ಈ ಪ್ರೀತಿ ಬೇರೆ ರೀತಿ

ನೋವು ನಲಿವು, ಸುಖ ದುಃಖ

Team Udayavani, Jun 21, 2019, 5:00 AM IST

32

ಪ್ರೀತಿ… ಇದು ಎಲ್ಲರಿಗೂ ಅನ್ವಯಿಸುವ ಪದ. ಪ್ರೀತಿ ಎಂಬುದು ಒಂದಕ್ಕೆ ಸೀಮಿತವಾದುದಲ್ಲ. ಅದು ಹುಡುಗ, ಹುಡುಗಿಯ ಪ್ರೀತಿ, ಅಣ್ಣ, ತಮ್ಮನ, ಅಕ್ಕ, ತಂಗಿಯ, ಅಪ್ಪ, ಅಮ್ಮನ ಪ್ರೀತಿ ಹೀಗೆ ಎಲ್ಲಾ ಕಡೆಯೂ ಈ ಪ್ರೀತಿ ಇದ್ದೇ ಇರುತ್ತೆ. ಈಗ ಇಲ್ಲೇಕೆ ಪ್ರೀತಿ ಬಗ್ಗೆ ಇಷ್ಟೊಂದು ಪೀಠಿಕೆ ಎಂಬ ಪ್ರಶ್ನೆಗೆ ಕಾರಣ, “ಪ್ರೀತಿ ಇರಬಾರದೇ’ ಚಿತ್ರ. ಹೌದು, ಹೊಸಬರೇ ಸೇರಿ ಮಾಡಿದ ಚಿತ್ರವಿದು. ಈ ಚಿತ್ರಕ್ಕೆ ನವೀನ್‌ ನಯಾನಿ ನಿರ್ದೇಶಕರು. ಡಾ.ಲಿಂಗೇಶ್ವರ್‌ ನಿರ್ಮಾಣ ಮಾಡಿದ್ದಾರೆ. ಚಿತ್ರ ಪೂರ್ಣಗೊಂಡಿದ್ದು, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ವಿಶೇವೆಂದರೆ, ಇದು ಕನ್ನಡ, ತಮಿಳು ಮತ್ತು ತೆಲುಗು ಭಾಷೆಯಲ್ಲೂ ತಯಾರಾಗಿದೆ. ಇತ್ತೀಚೆಗೆ ಚಿತ್ರದ ಬಗ್ಗೆ ಹೇಳಿಕೊಳ್ಳಲೆಂದೇ ಚಿತ್ರತಂಡ ಪತ್ರಕರ್ತರ ಮಂದೆ ಬಂದಿತ್ತು.

ನಿರ್ದೇಶಕ ನವೀನ್‌ ನಯಾನಿ ಅವರಿಗೆ ಈ ಚಿತ್ರ ಎಲ್ಲರಿಗೂ ಹೆಸರು ತಂದುಕೊಡುತ್ತದೆ ಎಂಬ ನಂಬಿಕೆ ಇದೆಯಂತೆ. ಇದು ಈಗಿನ ಟ್ರೆಂಡ್‌ ಕಥೆ. ಪ್ರೀತಿ ಇರಬಾರದೇ ಎಂಬ ಶೀರ್ಷಿಕೆಯಲ್ಲೇ ಎಲ್ಲಾ ಅರ್ಥವಿದೆ. ನವಿರಾದ ಲವ್‌ಸ್ಟೋರಿಯಲ್ಲಿ ಸಾಕಷ್ಟು ಏರಿಳಿತಗಳಿವೆ. ಅಷ್ಟೇ ಅಲ್ಲ, ನೋವು-ನಲಿವು ಸೇರಿದಂತೆ ಎಲ್ಲಾ ಅಂಶಗಳು ಕಥೆಗೆ ಪೂರಕವಾಗಿವೆ. ಟೀನೇಜ್‌ ಹುಡುಗ, ಹುಡುಗಿಯ ಪ್ರೀತಿ ಕಥೆ ಚಿತ್ರದ ಜೀವಾಳ. ಕೆ.ಕಲ್ಯಾಣ್‌ ಇಲ್ಲಿ ಏಳು ಹಾಡುಗಳನ್ನು ಬರೆದಿದ್ದಾರೆ. ಸಬೂ ವರ್ಗೀಸ್‌ ಒಳ್ಳೆಯ ಸಂಗೀತ ಕೊಟ್ಟಿದ್ದಾರೆ ಎಂದರು ನವೀನ್‌ ನಯಾನಿ.

ನಿರ್ಮಾಪಕ ಡಾ.ಲಿಂಗೇಶ್ವರ್‌ ಅವರಿಗೆ ಇದು ಮೊದಲ ಚಿತ್ರ. ಈ ಸಿನಿಮಾದಲ್ಲೊಂದು ಸಂದೇಶವಿದೆ. ತಂದೆ- ಮಗಳ ಕಥೆ ಹೈಲೈಟ್‌ ಆಗಿದೆ. ಸಮಾಜದಲ್ಲಿ ನಡೆಯುವ ಘಟನೆಗಳು ಚಿತ್ರದಲ್ಲಿವೆ. ಒಬ್ಬ ತಂದೆ, ಮಗಳ ಪ್ರೀತಿ ವಾತ್ಸಲ್ಯ ಹೇಗೆಲ್ಲಾ ಇರಬೇಕೆಂಬುದನ್ನು ಇಲ್ಲಿ ಹೇಳಲಾಗಿದೆ. ಹೊಸಬರ ಪ್ರಯತ್ನಕ್ಕೆ ಬೆಂಬಲ ಇರಲಿ ಎಂದರು ಅವರು.

ನಾಯಕ ತರುಣ್‌ ತೇಜ್‌ಗೆ ಅವಕಾಶ ಸಿಕ್ಕ ಖುಷಿಯಂತೆ. ಇಲ್ಲಿ ಎಲ್ಲವೂ ಚೆನ್ನಾಗಿ ಮೂಡಿಬಂದಿದೆ. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿರುವುದು ನನ್ನ ಅದೃಷ್ಟ. ನಿಮ್ಮೆಲ್ಲರ ಸಹಕಾರ ನಮಗೆ ಬೇಕು ಎಂದರು ತರುಣ್‌ ತೇಜ್‌. ನಾಯಕಿ ಲಾವಣ್ಯ ಅವರು ಅವಕಾಶ ಕೊಟ್ಟ ಎಲ್ಲರಿಗೂ ಥ್ಯಾಂಕ್ಸ್‌ ಎಂದಷ್ಟೇ ಹೇಳಿದರು. ಅಂದು ಹಾಡುಗಳ ಬಿಡುಗಡೆ ಕಾರ್ಯಕ್ರಮ ಇದ್ದುದರಿಂದ ಗೀತಸಾಹಿತಿ ನಾಗೇಂದ್ರಪ್ರಸಾದ್‌ ಅವರು, ಹೊಸಬರ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಇರಲಿ ಎಂದರು. ಅಂದು ಮಂಡಳಿಯ ಭಾ.ಮಹರೀಶ್‌, ಅವಿನಾಶ್‌, ಸಾಬು ವರ್ಗೀಸ್‌ ಇತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.