ಅರೆಬೆಂದ ಹುಡುಗರ ಕಥೆ

ಅಪರಿಪೂರ್ಣತೆಯ ಸುತ್ತ ಪರಿಪೂರ್ಣ ಸಿನ್ಮಾ

Team Udayavani, Jan 17, 2020, 5:55 AM IST

an-18

ನೀವೇನಾದರೂ ಮೊಟ್ಟೆ ಪ್ರಿಯರೋ, ಆಮ್ಲೆಟ್‌ ಪ್ರಿಯರೋ ಆಗಿದ್ದರೆ, ಖಂಡಿತ “ಹಾಫ್ ಬಾಯಿಲ್ಡ್‌’ ಅನ್ನೋ ಪದದ ಬಗ್ಗೆ ಕೇಳಿರುತ್ತೀರಿ ಅಥವಾ ಮೊಟ್ಟೆಯನ್ನು ಅರ್ಧ ಬೇಯಿಸಿ ಅದರ ರುಚಿಗೊಂದಷ್ಟು ಉಪ್ಪು-ಖಾರ ಬೆರೆಸಿ “ಹಾಫ್ ಬಾಯಿಲ್ಡ್‌’ ಅಂಥ ಬಾಯಿ ಚಪ್ಪರಿಸುವವರನ್ನಾದರೂ ನೋಡಿರುತ್ತೀರಿ. ಈಗ ಯಾಕೆ “ಹಾಫ್ ಬಾಯಿಲ್ಡ್‌’ ಬಗ್ಗೆ ಮಾತು ಅಂತೀರಾ? ಅದಕ್ಕೊಂದಿಷ್ಟು ಕಾರಣವಿದೆ. ಇಲ್ಲೊಂದು ಹೊಸಬರ ತಂಡ ಈಗ ಇದೇ ಹೆಸರಿನಲ್ಲಿ, “ನಾವೆಲ್ರೂ ಹಾಫ್ ಬಾಯಿಲ್ಡ್‌’ ಅನ್ನೋ ಚಿತ್ರವನ್ನು ತೆರೆಯ ಮೇಲೆ ತರಲು ಹೊರಟಿದೆ.

ಅಂದಹಾಗೆ, “ನಾವೆಲ್ರೂ ಹಾಫ್ ಬಾಯಿಲ್ಡ್‌’ ಅಂಥ ಚಿತ್ರಕ್ಕೆ ಹೆಸರಿಡೋದಕ್ಕೂ ಬಲವಾದ ಕಾರಣವಿದೆ­ಯಂತೆ. “ಈಗಿನ ಕಾಲದ ಹುಡುಗರು ಯಾವುದನ್ನೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ. ಯಾವುದರಲ್ಲೂ ಪರಿಣಿತರಾಗಿರುವುದಿಲ್ಲ. ಯಾವುದರಲ್ಲೂ ಪರಿಪೂರ್ಣರಾಗಿರುವುದಿಲ್ಲ. ಹಿಡಿದ ಕೆಲಸವನ್ನು ಸಂಪೂರ್ಣವಾಗಿ ಮುಗಿಸುವುದಿಲ್ಲ. ಎಲ್ಲವನ್ನು ಅರ್ಧಂಬರ್ಧ ತಿಳಿದುಕೊಂಡಿರುತ್ತಾರೆ. ಎಲ್ಲವನ್ನೂ ಅರ್ಧಂಬರ್ಧ ಮಾಡುತ್ತಾರೆ. ಇಂಥ ಹುಡುಗರ ಜೀವನದ ಸುತ್ತ ಈ ಚಿತ್ರದ ಕಥೆ ನಡೆಯುವುದರಿಂದ, ಚಿತ್ರಕ್ಕೆ “ನಾವೆಲ್ರೂ ಹಾಫ್ ಬಾಯಿಲ್ಡ್‌’ ಅಂಥ ಹೆಸರಿಡಲಾಗಿದೆ’ ಎಂಬುದು ಚಿತ್ರದ ಟೈಟಲ್‌ ಕುರಿತು ಚಿತ್ರತಂಡದ ವಿವರಣೆ.

ಈಗಾಗಲೇ ಸದ್ದಿಲ್ಲದೆ ತನ್ನ ಕೆಲಸಗಳನ್ನು ಪೂರ್ಣಗೊಳಿಸಿರುವ “ನಾವೆಲ್ರೂ ಹಾಫ್ ಬಾಯಿಲ್ಡ್‌’ ಚಿತ್ರತಂಡ ಇದೇ ಜ. 24ಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ. ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿತ್ತು. ಚಿತ್ರಕ್ಕೆ ಶಿವರಾಜ್‌ ಬಿ, ವೆಂಕಟಾಚಲ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕರು, “ಇಂದಿನ ಯುವಕರು ಜೀವನವನ್ನು ಹೇಗೆ ಅರ್ಥ ಮಾಡಿಕೊಂಡಿರುತ್ತಾರೆ. ನಮ್ಮ ಯುವಕರಿಗೆ ಹೇಳ್ಳೋರು, ಕೇಳ್ಳೋರು, ತಿಧ್ದೋರು ಇಲ್ಲದಿ­ದ್ದರೆ ಅವರ ಜೀವನದಲ್ಲಿ ಏನೆಲ್ಲ ಆಗಬಹುದು ಅನ್ನೋದನ್ನ ನಾಲ್ಕು ಹುಡು­ಗರನ್ನು ಇಟ್ಟುಕೊಂಡು ಈ ಚಿತ್ರದಲ್ಲಿ ಹೇಳಿದ್ದೇವೆ’ ಎಂದು ಚಿತ್ರದ ಕಥೆಯ ಎಳೆ ಬಿಚ್ಚಿಟ್ಟರು.

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ನಾವೆಲ್ರೂ ಹಾಫ್ ಬಾಯಿಲ್ಡ್‌’ ಚಿತ್ರ­ದಲ್ಲಿ ಸುನೀಲ್‌ ಕುಮಾರ್‌, ದೀಪಕ್‌, ಹಂಪೇಶ್‌, ಮಂಜುನಾಥ್‌ ನಾಯಕರಾಗಿ, ಮಾತಂಗಿ ಪ್ರಸನ್‌, ವಿನ್ಯಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ತಬಲನಾಣಿ, ದೇವದಾಸ್‌ ಕಾಪಿಕಾಡ್‌, ಪವನ್‌ ಕುಮಾರ್‌, ಅನಂತ್‌ ಇತರರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ರಮೇಶ್‌ ಕುಶಂಧರ್‌ ರೆಡ್ಡಿ ಕ್ಯಾಮರಾ ಹಿಡಿದರೆ, ಅದೇ ಚಿತ್ರಕ್ಕೆ ನೃತ್ಯ ನಿರ್ದೇಶಿಸಿದ್ದ ಪ್ರೇಮ್‌ ರಕ್ಷಿತ್‌ ಈ ಚಿತ್ರದ ಹಾಡಿಗೆ ಕೋರಿಯೋಗ್ರಾಫಿ ಮಾಡಿದ್ದಾರೆ. ಚಿತ್ರಕ್ಕೆ ನಾಗೇಂದ್ರ ಕೆ. ಉಜ್ಜನಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವಿಜಯ ಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಹಾಡುಗಳಿಗೆ ಬಹದ್ದೂರ್‌ ಚೇತನ್‌ ಸಾಹಿತ್ಯವಿದ್ದು, ತಬಲನಾಣಿ ಸಂಭಾಷಣೆಯಿದೆ. 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.