ಅಣ್ಣನ ಸಿನಿಮಾಕ್ಕೆ ತಮ್ಮನ ಹಾರೈಕೆ


Team Udayavani, Mar 1, 2019, 12:30 AM IST

v-24.jpg

ರಾಘವೇಂದ್ರ ರಾಜಕುಮಾರ್‌ ಅಭಿನಯದ “ಅಮ್ಮನ ಮನೆ’ ಬಿಡುಗಡೆಗೆ ಸಜ್ಜಾಗಿರುವ ಬೆನ್ನಲ್ಲೆ ಇದೀಗ “ತ್ರಯಂಬಕಂ’ ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ನಿರ್ದೇಶಕ ದಯಾಳ್‌ ಪದ್ಮನಾಭನ್‌ ಚಿತ್ರದ ಟ್ರೇಲರ್‌ ಬಿಡುಗಡೆಗೆ ಪುನೀತ್‌ರಾಜಕುಮಾರ್‌ ಅವರನ್ನು ಆಹ್ವಾನಿಸಿದ್ದರು. ಢಮರುಗ ಬಾರಿಸುವುದರೊಂದಿಗೆ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು ಪುನೀತ್‌. “ಚಿತ್ರದ ಟ್ರೇಲರ್‌ ನೋಡಿ ಖುಷಿಯಾಗಿದೆ. ಟ್ರೇಲರ್‌ ಕುತೂಹಲ ಮೂಡಿಸುತ್ತದೆ. ಇನ್ನು, ರಾಘಣ್ಣ ಅವರಿಗೆ ಅನಾರೋಗ್ಯ ಎದುರಾದಾಗ ಭಯವಿತ್ತು. ಆಮೇಲೆ, ರಾಘಣ್ಣ ಅದನ್ನು ಎದುರಿಸಿ, ಇದೀಗ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ನನಗೆ ಶಿವಣ್ಣ ಮತ್ತು ರಾಘಣ್ಣ ಎರಡು ಪಿಲ್ಲರ್‌ಗಳಿದ್ದಂತೆ. ಮುಂದಿನ ದಿನಗಳಲ್ಲಿ ರಾಘಣ್ಣ ಹೀಗೆಯೇ ಚಿತ್ರಗಳಲ್ಲಿ ಬಿಜಿಯಾಗಿರಲಿ’ ಎಂದು ಹಾರೈಸಿದರು ಪುನೀತ್‌.

ರಾಘವೇಂದ್ರರಾಜಕುಮಾರ್‌ಗೆ “ತ್ರಯಂಬಕಂ’ ಚಿತ್ರ ಮೇಲೆ ವಿಶ್ವಾಸ ಹೆಚ್ಚಿದೆ. “ಇಲ್ಲಿ ನಾಯಕ, ನಾಯಕಿ ಎಂಬುದಿಲ್ಲ. ಕಥೆಯೇ ಎಲ್ಲವೂ ಆಗಿದೆ. ಅನುಪಮ ಗೌಡ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಡಬ್ಬಿಂಗ್‌ ವೇಳೆ ಅನುಪಮ ಅವರ ನಟನೆ ನೋಡಿ ಖುಷಿಯಾಯ್ತು. ಚೆನ್ನಾಗಿ ನಿರ್ವಹಿಸಿದ್ದಾರೆ. ಒಳ್ಳೆಯ ತಂಡದಲ್ಲಿ ನಾನೂ ಇದ್ದೇನೆ ಎಂಬುದೇ ಖುಷಿಯ ವಿಷಯ. ನಿರ್ಮಾಪಕರಿಗೆ ಇದು ಸಿನಿಮಾವಾದರೆ, ನನಗಿದು ಪ್ರಸಾದ ಎಂದರು ರಾಘವೇಂದ್ರ ರಾಜಕುಮಾರ್‌. 

ನಿರ್ದೇಶಕ ದಯಾಳ್‌ ಪದ್ಮನಾಭನ್‌ ಅವರಿಗೆ, ನಿರ್ಮಾಪಕರು ಒಂದು ಕಥೆ ಬರೆದು ಕೊಟ್ಟಾಗ, ಅದರಲ್ಲಿ ಇಂಗ್ಲೀಷ್‌ ಚಿತ್ರವೊಂದರ ಸ್ಪೂರ್ತಿ ಇದ್ದದ್ದು ಗೊತ್ತಾಯಿತಂತೆ. ಕೊನೆಗೆ ನಾನು ಇದನ್ನು ಹೀಗೆ ಮಾಡೋದಿಲ್ಲ. ಬೇಕಾದರೆ, ಸ್ವಲ್ಪ ಬದಲಾವಣೆ ಮಾಡಿಕೊಂಡು ಮಾಡುತ್ತೇನೆ. ಅನುಮತಿ ಕೊಟ್ಟರೆ, ನಿರ್ದೇಶನ ಮಾಡುತ್ತೇನೆ ಅಂದಾಗ, ನಿರ್ಮಾಪಕರು ಒಪ್ಪಿದ್ದಕ್ಕೆ ಈ ಚಿತ್ರವಾಗಿದೆ. ಇನ್ನು,  ನವೆಂಬರ್‌ದಲ್ಲಿ ಶುರುಮಾಡಿದ  ಈ ಚಿತ್ರಕ್ಕೆ 24 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.  ಐತಿಹಾಸಿಕ, ಪೌರಾಣಿಕ ಕಥೆಯ ಅಂಶ ಇಟ್ಟುಕೊಂಡು ಇಲ್ಲಿ ಎರಡನ್ನೂ ಸೇರಿಸಿ ಚಿತ್ರ ಮಾಡಲಾಗಿದೆ’ ಎಂಬುದು ದಯಾಳ್‌ ಮಾತು.

ಈ ಚಿತ್ರಕ್ಕೆ ನವೀನ್‌ಕೃಷ್ಣ ಸಂಭಾಷಣೆ ಬರೆದಿದ್ದಾರೆ. ಚಿತ್ರದ ಬಗ್ಗೆ ಹೇಳುವ ಅವರು, “ನಿರ್ದೇಶಕ ದಯಾಳ್‌ ಅವರು, ಸಣ್ಣ ಕಲ್ಪನೆ ಇಟ್ಟುಕೊಂಡೇ ದೊಡ್ಡದ್ದಾಗಿ ಯೋಚಿಸುತ್ತಾರೆ. ಅದನ್ನು ದೊಡ್ಡ ಚಿತ್ರವನ್ನಾಗಿಸುವಲ್ಲಿ ಪ್ರಯತ್ನಿಸುತ್ತಾರೆ. ಆ ಪ್ರಯತ್ನದಲ್ಲಿ ಯಶಸ್ಸನ್ನೂ ಕಂಡಿದ್ದಾರೆ. ಇಲ್ಲಿ ಸಾಕಷ್ಟು ಚರ್ಚೆ ನಡೆಸಿ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯಲಾಗಿದೆ ಎಂದರು ನವೀನ್‌ಕೃಷ್ಣ. ನಿರ್ಮಾಪಕ ಸಂದೀಪ್‌, ಸಂಗೀತ ನಿರ್ದೇಶಕ ಗಣೇಶ್‌ ನಾರಾಯಣ್‌, ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಬಾ.ಮಾ.ಹರೀಶ್‌, ಶಿವಮಣಿ, ರೋಹಿತ್‌ ಸಿನಿಮಾ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.