್ಲವಿ ರಾಜು, ಕನ್ನಿಕಾ ಹಾಗೂ ಶ್ರದ್ಧಾ ಸಾಲಿಯನ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಹರ್ಷವರ್ಧನ್‌ ರಾಜ್‌ ಸಂಗೀತ ಸಂಯೋಜನೆಯಿದ್ದು, ಕೆ. ಕಲ್ಯಾಣ್‌ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಪುನೀತ್‌ ರಾಜಕುಮಾರ್‌, ವಸಿಷ್ಠ ಸಿಂಹ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರದ ದೃಶ್ಯಗಳಿಗೆ ಪ್ರೀತಮ್‌ ತೆಗ್ಗಿನಮನೆ ಮತ್ತು ಕಿಟ್ಟಿ ಕ್ಯಾಮೆರಾ ಹಿಡಿದರೆ, ಪವನ್‌ ರಾಮ್‌ ಶೆಟ್ಟಿ ಸಂಕಲನ ಕಾರ್ಯ ನಿರ್ವ ಹಿಸಿದ್ದಾರೆ. ವಿಕ್ರಂ ಮೋರ್‌ ಸಾಹಸ, ಮೋಹನ್‌ ನೃತ್ಯ ಸಂಯೋಜಿಸಿದ್ದಾರೆ. “ಶರಾವತಿ ಫಿಲಂಸ್‌’ ಬ್ಯಾನರ್‌ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.