ಊರು ಉದ್ಧಾರಕ

ಹಳ್ಳಿ ಹುಡುಗನ ಸಾಹಸ ಕಥೆ

Team Udayavani, Oct 25, 2019, 5:17 AM IST

q-74

ಹಳ್ಳಿಯನ್ನು ಪ್ರಗತಿಯತ್ತ ಕೊಂಡೊಯ್ಯಬೇಕೆಂಬ ಅಂಶ ಕನ್ನಡಕ್ಕೆ ಹೊಸದಲ್ಲದಿದ್ದರೂ, ಹೊಸತನದೊಂದಿಗೆ ಹೊಸ ವಿಷಯದ ಮೂಲಕ ನೋಡುಗರನ್ನು ಗಮನಸೆಳೆಯಲು ಇಲ್ಲೊಂದು ಹೊಸತಂಡದ ಆಗಮನವಾಗಿದೆ. ಆ ಚಿತ್ರಕ್ಕೆ “ರಣಶ್ವ’ ಎಂದು ಹೆಸರಿಡಲಾಗಿದೆ. “ರಣಶ್ವ’ ಅಂದರೆ, ಯುದ್ಧದಲ್ಲಿ ಹೋರಾಡುವ ಕುದುರೆ ಎಂದರ್ಥ. ಹಾಗಂತ, ಇಲ್ಲಿ ಯಾವುದೇ ಅಶ್ವದ ಹೋರಾಟ, ಓಡಾಟ ಇರೋದಿಲ್ಲ. ಚಿತ್ರದ ನಾಯಕ ಯುದ್ಧದಲ್ಲಿ ಅಶ್ವ ಹೋರಾಡುವಂತೆಯೇ, ಅವನೂ ಕೆಲ ಸಮಸ್ಯೆಗಳ ನಿವಾರಣೆಗಾಗಿ ಹೋರಾಡುವುದರಿಂದ ಕಥೆಗೆ ಪೂರಕ ಎಂಬಂತೆ “ರಣಶ್ವ’ ಎಂಬ ಶೀರ್ಷಿಕೆ ಇಡಲಾಗಿದೆ.

ಅಂದಹಾಗೆ, ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದೆ. ರಾಜ್‌ ಮನು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಮೊದಲ ಅನುಭವ. ಈ ಹಿಂದೆ ಶಿವಮಣಿ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದರು. ಆ ಅನುಭವದ ಮೇಲೆ “ರಣಶ್ವ’ ಹಿಂದೆ ನಿಂತಿದ್ದಾರೆ. ಕಥೆ ಬಗ್ಗೆ ಹೇಳುವ ಅವರು, “ದೇಶಾದ್ಯಂತ ಅದೆಷ್ಟೋ ಹಳ್ಳಿಗಳು ಅಭಿವೃದ್ಧಿಯಾಗಿವೆ. ಈಗಲೂ ಪ್ರಗತಿಯತ್ತ ದಾಪುಗಾಲು ಇಡುತ್ತಿವೆ. ಆದರೆ, ಚಿತ್ರದ ಕಥೆಯಲ್ಲಿ ಒಂದು ಹಳ್ಳಿ ಮಾತ್ರ ಯಾವುದೇ ಪ್ರಗತಿ ಕಾಣದೆ ಸೌಲಭ್ಯಗಳಿಂದ ವಂಚಿತವಾಗಿರುತ್ತೆ. ಚಿತ್ರದ ಹೀರೋ, ಅಲ್ಲಿಗೆ ಒಮ್ಮೆ ಭೇಟಿ ಕೊಟ್ಟಾಗ, ಆ ಊರಿನ ಸಮಸ್ಯೆ ಅರಿವಾಗುತ್ತೆ. ಇನ್ನಷ್ಟು ಆಳವಾಗಿ ಯಾಕೆ ಈ ಹಳ್ಳಿ ಇನ್ನೂ ಅಭಿವೃದ್ಧಿ ಹೊಂದಿಲ್ಲ ಎಂಬುದನ್ನು ತಿಳಿಯಲು ಮುಂದಾದಾಗ, ಆ ಹಳ್ಳಿ ತನ್ನದೇ ಊರು ಅನ್ನೋದು ಗೊತ್ತಾಗುತ್ತೆ. ಆಮೇಲೆ ಅವನು ಹೇಗೆ ತನ್ನ ಹಳ್ಳಿಯನ್ನು ಅಭಿವೃದ್ಧಿ ಪಡಿಸುತ್ತಾನೆ, ಕೃಷಿಯಿಂದ ಎಷ್ಟೆಲ್ಲಾ ಲಾಭ ಇದೆ ಇತ್ಯಾದಿ ವಿಷಯದ ಮೂಲಕ ಗಮನಸೆಳೆಯುವುದು ಕಥೆಯ ಸಾರಾಂಶ. ಬಹುತೇಕ ಶೇ.75ರಷ್ಟು ಗ್ರಾಮೀಣದಲ್ಲೇ ಚಿತ್ರೀಕರಣ ನಡೆಯಲಿದೆ. ರಾಮನಗರ, ಬೆಂಗಳೂರು, ಸಕಲೇಶಪುರ, ಕೊಡಗು ಇತರೆ ಕಡೆಗಳಲ್ಲಿ 35 ದಿನಗಳ ಕಾಲ ಚಿತ್ರೀಕರಿಸಲು ತಯಾರಿ ನಡೆಸಲಾಗಿದೆ’ ಎಂದು ವಿವರ ಕೊಟ್ಟರು ರಾಜ್‌ ಮನು.

ವಿಜಯ್‌ ದೇವ್‌ ಚಿತ್ರದ ನಾಯಕ. ಅವರಿಗೆ ಇದು ಎರಡನೇ ಸಿನಿಮಾ. ಚಿತ್ರದ ಕಥೆ, ಪಾತ್ರದಲ್ಲಿ ಗಟ್ಟಿತನವಿದೆ. ಹಳ್ಳಿಯೊಂದಕ್ಕೆ ಕಾಲಿಡುವ ಹೀರೋ, ಅಲ್ಲಿರುವ ಹಲವು ಸಮಸ್ಯೆಗಳನ್ನು ನಿವಾರಿಸಿ, ಹೇಗೆ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಾನೆ ಎಂಬ ಪಾತ್ರವನ್ನು ನಿರ್ದೇಶಕರು ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ’ ಎಂದು ಹೇಳಿಕೊಂಡರು ವಿಜಯ್‌ ದೇವ್‌.

ಇನ್ನು, ನಾಯಕಿಯಾಗಿ ದ್ರಾವ್ಯಶೆಟ್ಟಿ ಅವರಿಗೆ ಇಲ್ಲಿ ಮುಗ್ಧ ಹುಡಗಿಯ ಪಾತ್ರ ಸಿಕ್ಕಿದೆಯಂತೆ. ದೀಪಕ್‌ ಶೆಟ್ಟಿ ಅವರಿಗಿಲ್ಲಿ ಖಳಟನಟನ ಪಾತ್ರವಿದೆ. ಚಿತ್ರಕ್ಕೆ ಸುರೇಶ್‌ ಸಂಗೀತವಿದೆ. ಹರೀಶ್‌ ಗೌಡ ಸಾಹಿತ್ಯವಿದೆ. ರಂಗಸ್ವಾಮಿ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಲಯೇಂದ್ರ, “ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಗೋವಿಂದೇಗೌಡ, “ಮಜಾ ಭಾರತ’ ಕಲಾವಿದರಾದ ಮಂಜು ಪಾವಗಡ, ರಾಘವೇಂದ್ರ, ಹಿರಿಯ ಕಲಾವಿದ ಹೊನ್ನವಳ್ಳಿ ಕೃಷ್ಣ ಇತರರು ನಟಿಸುತ್ತಿದ್ದಾರೆ. ಎಂ.ನಾಗರಾಜ್‌ ಜೈ ದೇವರಾಜ್‌ ಫಿಲಂಸ್‌ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.