ಥ್ರಿಲ್ಲರ್ ಮಂಜು ನಿರ್ದೇಶನದ ‘ಡೆಡ್ಲಿ ಕಿಲ್ಲರ್’ ಟೀಸರ್ ಔಟ್
Team Udayavani, Nov 11, 2022, 4:23 PM IST
ಬಹು ಸಮಯದ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಕಂ ಹಾರರ್-ಥ್ರಿಲ್ಲರ್ ಸಿನಿಮಾವೊಂದಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅಂದಹಾಗೆ, ಆ ಸಿನಿಮಾದ ಹೆಸರು “ಡೆಡ್ಲಿ ಕಿಲ್ಲರ್’.
ಐದು ಜನ ವಿಲನ್ಗಳು ಹಾಗೂ ಮಹಿಳೆಯೊಬ್ಬಳ ಸುತ್ತ ಹೆಣೆಯಲಾದ “ಡೆಡ್ಲಿ ಕಿಲ್ಲರ್’ ಸಿನಿಮಾದ ಬಹುತೇಕ ಕೆಲಸಗಳು ಈಗಾಗಲೇ ಪೂರ್ಣಗೊಂಡಿದ್ದು, ಇತ್ತೀಚೆಗೆ ನಟ ಜಗ್ಗೇಶ್ ಸಿನಿಮಾದ ಮೊದಲ ಟೀಸರ್ ಬಿಡುಗಡೆ ಮಾಡಿದರು.
ಇದೇ ವೇಳೆ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಥ್ರಿಲ್ಲರ್ ಮಂಜು, “ಐದು ಜನ ವಿಲನ್ಗಳು ಜೊತೆಗೊಬ್ಬ ಹುಡುಗಿಯನ್ನು ಪೊಲೀಸರು ಆಂಧ್ರದಲ್ಲಿ ಅರೆಸ್ಟ್ ಮಾಡಿ ಕರ್ನಾಟಕಕ್ಕೆ ಕರೆತರುವಾಗ ಮಾರ್ಗ ಮಧ್ಯೆ ಅವರು ಕಾಡಿನಲ್ಲಿ ಎಸ್ಕೇಪ್ ಆಗುತ್ತಾರೆ. ಅಲ್ಲಿಂದ ಅವರು ಕಾಡಿನಲ್ಲಿರುವ ಮನೆಯೊಂದರಲ್ಲಿ ಆಶ್ರಯ ಪಡೆಯುವ ಜೊತೆಗೆ ಆ ಮನೆಯಲ್ಲೇ ಎಲ್ಲರೂ ಲಾಕ್ ಆಗಿಬಿಡುತ್ತಾರೆ. ಅಲ್ಲಿ ಅವರಿಗೆ ಮತ್ತಷ್ಟು ವಿಚಿತ್ರ ಅನುಭವಗಳಾಗುತ್ತವೆ. ಅಲ್ಲಿಂದ ಮುಂದೆ ಅವರು ಪೋಲೀಸರಿಗೆ ಸಿಗ್ತಾರಾ, ಇಲ್ಲವಾ ಅನ್ನೋದೇ ಸಿನಿಮಾದ ಕ್ಲೈಮ್ಯಾಕ್ಸ್. ಇಡೀ ಸಿನಿಮಾವನ್ನು ಬಹುಭಾಗವನ್ನು ಕಾಡು ಹಾಗೂ ಮನೆಯೊಂದರಲ್ಲಿ ಶೂಟ್ ಮಾಡಿದ್ದೇವೆ’ ಎಂದು ವಿವರಣೆ ನೀಡಿದರು.
ಉತ್ತರ ಕರ್ನಾಟಕದ ಪ್ರತಿಭೆ ಅಭಯ್ ವೀರ್, ನಿವೀಕ್ಷಾ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ 3 ಹಾಡುಗಳಿಗೆ ವಿನು ಮನಸು ಸಂಗೀತ ಸಂಯೋಜಿಸಿದ್ದಾರೆ
“ಎರಡು ವರ್ಷದ ಹಿಂದೆಯೇ ನಿರ್ದೇಶಕರು ಈ ಕಥೆಯ ಎಳೆ ಹೇಳಿ, ಇದಕ್ಕೆ ನೀನೇ ಸೂಟ್ ಆಗ್ತಿàಯ ಅಂತ ಅಂದಿದ್ದರು. ಒಂದೇ ಹಂತದಲ್ಲಿ 25 ದಿನ ಮಾತಿನ ಭಾಗ ಮತ್ತು ಆ್ಯಕ್ಷನ್ ಸೀನ್ಗಳನ್ನು ಶೂಟ್ ಮಾಡಿದ್ದೇವೆ. ಚಿತ್ರದಲ್ಲಿ 6 ಫೈಟ್ಸ್ಯಿದ್ದು, ಕಾಡುಜನರ ಜೊತೆ, ಗೆರಿಲ್ಲಾ ಫೈಟ್, ಮಳೆಯಲ್ಲಿ ಸೇರಿ ಎಲ್ಲಾ ಸಾಹಸಗಳು ವಿಭಿನ್ನವಾಗಿವೆ’ ಎಂಬುದು ನಾಯಕ ನಟ ಅಭಯ್ ವೀರ್ ವಿವರಣೆ.
“ಕೀರ್ತಿ ಸಿಲ್ವರ್ ಸ್ಕ್ರೀನ್’ ಮೂಲಕ ಪ್ರಶಾಂತ್ ಆರ್. ನಿರ್ಮಿಸಿರುವ “ಡೆಡ್ಲಿ ಕಿಲ್ಲರ್’ ಚಿತ್ರಕ್ಕೆ ಮಲ್ಲಿಕಾರ್ಜುನ್ ಛಾಯಾಗ್ರಹಣವಿದೆ.
ಜಿ. ಎಸ್.ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ