“ಬೆಲ್‌ ಬಾಟಂ’ ಹಾಡು ಬಂತು


Team Udayavani, Jan 4, 2019, 12:30 AM IST

x-85.jpg

80ರ ದಶಕದ ಜನಪ್ರಿಯ “ಬೆಲ್‌ ಬಾಟಂ’ ಸ್ಟೈಲ್‌ ಇಂದಿಗೂ ಅದೆಷ್ಟೋ ಮಂದಿಗೆ ಅಚ್ಚುಮೆಚ್ಚು. ಆಗಿನ ಕಾಲದ ಸಿನಿಮಾಗಳಲ್ಲಿ, ಫೋಟೋಗಳಲ್ಲಿ ಕಾಣುತ್ತಿದ್ದ “ಬೆಲ್‌ ಬಾಟಂ’ ಈಗ ಸಿನಿಮಾವಾಗಿ ಮತ್ತೆ ತೆರೆಮೇಲೆ ಬರುತ್ತಿದೆ. ಹೌದು, “ಬೆಲ್‌ ಬಾಟಂ’ ಹೆಸರಿನಲ್ಲಿ ಕಳೆದ ವರ್ಷ ಸೆಟ್ಟೇರಿದ್ದ ರಿಷಭ್‌ ಶೆಟ್ಟಿ, ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರ, ಈ ವರ್ಷ ತೆರೆಗೆ ಬರೋದಕ್ಕೆ ಅಣಿಯಾಗಿದೆ. ಸದ್ದಿಲ್ಲದೆ ತನ್ನ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ “ಬೆಲ್‌ ಬಾಟಂ’ ಚಿತ್ರದ ರೆಟ್ರೋ ಹಾಡೊಂದನ್ನು ಹೊರತಂದಿದೆ. 

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಚಿತ್ರತಂಡ, “ಬೆಲ್‌ ಬಾಟಂ’ ಚಿತ್ರದ “ಏತಕೆ ಬೊಗಸೆ ತುಂಬಾ ಆಸೆ ನೀಡುವೆ.., ಏತಕೆ ಕನಸಿನಲ್ಲಿ ಮೀಸೆ ತೀಡುವೆ…’ ಎಂಬ ಸಾಲುಗಳಿಂದ ಶುರುವಾಗುವ ರೆಟ್ರೋ ಶೈಲಿಯ ರೊಮ್ಯಾಂಟಿಕ್‌ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿತು. ಯೋಗರಾಜ್‌ ಭಟ್‌ ಬರೆದಿರುವ ಈ ಮೆಲೋಡಿ ಹಾಡಿಗೆ ವಿಜಯ್‌ ಪ್ರಕಾಶ್‌ ಧ್ವನಿಯಾಗಿದ್ದು, ಅಜನೀಶ್‌ ಲೋಕನಾಥ್‌ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. 

ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ರಿಷಭ್‌ ಶೆಟ್ಟಿ “ಬೆಲ್‌ ಬಾಟಂ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ. ಚಿತ್ರದಲ್ಲಿ ರಿಷಭ್‌ ಶೆಟ್ಟಿ ಡಿಟೆಕ್ಟಿವ್‌ ದಿವಾಕರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 80ರ ದಶಕದ ಕಾಲಘಟ್ಟದಲ್ಲಿ ಚಿತ್ರದ ಕಥೆ ನಡೆಯಲಿದೆಯಂತೆ. ಜಯತೀರ್ಥ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 

“ಬೆಲ್‌ ಬಾಟಂ’ ಹಾಡಿನ ಬಿಡುಗಡೆ ವೇಳೆ ಹಾಜರಿದ್ದ ನಟ ರಿಷಭ್‌ ಶೆಟ್ಟಿ, ನಟಿ ಹರಿಪ್ರಿಯಾ, ನಿರ್ದೇಶಕ ಜಯತೀರ್ಥ, ಸೇರಿದಂತೆ ಚಿತ್ರತಂಡದ ಸದಸ್ಯರು “ಬೆಲ್‌ ಬಾಟಂ’ನ ವಿಶೇಷತೆಗಳು ಮತ್ತು ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. “ಬೆಲ್‌ ಬಾಟಂ’ ಬಾಂಡ್‌ ಚಿತ್ರವಾದರೂ ಇದನ್ನು ಹ್ಯೂಮರಸ್‌ ಆಗಿ ತೆರೆ ಮೇಲೆ ತಂದಿರುವುದಾಗಿ ಇಡೀ ಚಿತ್ರತಂಡ ಹೇಳಿಕೊಂಡಿದೆ. 

ಇನ್ನು ರಿಲೀಸ್‌ಗೂ ಮುನ್ನವೇ “ಬೆಲ್‌ ಬಾಟಂ’ ರಿಮೇಕ್‌ ರೈಟ್ಸ್‌ ತಮಿಳಿಗೆ ದೊಡ್ಡ ಮೊತ್ತಗೆ ಸೇಲ್‌ ಆಗಿದೆಯಂತೆ. ತಮಿಳಿನ ನಿರ್ಮಾಪಕ ಚಾರ್ಲಿ ಇಮ್ಯಾನುವೆಲ್‌ ಈ ಚಿತ್ರದ ರಿಮೇಕ್‌ ರೈಟ್ಸ್‌ ಖರೀದಿಸಿದ್ದು, ತಮಿಳಿನಲ್ಲಿ ಸತ್ಯ ಶಿವ ಈ ಚಿತ್ರವನ್ನು ನಿರ್ದೇಶಿಸಲಿ¨ªಾರೆ ಎನ್ನಲಾಗಿದೆ. ಸದ್ಯ ಬಿಡುಗಡೆಯಾಗಿ  ಹೊರಬಂದಿರುವ “ಬೆಲ್‌ ಬಾಟಂ’ ಹಾಡು ನಿಧಾನವಾಗಿ ಸಿನಿಪ್ರಿಯರನ್ನು ಸೆಳೆಯುತ್ತಿದೆ. ಇದೇ ಖುಷಿಯಲ್ಲಿ ಸದ್ಯ ಭರ್ಜರಿಯಾಗಿ ಪ್ರಮೋಷನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ಜನವರಿ ಅಥವಾ ಫೆಬ್ರವರಿ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.