ಟ್ರಂಕ್‌ನೊಳಗಿಂದ ಬಂದ ಹಾಡು


Team Udayavani, Feb 9, 2018, 9:10 AM IST

28.jpg

ಹಿರಿಯ ನಿರ್ದೇಶಕ, ನಿರ್ಮಾಪಕ ದಿವಂಗತ ಜಿ.ವಿ.ಅಯ್ಯರ್‌ ಅವರ ಮೊಮ್ಮಗಳು ರಿಷಿಕಾ ಶರ್ಮ ನಿರ್ದೇಶನದ “ಟ್ರಂಕ್‌’ ಚಿತ್ರದ ಮೊದಲ ಪೋಸ್ಟರ್‌ ಈಗಾಗಲೇ ಬಿಡುಗಡೆಯಾಗಿದೆ. ಇತ್ತೀಚೆಗೆ ಆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಹಿರಿಯ ಗೀತರಚನೆಕಾರ ಕೆ.ಕಲ್ಯಾಣ್‌ ಅವರು ಆಡಿಯೋ ಸಿಡಿ ಬಿಡುಗಡೆ ಮಾಡುವ ಮೂಲಕ ಹೊಸಬರ ತಂಡಕ್ಕೆ ಶುಭಹಾರೈಸಿದ್ದಾರೆ.

ನಿರ್ದೇಶಕಿ ರಿಷಿಕಾ ಶರ್ಮ ಅವರು ತಮ್ಮ ಮೊದಲ ಚಿತ್ರದ ಕುರಿತು ಅಂದು ಹೇಳಿದ್ದಿಷ್ಟು. “ಇದು ನಿಜ ಘಟನೆ ಇಟ್ಟುಕೊಂಡು ಮಾಡಿದ ಚಿತ್ರ. ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯ ಚಿತ್ರಣವಿದು. ಆ ಭಾಗದಲ್ಲಿರುವ  ಮನೆಯೊಂದರಲ್ಲಿ ಒಂದು ಘಟನೆ ನಡೆದಿತ್ತು. ಅದೇ ಚಿತ್ರದ ಹೈಲೈಟ್‌. ಒಂದು ಟ್ರಂಕ್‌ನಿಂದ ಶುರುವಾಗುವ ಕಥೆ ಅದಾಗಿದ್ದು, ಇಪ್ಪತ್ತು ವರ್ಷದ ಹಿಂದೆ ನಡೆದಂತಹ ಕುತೂಹಲದ ಘಟನೆಯನ್ನು ಚಿತ್ರ ಮಾಡಲಾಗಿದೆ. ಒಂದು ಟ್ರಂಕ್‌ ಸುತ್ತ ನಡೆಯೋ ಘಟನೆಗಳೇ ಚಿತ್ರದ ಜೀವಾಳ. ಚಿತ್ರದಲ್ಲಿ ಟ್ರಂಕ್‌ ಕೇಂದ್ರಬಿಂದು. ಆ ಟ್ರಂಕ್‌ನೊಳಗೊಂದು ವಿಚಿತ್ರ ಘಟನೆ ನಡೆಯುತ್ತೆ. ಅದೇನೆಂಬುದನ್ನು ಸಿನಿಮಾದಲ್ಲೇ ನೋಡಬೇಕು. ಇಲ್ಲಿ ಇನ್ನೊಂದು ವಿಶೇಷವೆಂದರೆ, ನಿಜವಾದ ಘೋಸ್ಟ್‌ ಹಂಟರ್ ಕೂಡ ಕೆಲಸ ಮಾಡಿದ್ದಾರೆ. ತೆರೆಯ ಮೇಲೂ ಅವರೂ ಕಾಣಿಸಿಕೊಂಡಿದ್ದಾರೆ. ತಂತ್ರ, ಮಂತ್ರ ಇಲ್ಲದೆ, ಸೈನ್ಸ್‌ ಮೂಲಕ ಹೊಸತನ್ನು ಹೇಳಿದ್ದೇವೆ’ ಅಂದರು ರಿಷಿಕಾ ಶರ್ಮ.

ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಾಯಕ ನಿಹಾಲ್‌ಗೆ “ಟ್ರಂಕ್‌’ ಹೊಸ ಅನುಭವ ಕಟ್ಟಿಕೊಟ್ಟಿದೆಯಂತೆ. ಒಂದೂವರೆ ವರ್ಷ, ಈ ಟ್ರಂಕ್‌ನಲ್ಲೇ ಕಳೆದಿದ್ದಾರಂತೆ. “ಮಹಿಳೆಯೊಬ್ಬಳು ನಿರ್ದೇಶನ ಮಾಡಿದ ಚಿತ್ರ ಅಂತ ಹೇಳಲು ಸಾಧ್ಯವಿಲ್ಲ. ಯಾಕೆಂದರೆ, ಎಲ್ಲವನ್ನೂ ಒಟ್ಟಿಗೆ ನಿರ್ವಹಿಸಿ, ಎಲ್ಲರನ್ನೂ ಒಂದೇ ಕಡೆ ಸೇರಿಸಿ, ನೀಟ್‌ ಸಿನಿಮಾ ಮಾಡಿದ್ದಾರೆ. ಅಷ್ಟೊಂದು ಕೆಲಸವನ್ನು ತುಂಬಾ ಸುಲಭವಾಗಿ ಮಾಡಿದ್ದಾರೆ. ಕನ್ನಡದಲ್ಲಿ ಇದೊಂದು ಸುದ್ದಿ ಮಾಡುವ ಚಿತ್ರವಾಗುತ್ತೆ’ ಎಂದರು ನಿಹಾಲ್‌. ಇನ್ನು ನಿರ್ಮಾಪಕ ರಾಜೇಶ್‌ ಭಟ್‌ ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ಖುಷಿ ಇದೆಯಂತೆ. “ಇದು ಹಾರರ್‌ ಚಿತ್ರವಾದರೂ, ಕನ್ನಡದ ಮಟ್ಟಿಗೆ ಹೊಸ ಫೀಲ್‌ ಕೊಡುವ ಚಿತ್ರ’ ಎನ್ನುತ್ತಾರೆ ನಿರ್ಮಾಪಕರು. ಈ ಚಿತ್ರಕ್ಕೆ ಕಾರ್ತಿಕ್‌, ಗಣೇಶನ್‌ ಮತ್ತು ಪ್ರದೀಪ್‌ ಈ ಮೂವರು ಸೇರಿ ಸಂಗೀತ ನೀಡಿದ್ದಾರೆ. ಹಾಲಿವುಡ್‌ ಮತ್ತು ಬಾಲಿವುಡ್‌ ಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿರುವ ಅಲ್ವಿನ್‌ ಅವರು ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪ್ರದೀಪ್‌ ಗೀತೆ ರಚಿಸಿದ್ದಾರೆ. ಕುಮಾರ್‌ ತಮ್ಮ ಆದ್ಯ ಆಡಿಯೋ ಕಂಪೆನಿ ಮೂಲಕ ಮೊದಲ ಆಡಿಯೋ ಸಿಡಿ ಬಿಡುಗಡೆ ಮಾಡಿದ್ದಾರೆ. ಚಿತ್ರಕ್ಕೆ ವೈಶಾಲಿ ದೀಪಕ್‌ ನಾಯಕಿ. ಉಳಿದಂತೆ ಅರುಣ ಬಾಲರಾಜ್‌, ರಂಗಭೂಮಿಯ ಹಿರಿಯ ಕಲಾವಿದೆ ಸುಂದರಶ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಭಜರಂಗ್‌, ಸಂದೀಪ್‌ ಕ್ಯಾಮೆರಾ ಹಿಡಿದಿದ್ದಾರೆ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.