ಅಲ್ಲೊಬ್ಬ ಕೌರವ, ಇಲ್ಲೊಬ್ಬ ಮರು ಕೌರವ, ಮಹೇಂದ್ರಜಾಲ!


Team Udayavani, Jan 13, 2017, 3:45 AM IST

Once-More-Kaurava-(31).jpg

“ಆ ಕೌರವಗೂ ಈ ಕೌರವಗೂ ಯಾವುದೇ ಸಂಬಂಧವಿಲ್ಲ. ಅವರಿಗೆ ಮಾಡಿದ ಕಥೆ ಹಾಗೆಯೇ ಇದೆ. ಇದು ಬೇರೆಯದ್ದೇ ಕಥೆ …’

– ನಿರ್ದೇಶಕ ಮಹೇಂದರ್‌ ಹೀಗೆ ಹೇಳಲು ಕಾರಣ “ಒನ್ಸ್‌ ಮೋರ್‌ ಕೌರವ’. ಇದು ಮಹೇಂದರ್‌ ನಿರ್ದೇಶನದ ಸಿನಿಮಾ. ಈ ಹಿಂದೆ  ಬಿ.ಸಿ.ಪಾಟೀಲ್‌ ಅವರಿಗೆ “ಕೌರವ’ ಎಂಬ ಸಿನಿಮಾ ನಿರ್ದೇಶಿಸಿದ್ದ ಮಹೇಂದರ್‌ ಈಗ ನರೇಶ್‌ ಎನ್ನುವವರಿಗೆ “ಒನ್ಸ್‌ ಮೋರ್‌ ಕೌರವ’ ಮಾಡುತ್ತಿದ್ದಾರೆ. ಅಷ್ಟಕ್ಕೂ “ಒನ್ಸ್‌ ಮೋರ್‌ ಕೌರವ’ ಚಿತ್ರವನ್ನು ಬಿ.ಸಿ.ಪಾಟೀಲ್‌ ಅವರಿಗೆ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಮಹೇಂದರ್‌ ಉತ್ತರಿಸಿದ್ದಾರೆ. “ಕೌರವ ನಂತರ ಬಿ.ಸಿ.ಪಾಟೀಲ್‌ ಅವರಿಗೆ ಮತ್ತೂಂದು ಸಿನಿಮಾ ಮಾಡಬೇಕೆಂದು ಕಥೆ ರೆಡಿಮಾಡಿಕೊಂಡು ಹೋದೆ. ಕಥೆ ಕೇಳಿದ ಅವರು ಒಂದಷ್ಟು ಕರೆಕ್ಷನ್ಸ್‌ ಹೇಳಿದರು. ಕೊನೆಗೆ ಕಾರಣಾಂತರಗಳಿಂದ ಆ ಸಿನಿಮಾ ಆಗಲಿಲ್ಲ. ಆದರೆ, ಆ ಕಥೆ ಇವತ್ತಿಗೂ ಹಾಗೇ ಇದೆ. ಅದನ್ನು ನಾಳೆ ಬೇಕಾದರೂ ಮಾಡಬಹುದು. “ಒನ್ಸ್‌ ಮೋರ್‌ ಕೌರವ’ದ ಕಥೆಯೇ ಬೇರೆ. ಈ ಚಿತ್ರದಲ್ಲೂ ಬಿ.ಸಿ.ಪಾಟೀಲ್‌ ಅವರಲ್ಲಿ ಒಂದು ಪಾತ್ರ ಮಾಡುವಂತೆ ಕೇಳಿದೆವು. ಆದರೆ, ಅದು ಕೂಡಾ ಕಾರಣಾಂತರಗಳಿಂದ ಆಗಲಿಲ್ಲ. ಕೊನೆಗೆ ಅವರು ಮಾಡಬೇಕಾಗಿದ್ದ ಪಾತ್ರವನ್ನು ಬೇರೆಯವರಿಂದ ಮಾಡಿಸಿದೆವು. ಒಂದಂತೂ ಸ್ಪಷ್ಟವಾಗಿ ಹೇಳುತ್ತೇನೆ, ಬಿ.ಸಿ.ಪಾಟೀಲ್‌ ಅವರಿಗೆ ಮಾಡಿದ ಕಥೆ ಹಾಗೆಯೇ ಇದೆ. ಇದು “ಕೌರವ’ದ ಒನ್‌ಲೈನ್‌ ಇಟ್ಟುಕೊಂಡು ಸಿದ್ಧಪಡಿಸಿದ ಕಥೆ. ಅದು ಬಿಟ್ಟರೆ ಆ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು “ಕೌರವ’ನ ಕುರಿತು ದೀರ್ಘ‌ ವಿವರಣೆ ಕೊಟ್ಟರು ಮಹೇಂದರ್‌. 

“ಒನ್ಸ್‌ ಮೋರ್‌ ಕೌರವ’ ಸಿನಿಮಾದ ಕತೆ ಹಳ್ಳಿಯಲ್ಲಿ ನಡೆಯುತ್ತಿದ್ದು, ಹಳ್ಳಿಗೆ ಬರುವ ಇನ್ಸ್‌ಪೆಕ್ಟರ್‌ ಆ ಹಳ್ಳಿಯನ್ನು ಹೇಗೆ ಉದ್ಧಾರ ಮಾಡುತ್ತಾನೆ ಮತ್ತು ಆ ಸಂದರ್ಭದಲ್ಲಿ ಅವನಿಗೆ ಸಿಗುವ ಬೆಂಬಲ ಹಾಗೂ ಎದುರಾಗುವ ತೊಂದರೆಗಳ ಸುತ್ತ ಈ ಸಿನಿಮಾ ಸಾಗಲಿದೆಯಂತೆ. ಚಿತ್ರದಲ್ಲಿ ಹಿರಿಯ ನಟರ ಜೊತೆ ರಂಗಭೂಮಿಯ ಅನೇಕ ನಟರನ್ನು ಬಳಸಿಕೊಳ್ಳಲಾಗಿದೆಯಂತೆ. ಈ ಚಿತ್ರವನ್ನು ನರೇಶ್‌ ಅವರು ನಿರ್ಮಿಸುವ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ಕಥೆ ಇಷ್ಟವಾದ ಕಾರಣ ತಾನೇ ನಿರ್ಮಿಸಿದ್ದಾಗಿ ಹೇಳಿಕೊಂಡರು ನರೇಶ್‌.

ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ಮೂರು ವರ್ಷದ ಹಿಂದೆ ಮಹೇಂದರ್‌ ಈ ಕಥೆಯನ್ನು ಹೇಳಿದ್ದರಂತೆ. ಆ ನಂತರ ಇಬ್ಬರೂ ಕುಳಿತು ಕಥೆಗೆ ಅಂತಿಮ ರೂಪುರೇಷೆ ಕೊಟ್ಟಿದ್ದಾಗಿ ಹೇಳಿದರು ಮಧು. ಈ ಹಿಂದೆ ಮಹೇಂದರ್‌ ಜೊತೆ ಕೆಲಸ ಮಾಡಿದ ಸಿನಿಮಾಗಳು ತನಗೆ ಒಳ್ಳೆಯ ಹೆಸರು ತಂದುಕೊಟ್ಟಿದ್ದು “ಒನ್ಸ್‌ ಮೋರ್‌ ಕೌರವ’ ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತದೆಂಬ ನಂಬಿಕೆ ಮಧು ಅವರಿಗಿದೆಯಂತಯಂತೆ. 

ಚಿತ್ರದಲ್ಲಿ ಅನುಷಾ ನಾಯಕಿಯಾಗಿ ನಟಿಸಿದ್ದು, ಬೋಲ್ಡ್‌ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. ಚಿತ್ರಕ್ಕೆ ಕೃಷ್ಣಕುಮಾರ್‌ ಅವರ ಛಾಯಾಗ್ರಹಣ, ಶ್ರೀಧರ್‌ ಸಂಭ್ರಮ್‌ ಅವರ ಸಂಗೀತವಿದೆ. ಚಿತ್ರದ ಎಲ್ಲಾ ಹಾಡುಗಳನ್ನು ಕೆ.ಕಲ್ಯಾಣ್‌ ಬರೆದಿದ್ದು, ಕಥೆಗೆ ಪೂರಕವಾಗಿದೆಯಂತೆ. ಮಾಲೂರು ಶ್ರೀನಿವಾಸ್‌ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.