ಕಿನಾರೆಯಲ್ಲಿ ಮುಗ್ಧ ಮನಸುಗಳ ಪ್ರೀತಿ ಕಥೆ , ತೀರದ ದಾಹ


Team Udayavani, Jan 13, 2017, 3:45 AM IST

Kinaare-(24).jpg

ಹೊಸ ವರ್ಷದ ಆರಂಭದಲ್ಲಿ ಹೊಸಬರು ಮೆಲ್ಲನೆ ಸದ್ದು ಮಾಡಲು ಶುರುವಿಟ್ಟುಕೊಂಡಿದ್ದಾರೆ. ವರ್ಷದ ಹಿಂದೆ ಶುರುವಾಗಿದ್ದ ಹೊಸಬರ “ಕಿನಾರೆ’, ಈಗಾಗಲೇ ಶೇ.70 ರಷ್ಟು ಮುಗಿದಿದೆ. ಅದೇ ಖುಷಿಯಲ್ಲಿ ಚಿತ್ರತಂಡ ಟೀಸರ್‌ವೊಂದನ್ನು ರಿಲೀಸ್‌ ಮಾಡೋಕೆ ಪತ್ರಕರ್ತರ ಮುಂದೆ ಬಂದಿತ್ತು. ದೇವರಾಜ್‌ ಪೂಜಾರಿ ನಿರ್ದೇಶನದ ಜತೆ ನಿರ್ಮಾಣವನ್ನೂ ಮಾಡಿದ್ದಾರೆ. ಮೊದಲು ಮಾತು ಶುರುಮಾಡಿದ ನಿರ್ದೇಶಕರು, ತಮ್ಮ “ಕಿನಾರೆ’ ಕುರಿತು ಹೇಳುತ್ತಾ ಹೋದರು.

“ಇದೊಂದು ಮುಗ್ಧ ಮನಸುಗಳ ನಡುವಿನ ಪ್ರೀತಿಯ ಕಥೆ. ಈ ಚಿತ್ರಕ್ಕಾಗಿ ವರ್ಷಗಟ್ಟಲೆ ಕಾದು, ಅದ್ಭುತ ತಾಣಗಳಲ್ಲೇ ಚಿತ್ರೀಕರಿಸಲಾಗಿದೆ. ನನ್ನ ಕನಸು ಪರದೆ ಮೇಲೆ ತರಲು ಪ್ರಯತ್ನಿಸಿದ್ದೇನೆ. ಇಲ್ಲಿ ಕಥೆಯೇ ಹೀರೋ. ವಿಭಿನ್ನ ಪಾತ್ರಗಳು ಇಲ್ಲಿರಲಿವೆ. ಇದು ಕಲಾತ್ಮಕತೆಯ ಜತೆಗೆ ಮನರಂಜನೆಯನ್ನೂ ಕಟ್ಟಿಕೊಡಲಿದೆ. ಒಬ್ಬ ಮುಗ್ಧ ಹುಡುಗನ ನಡುವೆ ಪ್ರೀತಿ ಚಿಗುರಿದಾಗ, ಏನೆಲ್ಲಾ ಆಗಿಹೋಗುತ್ತವೆ ಎಂಬುದು ಒನ್‌ಲೈನ್‌. ಇಲ್ಲಿ ಮಾತುಗಳಿಗಿಂತ ಭಾವನೆಗಳೇ ಹೆಚ್ಚು ಮಾತಾಡುತ್ತವೆ’ ಎಂದರು ದೇವರಾಜ್‌ ಪೂಜಾರಿ.

ಚಿತ್ರದ ನಾಯಕ ಸತೀಶ್‌ ರಾಜ್‌ಗೆ ಇದು ಮೊದಲ ಚಿತ್ರವಂತೆ. ಅವರಿಗೆ ಈ ಸಿನಿಮಾ, ನಿರ್ದೇಶಕರು ಹಾಗೂ ಚಿತ್ರತಂಡ ದೇವರು ಕೊಟ್ಟ ಗಾಡ್‌ಗಿಫ್ಟ್ ಅಂತೆ. ಇದೊಂದು ವಿಭಿನ್ನ ಕಥೆ, ಭಿನ್ನವಾಗಿರುವಂತಹ ಪಾತ್ರ. ಅದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡೇ ಕ್ಯಾಮೆರಾ ಮುಂದೆ ನಿಂತಿದ್ದೇನೆ. ನಾನಿಲ್ಲಿ ನಿರ್ದೇಶಕರು ಹೇಳಿದ್ದನ್ನಷ್ಟೇ ಮಾಡಿದ್ದೇನೆ. ಚಿತ್ರದ ಟೀಸರ್‌ ನೋಡಿದಾಗ ಎಷ್ಟೊಂದು ಅದ್ಭುತವಾಗಿದೆ ಎಂದೆನಿಸಿತು. ಚಿತ್ರ ಕೂಡ ಅಷ್ಟೇ ಚೆನ್ನಾಗಿ ಮೂಡಿಬಂದಿದೆ. ನಮ್ಮ ಹೊಸ ತಂಡಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು ಸತೀಶ್‌ ರಾಜ್‌.

ನಾಯಕಿ ಗೌತಮಿಗೂ ಇದು ಮೊದಲ ಸಿನಿಮಾ. “ಸುಂದರ ಮನಸ್ಸುಗಳ ನಡುವೆ ಬರುವ ಪ್ರೀತಿಯ ತಿಲ್ಲಾನ ಕುರಿತು ಕಥೆ ಸಾಗಲಿದೆ. ಎಲ್ಲಾ ಚಿತ್ರಗಳಲ್ಲಿರುವಂತೆ ಇಲ್ಲಿ ಪಾತ್ರಗಳಾಗಲಿ, ಕಥೆಯಾಗಲಿ ಅಥವಾ ತಾಣಗಳಾಗಲಿ ಇಲ್ಲ. ಪ್ರತಿಯೊಂದು ಹೊಸತನ ಎನ್ನುವಂತೆ ಮೂಡಿಬಂದಿದೆ. ಅದೇ ಚಿತ್ರದ ಸ್ಪೆಷಲ್ಲು’ ಎಂದರು ಗೌತಮಿ.

ಇನ್ನು, ಗಿರೀಶ್‌ ಮಂಗಳೂರು, ಇದುವರೆಗೆ ಸಿನಿಮಾದ ಎಲ್ಲಾ ವಿಭಾಗಗಳಲ್ಲೂ ಕೆಲಸ ಮಾಡಿದ್ದಾರಂತೆ. ಮೊದಲು ಈ ಚಿತ್ರದ ಶೀರ್ಷಿಕೆ ಕೇಳಿದಾಗ, ಹಿಂದಿ ಸಿನಿಮಾನ ಎಂಬ ಅನುಮಾನ ಬಂತಂತೆ. ಕೊನೆಗೆ ಇದು ಕಡಲ ತೀರದ ಕಥೆ ಆಗಿದ್ದರಿಂದ “ಕಿನಾರೆ’ ಟೈಟಲ್‌ ಸೂಕ್ತವೆನಿಸಿ, ಚಿತ್ರದಲ್ಲಿ ಮೊದಲ ಬಾರಿಗೆ ಫ‌ುಲ್‌ಟೈಮ್‌ ಖಳನಟರಾಗಿ ಕಾಣಿಸಿಕೊಂಡಿದ್ದಾರಂತೆ. ಅದರಲ್ಲೂ ಇಲ್ಲಿ ಕುಂಚಾಪುರ ಭಾಷೆ ಮಾತಾಡಿರುವುದು ಖುಷಿಕೊಟ್ಟಿದೆ ಅಂದರು ಗಿರೀಶ್‌ ಮಂಗಳೂರು.

ಪ್ರಮೋದ್‌ ಶೆಟ್ಟಿಗೆ ಇಲ್ಲಿ ವಯಸ್ಸಿಗೆ ಮೀರಿದ ಪಾತ್ರ ಸಿಕ್ಕಿದೆಯಂತೆ. ಅದು ಪಾಸಿಟಿವ್‌ ಪಾತ್ರವಾಗಿದ್ದು, ಅವರಿಲ್ಲಿ ಬುದ್ಧಿವಾದ ಹೇಳುವಂತಹ ಮೇಷ್ಟ್ರು ಆಗಿ ನಟಿಸಿದ್ದಾರಂತೆ. ಒಳ್ಳೇ ತಂಡ ಮತ್ತು ಒಳ್ಳೇ ಕಥಾಹಂದರ ಇರುವ ಚಿತ್ರದಲ್ಲಿ ನಾನಿದ್ದೇನೆ ಅಂತ ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಅಂದರು ಅವರು.

ಸಂಗೀತ ನಿರ್ದೇಶಕ ಸುರೇಂದ್ರನಾಥ್‌ ಇಲ್ಲಿ ಆರು ಹಾಡುಗಳನ್ನು ಕೊಟ್ಟಿದ್ದಾರಂತೆ. ಜಯಂತ್‌ ಕಾಯ್ಕಿಣಿ, ನಾಗೇಂದ್ರ ಪ್ರಸಾದ್‌, ಕಲ್ಯಾಣ್‌, ಯೋಗರಾಜ್‌ ಭಟ್‌ ಗೀತೆ ರಚಿಸಿದ್ದಾರೆ. ಇನ್ನು, ಅಭಿಷೇಕ್‌ ಕಾಸರಗೋಡು ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ವಿಕ್ರಂ ಕತ್ತರಿ ಪ್ರಯೋಗಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.