ನನಗೆ ತೃಪ್ತಿ ಕೊಟ್ಟ ಸಿನಿಮಾವಿದು: 100 ಬಗ್ಗೆ ರಮೇಶ್‌ ವಿಶ್ವಾಸ


Team Udayavani, Nov 19, 2021, 12:31 PM IST

ನನಗೆ ತೃಪ್ತಿ ಕೊಟ್ಟ ಸಿನಿಮಾವಿದು: 100 ಬಗ್ಗೆ ರಮೇಶ್‌ ವಿಶ್ವಾಸ

ರಮೇಶ್‌ ಅರವಿಂದ್‌ ಎಕ್ಸೈಟ್‌ ಆಗಿದ್ದಾರೆ. ಅದಕ್ಕೆ ಕಾರಣ, ಅವರ ನಟನೆ, ನಿರ್ದೇಶನದ “100′ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ರಮೇಶ್‌ ಅರವಿಂದ್‌ ಅವರಿಗೆ ಇದು ಹೊಸ ಜಾನರ್‌ನ ಸಿನಿಮಾವಾದ್ದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದ ಕಥೆ ಸೈಬರ್‌ ಕ್ರೈಂಗೆ ಸಂಬಂಧಿಸಿದ್ದರೂ, ಒಂದಷ್ಟು ಫ್ಯಾಮಿಲಿ ಅಂಶಗಳು ಕೂಡಾ ತುಂಬಿ ಕೊಂಡಿವೆ. ಇವತ್ತಿನ ಡಿಜಿಟಲ್‌ ಯುಗದಲ್ಲಿ ಅತಿಯಾದ ಮೊಬೈಲ್‌ ಬಳಕೆ, ಮುಂದೆ ಹೇಗೆ ನಮ್ಮ ನೆಮ್ಮದಿ ಕಿತ್ತುಕೊಳ್ಳಬಹುದು ಎಂಬ ಅಂಶವನ್ನು ಚಿತ್ರದಲ್ಲಿ ಹೇಳಿದ್ದಾರೆ.

ಈ ಚಿತ್ರದ ಬಗ್ಗೆ “ಇಲ್ಲಿವರೆಗೆ ನಾನು 100ಕ್ಕೂ ಹೆಚ್ಚು ಚಿತ್ರ ಮಾಡಿದ್ದೇನೆ. ಆದರೆ, ಯಾವುದೇ ಸಿನಿಮಾದಲ್ಲೂ ನಾನು ಒಬ್ಬ ಖಡಕ್‌ ವಿಲನ್‌ ಎದುರು ನಿಂತು ಫೈಟ್‌ ಮಾಡಿಲ್ಲ. ಏಕೆಂದರೆ ನನ್ನ ಸಿನಿಮಾಗಳಲ್ಲಿ ಸನ್ನಿವೇಶ, ಸಂದರ್ಭಗಳೇ ವಿಲನ್‌ ಆಗಿರುತ್ತಿದ್ದವು. ಆದರೆ, “100′ ಅದಕ್ಕೆ ವಿರುದ್ಧ. ಇಲ್ಲೊಬ್ಬ ವಿಲನ್‌ ಇದ್ದಾನೆ. ಅವನ ಜೊತೆ ನಾನು ದೈಹಿಕವಾಗಿ ಹೊಡೆದಾಡಿದ್ದೇನೆ. ಫೈಟ್‌ ಮಾಸ್ಟರ್‌ ಇಟ್ಟು ಸಾಹಸ ಸಂಯೋಜಿಸಲಾಗಿದೆ. ಈ ತರಹದ ಅನುಭವ ನನಗೆ ಹೊಸದು ಎಂದರೆ ತಪ್ಪಲ್ಲ. ಆ ಫೈಟ್ಸ್‌ ನನಗೆ ಮಜಾ ಕೊಟ್ಟಿದ್ದು ಸುಳ್ಳಲ್ಲ’ ಎನ್ನುವುದು ರಮೇಶ್‌ ಅರವಿಂದ್‌ ಅವರ ಮಾತು.

ಇದನ್ನೂ ಓದಿ:ಇಂದು ಮನುರಂಜನ್‌ ಅಭಿನಯದ ‘ಮುಗಿಲ್‌ಪೇಟೆ’ ರಿಲೀಸ್‌

ಚಿತ್ರದ ಕಂಟೆಂಟ್‌ ಬಗ್ಗೆ ಮಾತನಾಡುವ ರಮೇಶ್‌, “ಹುಡುಗಿಯರನ್ನು ಹುಡುಗರು ಫಾಲೋ ಮಾಡೋದು, ತೊಂದರೆ ಕೊಡೋದು ಎಂಬ ಒಂದು ಕಾಲವಿತ್ತು. ಈಗ ಫಾಲೋ ಮಾಡೋದು, ತೊಂದರೆ ಕೊಡೋದು ಎಲ್ಲವೂ ಸೋಶಿಯಲ್‌ ಮೀಡಿಯಾ ಮೂಲಕ ಆಗುತ್ತಿದೆ. ಹೆಣ್ಣು ಮಕ್ಕಳು ಯಾರನ್ನೋ ಫ್ರೆಂಡ್‌ ಆಗಿ ಒಪ್ಪಿಕೊಳ್ಳುತ್ತಾರೆ. ಆ ನಂತರ ಫ್ರೆಂಡ್‌ಶಿಪ್‌ನ ಕಟ್‌ ಮಾಡೋಕೂ ಆಗಲ್ಲ, ಅನ್‌ಫ್ರೆಂಡ್‌ ಮಾಡೋಕೂ ಆಗಲ್ಲ. ಈ ತರಹ ವಿಪರೀತ ತೊಂದರೆಯಲ್ಲಿ ಕೆಲವು ಹೆಣ್ಮಕ್ಕಳು ಸಿಲುಕಿದ್ದಾರೆ. ಇದನ್ನು “ಸೈಬರ್‌ ಸ್ಟಾಕಿಂಗ್‌’ ಎನ್ನುತ್ತಾರೆ. ಕಂಪ್ಯೂಟರ್‌, ಮೊಬೈಲ್‌ ಮೂಲಕ ಸತತವಾಗಿ ಹುಡುಗಿಯರ ಮೇಲೆ ಕಣ್ಣಿಟ್ಟು ಅವರಿಗೆ ತೊಂದರೆ ಕೊಡುವ ಒಂದಷ್ಟು ಮಂದಿ ಇದ್ದಾರೆ. ಆ ತರಹದ ಕಥಾ ವಸ್ತುವನ್ನಿಟ್ಟುಕೊಂಡು ಹೆಣೆದಿರುವ ಕಥೆ 100′. ಈ ಹಿಂದೆ ಅನೇಕ ಫ್ಯಾಮಿಲಿ ಸಿನಿಮಾಗಳನ್ನು ನಿರ್ದೇಶಿಸಿದ್ದೇನೆ, ನಟಿಸಿದ್ದೇನೆ. ಆದರೆ, ಮೊದಲ ಬಾರಿಗೆ ಫ್ಯಾಮಿಲಿ ಜೊತೆಗೆ ಒಂದು ಕ್ರೈಮ್‌ ಥ್ರಿಲ್ಲರ್‌ ಕಥೆಯನ್ನು ನಿಭಾಯಿಸಿದ್ದು ಈ ಸಿನಿಮಾ ನನಗೆ ಸವಾಲಾಗಿತ್ತು ರಮೇಶ್‌ ಅರವಿಂದ್‌ ಮಾತು.

ಈ ಚಿತ್ರವನ್ನು ರಮೇಶ್‌ ರೆಡ್ಡಿ ನಿರ್ಮಿಸಿದ್ದು, ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ. ಚಿತ್ರದಲ್ಲಿ ರಚಿತಾ ರಾಮ್‌, ಪೂರ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.