ಹಳ್ಳಿ ಹೈದ ಪ್ರೀತಿ ಗೆದ್ದ


Team Udayavani, Jul 21, 2017, 5:40 AM IST

suchitra-20-page-3.gif

ಕಳೆದ ಎರಡು ವರ್ಷಗಳ ಹಿಂದೆ ಶುರುವಾದ “ಹುಲಿದುರ್ಗ’ ಚಿತ್ರ ಇದೀಗ ಬಿಡುಗಡೆಗೆ ರೆಡಿಯಾಗಿದೆ. ಇತ್ತೀಚೆಗೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದ್ದರು ನಿರ್ದೇಶಕ ವಿಕ್ರಮ್‌ ಯಶೋಧರ್‌. ಅಂದು ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರ್‌ ತೋರಿಸಲಾಯಿತು. ಅದಾದ ಮೇಲೆ, ಚಿತ್ರತಂಡದವರೆಲ್ಲರನ್ನೂ ವೇದಿಕೆಗೆ ಆಹ್ವಾನಿಸಲಾಯಿತು. ಮೊದಲು ಮೈಕ್‌ ಹಿಡಿದು ಮಾತಿಗೆ ನಿಂತದ್ದು, ನಿರ್ಮಾಪಕ ಕೆ.ಸುಧಾಕರ್‌. “ಒಬ್ಬ ಸಾಮಾನ್ಯ ಹಳ್ಳಿಯೊಂದರ ಅನಾಥ ಹುಡುಗ, ಕಷ್ಟಗಳನ್ನು ಎದುರಿಸಿ, ಆ ನಂತರ ತನ್ನ ಬದುಕನ್ನು ಹೇಗೆ ರೂಪಿಸಿಕೊಳ್ಳುತ್ತಾನೆ ಅನ್ನೋದು ಚಿತ್ರದ ಸಾರಾಂಶ’ ಎಂದು ವಿವರ ಕೊಟ್ಟರು ಸುಧಾಕರ್‌.

ನಿರ್ದೇಶಕ ವಿಕ್ರಮ್‌ ಯಶೋಧರ್‌ಗೆ ಚಿತ್ರದ ಮೇಲೆ ಸಿಕ್ಕಾಪಟ್ಟೆ ನಂಬಿಕೆ ಇದೆಯಂತೆ. “ಒಂದು ಹಳ್ಳಿಯಲ್ಲಿರುವ ಟೆಂಟ್‌ವೊಂದರಲ್ಲಿ ನಾಯಕ ಸಿನಿಮಾ ಪೋಸ್ಟರ್‌ ಅಂಟಿಸುವ ಕೆಲಸ ಮಾಡುತ್ತಲೇ, ಪ್ರೀತಿಯ ಹಿಂದೆ ಬೀಳುತ್ತಾನೆ. ಆಮೇಲೆ ಪ್ರೀತಿಗೆ ಎದುರಾಗುವ ಸಮಸ್ಯೆಗಳನ್ನು ಹೇಗೆ ನಿವಾರಿಸಿಕೊಳ್ಳುತ್ತಾನೆ ಎಂಬುದು ಕಥೆಯ ತಿರುಳು’
ಎಂದರು ವಿಕ್ರಮ್‌ ಯಶೋಧರ್‌. ನಾಯಕ ಸುಪ್ರೀತ್‌ ಅಂದು ಖುಷಿಯ ಆಲೆಯಲ್ಲಿ ತೇಲುತ್ತಿದ್ದರು. ಅದಕ್ಕೆ ಕಾರಣ, 
“ಹುಲಿದುರ್ಗ’ ಮೂಡಿಬಂದಿರುವ ರೀತಿ. “ನಿರ್ಮಾಪಕರು ಮನಸ್ಸು ಮಾಡಿದ್ದರೆ, ಸ್ಟಾರ್‌ ನಟರನ್ನು ಇಟ್ಟುಕೊಂಡು ಸಿನಿಮಾ ಮಾಡಬಹುದಿತ್ತು. ಆದರೆ, ಹೊಸಬನಾಗಿರುವ ನನಗೆ ನಾಯಕನಾಗುವ ಅವಕಾಶ ಕೊಟ್ಟಿದ್ದಾರೆ. ಕಳೆದ 15 ವರ್ಷದ ಸ್ನೇಹಕ್ಕೆ ಈ ಚಿತ್ರ ಮಾಡಿರುವುದು ಅವರ ದೊಡ್ಡ ಗುಣ ಅಂತ ಗುಣಗಾನ ಮಾಡಿದರು ಸುಪ್ರೀತ್‌.

ಇನ್ನು, ನಾಯಕಿ ನೇಹಾ ಪಾಟೀಲ್‌ ಅವರಿಲ್ಲಿ, ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಟಿಸಿದ್ದಾರಂತೆ. ಟೆಂಟ್‌ನಲ್ಲೇ ಲವ್‌ ಶುರುವಾಗಿ, ಸಾಕಷ್ಟು ಕಷ್ಟಗಳು ಎದುರಾಗುತ್ತವೆ. ಅಲ್ಲಿ ಪ್ರೇಮಿಗಳು ಪ್ರೀತಿಯಲ್ಲಿ ಗೆಲುವು ಕಾಣುತ್ತಾರಾ ಇಲ್ಲವೋ ಎಂಬುದು ಕಥೆ ಎನ್ನುತ್ತಾರೆ ನೇಹಾಪಾಟೀಲ್‌.

ಚಿತ್ರದಲ್ಲಿ ಗುರುರಾಜ ಹೊಸಕೋಟೆ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರೆ, ಗಾಯಕ ಶಶಾಂಕ್‌ ಶೇಷಗಿರಿ ಚಿತ್ರರಂಗಕ್ಕೆ ಪರಿಚಯಿಸಿದ ನಾಗೇಂದ್ರಪ್ರಸಾದ್‌ ಅವರನ್ನು ಹೊಗಳಿದರು. ಗೀತರಚನೆಕಾರ ನಾಗೇಂದ್ರಪ್ರಸಾದ್‌ ಇಲ್ಲಿ ವಿಷ್ಣು ಅಭಿಮಾನಿಯಾಗಿರುವ ನಾಯಕನಿಗೊಂದು ವಿಷ್ಣುವರ್ಧನ್‌ ಅವರ ಚಿತ್ರಗಳ ಹೆಸರಲ್ಲೇ ಹಾಡೊಂದನ್ನು ಬರೆದ ಬಗ್ಗೆ ಹೇಳಿಕೊಂಡರು. ಅಂದಹಾಗೆ, ಸಾಯಿ ಆಡಿಯೋ ಸಂಸ್ಥೆ ಹಾಡುಗಳನ್ನು ಹೊರ ತಂದಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.