ಮನೆಯಿಂದ ಹೊರಬನ್ನಿ, ಕನ್ನಡ ಸಿನಿಮಾಗಳಿಗೆ ಜೈ ಅನ್ನಿ…ಇಂದಿನಿಂದ ಹೌಸ್‌ಫುಲ್‌ ಪ್ರದರ್ಶನ


Team Udayavani, Oct 1, 2021, 8:40 AM IST

ಮನೆಯಿಂದ ಹೊರಬನ್ನಿ, ಕನ್ನಡ ಸಿನಿಮಾಗಳಿಗೆ ಜೈ ಅನ್ನಿ…ಇಂದಿನಿಂದ ಹೌಸ್‌ಫುಲ್‌ ಪ್ರದರ್ಶನ

ಇಂದಿನಿಂದ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಆರಂಭವಾಗಲಿದೆ. ಈ ಮೂಲಕ ಮತ್ತೂಮ್ಮೆ ಕನ್ನಡ ಚಿತ್ರರಂಗದ ಮೊಗದಲ್ಲಿ ನಗುಮೂಡಿದೆ. ಒಂದಷ್ಟು

ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಹೊಸಬರು, ಸ್ಟಾರ್‌ಗಳು ಒಟ್ಟೊಟ್ಟಿಗೆ ಸಿನಿಜಾತ್ರೆ ಮಾಡಲು ಹೊರಟಿದ್ದಾರೆ. ಅವರಿಗಿರುವ ಒಂದೇ ಒಂದು ಭರವಸೆ ಎಂದರೆ ಕನ್ನಡ ಪ್ರೇಕ್ಷಕ.

ಹೌದು, ಇಡೀ ಚಿತ್ರರಂಗ ನಂಬಿರೋದು ಪ್ರೇಕ್ಷಕರನ್ನು. ಡಾ.ರಾಜ್‌ ಅವರು ಹೇಳಿದಂತೆ ಅಭಿಮಾನಿಗಳೇ ದೇವರು. ಈಗ ಕನ್ನಡ ಚಿತ್ರರಂಗವನ್ನು ಮೇಲೆತ್ತುವ ಜವಾಬ್ದಾರಿ ಸಿನಿಮಾ ಮಂದಿಗಿಂತ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅಭಿಮಾನಿಗಳು ದೊಡ್ಡ ಮನಸ್ಸು ಮಾಡಿ, ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಬೇಕು. ಅಭಿಮಾನಿ ವರ್ಗ ಮನಸ್ಸು ಮಾಡಿದರೆ ಚಿತ್ರರಂಗ ಮತ್ತೆ ಹಳೆಯ ದಿನಗಳನ್ನು ಕಾಣೋದು ಕಷ್ಟದ ಕೆಲಸವಲ್ಲ.

ಇಷ್ಟು ವರ್ಷಗಳಲ್ಲಿ ಕನ್ನಡ ಚಿತ್ರರಂಗವನ್ನು ಬೆಳೆಸಿಕೊಂಡು, ಆಯಾಯ ಸಮಯಕ್ಕೆ ಸ್ಟಾರ್‌ಗಳನ್ನು ಹುಟ್ಟುಹಾಕಿಕೊಂಡು, ಒಳ್ಳೆಯ ಚಿತ್ರಗಳನ್ನು ಗೆಲ್ಲಿಸಿಕೊಂಡು ಬಂದವರು ಪ್ರೇಕ್ಷಕರು. ಆದರೆ, ಈ ಬಾರಿ ಪ್ರೇಕ್ಷಕರ ಬೆಂಬಲ ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಬೇಕಿದೆ. ಅದಕ್ಕೆ ಕಾರಣ ಕೋವಿಡ್‌ನಿಂದ ನಲುಗಿ ಹೋದ ಚಿತ್ರರಂಗ. ಕಳೆದ ಒಂದೂವರೆ ವರ್ಷದಿಂದ ಕೋವಿಡ್‌ ಎಲ್ಲಾ ಕ್ಷೇತ್ರಗಳನ್ನು ಇನ್ನಿಲ್ಲದಂತೆ ಕಾಡಿದೆ. ಅದರಿಂದ ಕನ್ನಡ ಚಿತ್ರರಂಗ ಕೂಡಾ ಹೊರತಾಗಿಲ್ಲ.

ಬೇರೆ ಕ್ಷೇತ್ರಗಳಲ್ಲಿ ಕೇವಲ ಕಾಸು ಅಷ್ಟೇ ನಷ್ಟವಾಗಿರಬಹುದು. ಆದರೆ, ಚಿತ್ರರಂಗದ ವಿಷಯಕ್ಕೆ ಬರುವುದಾದರೆ ಕಾಸು-ಕನಸು ಎರಡೂ ನಷ್ಟವಾಗಿದೆ. ಒಳ್ಳೆಯ ಸಿನಿಮಾ ಮಾಡಬೇಕೆಂದು ಕನಸು ಕಟ್ಟಿಕೊಂಡು ಚಿತ್ರರಂಗಕ್ಕೆ ಬಂದ ಅದೆಷ್ಟೋ ಪ್ರತಿಭೆಗಳು ಕೋವಿಡ್‌ನಿಂದಾಗಿ ಭರವಸೆ ಕಳೆದುಕೊಂಡಿದ್ದಾರೆ. ಹೊಸಬರನ್ನು ಪ್ರೋತ್ಸಾಹಿಸಬೇಕೆಂದು ಸಿನಿಮಾ ಮಾಡಲು ಮುಂದಾದ ನಿರ್ಮಾಪಕರು ವಿಶ್ವಾಸ ಕಳೆದು ಕೊಳ್ಳುವಂತಾಗಿದೆ. ಇವೆಲ್ಲವೂ ಮರಳಿ ಬರಬೇಕಾದರೆ ಪ್ರೇಕ್ಷಕರು ಸಿನಿಮಾಗಳನ್ನು ಗೆಲ್ಲಿಸಬೇಕು. ಒಂದು ಸಿನಿಮಾ ಗೆದ್ದರೆ ಹತ್ತು ಮಂದಿಗೆ ವಿಶ್ವಾಸ ಬರುತ್ತದೆ. ಆ ಹತ್ತು ಮಂದಿ ಸಿನಿಮಾ ಮಾಡಲು ಬಂದರೆ ನೂರಾರು ಸಿನಿ ಕಾರ್ಮಿಕರಿಗೆ, ತಂತ್ರಜ್ಞರಿಗೆ, ಕಲಾವಿದರಿಗೆ ಕೆಲಸ ಸಿಗುತ್ತದೆ. ಹೀಗೆ ಸತತವಾಗಿ ಸಿನಿಮಾಗಳು ಗೆಲ್ಲುತ್ತಾ ಹೋದರೆ ಚಿತ್ರರಂಗ ಮೊದಲಿನ ಸ್ಥಿತಿಗೆ ಬರೋಕೆ ಹೆಚ್ಚು ಸಮಯ ಬೇಕಾಗಿಲ್ಲ.

ರಥ ಎಳೆಯೋರು ಪ್ರೇಕ್ಷಕರೇ: ಸಿನಿಮಾ ಮಂದಿಯ ಒಂದೊಳ್ಳೆಯ ಕರ್ತವ್ಯ ಸಿನಿಮಾ ಮಾಡಿ ಅದನ್ನು ಪ್ರೇಕ್ಷಕನ ಮುಂದಿಡೋ ದಷ್ಟೇ. ಅದರಾಚೆಗಿನ ಜವಾಬ್ದಾರಿ ಏನಿದ್ದರೂ ಪ್ರೇಕ್ಷಕನದ್ದು. ಒಂದೊಳ್ಳೆಯ ಸಿನಿಮಾವನ್ನು ಬೆನ್ನುತಟ್ಟುವ ಮೂಲಕ, ಬಾಯಿ ಮಾತಿನ ಪ್ರಚಾರದ ಮೂಲಕ ಆ ಸಿನಿಮಾವನ್ನು ಪ್ರೋತ್ಸಾಹಿಸಿದಾಗ ಸಿನಿಮಾ ಮಂದಿ ದಡ ಸೇರಬಹುದು.

ಕನ್ನಡ ಚಿತ್ರರಂಗವನ್ನೇ ನಂಬಿ ಕೋಟಿಗಟ್ಟಲೇ ಬಂಡವಾಳ ಹೂಡಿರೋದು ಒಂದು ಕಡೆಯಾದರೆ, ಚಿತ್ರರಂಗದಲ್ಲೇ ಭವಿಷ್ಯ ಕಂಡುಕೊಳ್ಳುತ್ತೇನೆ ಎಂಬ ಭರವಸೆಯಿಂದ ಕೈ ತುಂಬಾ ಸಂಬಳ ಬರುತ್ತಿದ್ದ ನೌಕರಿ ಬಿಟ್ಟು ಚಿತ್ರರಂಗಕ್ಕೆ ಬಂದಿದ್ದಾರೆ. ಇವರೆಲ್ಲರ ಭರವಸೆಯೊಂದೇ ಅದು ಕನ್ನಡ ಸಿನಿಮಾ ಪ್ರೇಕ್ಷಕ. ಇವತ್ತು ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ಗಳಾಗಿರುವವರ, ಕೋಟಿಗಟ್ಟಲೇ ಬಿಝಿನೆಸ್‌ ಮಾಡಿರುವ ಸಿನಿಮಾಗಳ ಹಿಂದೆ ಇರೋದು ಇದೇ ಪ್ರೇಕ್ಷಕ ವರ್ಗ. ಹಾಗಾಗಿ, ಕೋವಿಡ್‌ ಬಳಿಕ ಈಗಷ್ಟೇ ಚೇತರಿಕೆಯ ಹಾದಿಯತ್ತ ಮುಖ ಮಾಡಿದೆ. ಹಾಗಾಗಿ, ಅಭಿಮಾನಿ ದೇವರುಗಳು ಕನ್ನಡ ಸಿನಿಮಾಗಳನ್ನು ಕೈ ಹಿಡಿಯಬೇಕಿದೆ. ಗೆಲುವಿನ ಟಾನಿಕ್‌ ಇರೋದು ಪ್ರೇಕ್ಷಕನ ಕೈಯಲ್ಲಿ. ಆ ಟಾನಿಕ್‌ ಅನ್ನು ಪಡೆಯಬೇಕಾದರೆ ಸಿನಿಮಾ ಮಂದಿ ಕೂಡಾ ತುಂಬಾ ಎಚ್ಚರಿಕೆಯ ಹೆಜ್ಜೆಗಳನ್ನಿಟ್ಟು, ಪ್ರೇಕ್ಷಕನನ್ನು ಮನವೊಲಿಸಬೇಕಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.