ಟೊಳ್ಳುಗಟ್ಟಿ ಈಗ ಮೂಕವಿಸ್ಮಿತ


Team Udayavani, May 3, 2019, 6:15 AM IST

Udayavani Kannada Newspaper

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ನಾಟಕ ಆಧಾರಿತ ಚಿತ್ರಗಳು ಬಂದಿವೆ. ಈಗ “ಮೂಕವಿಸ್ಮಿತ’ ಹೊಸ ಸೇರ್ಪಡೆ. ಹೌದು, ಇದು ಟಿ.ಪಿ.ಕೈಲಾಸಂ ಅವರ “ಟೊಳ್ಳು ಗಟ್ಟಿ’ ನಾಟಕ ಆಧರಿಸಿ ಮಾಡಿದ ಚಿತ್ರ. ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿ, ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ನಿರ್ದೇಶಕ ಗುರುದತ್ತ ಶ್ರೀಕಾಂತ್‌ಗೆ ಇದು ಮೊದಲ ಚಿತ್ರ. “ಇಪ್ಪತ್ತರ ದಶಕದಲ್ಲಿ ನಡೆಯುವ ಕಥೆಯನ್ನು ಪ್ರಸ್ತುತ ಕಾಲಘಟ್ಟಕ್ಕೆ ಹೊಂದಿಸಿ­ಕೊಂಡು ಮಾಡಿದ್ದಾರೆ. “ಇದು ಸುಮಾರು 97 ವರ್ಷಗಳ ಹಿಂದಿನ ನಾಟಕ. ಅದ್ಭುತ ನಾಟಕವಾಗಿದ್ದರಿಂದ ಚಿತ್ರ ಮಾಡಿದ್ದೇವೆ. ಬದುಕಿನ ಭಾವನೆಗಳ ಜೊತೆಗೆ ಮನರಂಜನೆಯೂ ಇಲ್ಲಿದೆ ಆ ಕಾಲದ ಕಥೆ ಈಗಿನ ಕಾಲಕ್ಕೆ ಹೇಗೆ ಸರಿಹೊಂದುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು.

ಒಳ್ಳೆಯದು ಮತ್ತು ಕೆಟ್ಟದು ಎನ್ನುವ ವ್ಯತ್ಯಾಸಗಳಲ್ಲಿ ಮನುಷ್ಯ ತನ್ನನ್ನು ತಾನು ಹೇಗೆ ಕಂಡುಕೊಳ್ಳುತ್ತಾನೆ ಎಂಬುದು ಸಾರಾಂಶ. ಒಬ್ಬ ನಿರ್ದೇಶಕನ ಪರಿಶ್ರಮ, ಒಬ್ಬ ಫೋಟೋಗ್ರಾಫ‌ರ್‌ನ ಹುಡುಕಾಟ, ಒಬ್ಬ ಹುಚ್ಚನ ನಿಜವಾದ ಮನಸ್ಥಿತಿ ಹೀಗೆ ಹಲವು ಸಂಗತಿಗಳು ಒಂದೇ ಕಥೆಯಲ್ಲಿ ಹೇಗೆ ಸೃಷ್ಟಿಯಾಗುತ್ತವೆ ಎಂಬುದು ಚಿತ್ರದ ಹೈಲೈಟ್‌’ ಎನ್ನುತ್ತಾರೆ ಗುರುದತ್ತ.
ಚಿತ್ರದಲ್ಲಿ ಸಂದೀಪ್‌ ಮಲಾನಿ ಅವರಿಗೊಂದು ವಿಶೇಷ ಪಾತ್ರ ಕಲ್ಪಿಸಲಾಗಿದೆಯಂತೆ.

ಅವರಿಗೆ ಹಿರಿಯಣ್ಣ ಎಂಬ ಪಾತ್ರ ಸಿಕ್ಕಿದ್ದು, ಆ ಪಾತ್ರ ನನಗೊಂದು ಗುರುತು ತಂದುಕೊಡುತ್ತದೆ ಎಂಬ ನಂಬಿಕೆ ಇಟ್ಟುಕೊಂಡಿರುವ ಸಂದೀಪ್‌ ಮಲಾನಿ, ನಾನಂತೂ ಚಿತ್ರ ನೋಡಲು ಕಾಯುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಇರಲಿ’ ಎಂದು ಮನವಿ ಮಾಡಿಕೊಂಡರು.

ನಾಯಕಿ ಶುಭರಕ್ಷ ಅವರಿಗೂ ಇಲ್ಲೊಂದು ವಿಶೇಷ ಪಾತ್ರವಿದೆಯಂತೆ. ಇದುವರೆಗೆ ಗ್ಲಾಮರ್‌ ಪಾತ್ರ ಮಾಡಿಕೊಂಡು ಬಂದಿದ್ದ ಅವರಿಗೆ ಇಲ್ಲಿ ಪಕ್ಕಾ ಡಿ ಗ್ಲಾಮ್‌ ಪಾತ್ರ ಸಿಕ್ಕಿದೆಯಂತೆ. ಪಕ್ಕಾ ಟ್ರೆಡಿಷನಲ್‌ ಹುಡುಗಿಯಾಗಿ ಕಾಣಿಸಿ­ಕೊಂಡಿದ್ದು, 1920ರ ಕಾಲಘಟ್ಟದ ಮಹಿಳೆಯಾಗಿ ಕಾಣಿಸಿಕೊಂಡಿದ್ದೇನೆ. ನೋಡುಗರಿಗೆ ಒಂದು ಹೊಸ ಫೀಲ್‌ ತಂದು­ಕೊಡುವ ಸಿನಿಮಾ ಇದಾಗಲಿದೆ ಎಂಬುದು ಶುಭರಕ್ಷ ಅವರ ಮಾತು.

ವಾಣಿಶ್ರೀ ಭಟ್‌ ಅವರಿಗೆ ಇದು ಮೊದಲ ಚಿತ್ರ. ರಂಗಭೂಮಿ ಹಿನ್ನಲೆ ಇರುವ ಅವರಿಗೆ ಸಿನಿಮಾ ಆಸಕ್ತಿ ಇರಲಿಲ್ಲವಂತೆ. ಆದರೆ, ಯಾವಾಗ ಇದು ಟಿ.ಪಿ.ಕೈಲಾಸಂ ಅವರ ನಾಟಕ ಆಧರಿತ ಸಿನಿಮಾ ಅಂತ ಗೊತ್ತಾಯಿತೋ, ಕಥೆ ಕೇಳಿ, ಪಾತ್ರ ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಚಿತ್ರದಲ್ಲಿ ಎರಡು ಶೇಡ್‌ ಪಾತ್ರಗಳಿದ್ದು, ಅದು ಹೇಗೆ ಇದೆ ಎಂಬುದನ್ನು ಸಿನಿಮಾದಲ್ಲೇ ನೋಡಬೇಕು’ ಎಂದರು ಅವರು.

ಚಂದ್ರಕೀರ್ತಿ ಅವರು ಕೂಡ ರಂಗಭೂಮಿ ಹಿನ್ನೆಲೆಯಿಂದ ಬಂದವರು. ಅವರಿಗೆ ಇದು ನಾಲ್ಕನೆಯ ಸಿನಿಮಾ. ಇಲ್ಲಿ ಕೆಲಸ ಮಾಡುವ ಮೊದಲು ಹದಿನೈದು ದಿನಗಳ ಕಾಲ ವರ್ಕ್‌ಶಾಪ್‌ ಮಾಡಿದ ಅನುಭವ ವಿಶೇಷವಾಗಿತ್ತು. ತಂದೆಗೆ ಒಳ್ಳೆಯ ಮಗನ ಪಾತ್ರ ಮಾಡಿರುವ ನನಗೆ ಚಿತ್ರದ ಮೇಲೆ ವಿಶ್ವಾಸವಿದೆ’ ಎಂದರು ಚಂದ್ರಕೀರ್ತಿ.

ಕಾರ್ತಿಕ್‌ ಅವರಿಗೂ ಸಿನಿಮಾ ಮಾಡುವ ಕನಸು ಈ ಮೂಲಕ ಈಡೇರಿದೆಯಂತೆ. ಚಿತ್ರದಲ್ಲಿ ಅವರು ಒಬ್ಬರನ್ನು ತುಳಿದು ಬದುಕಬೇಕೆಂಬ ಸ್ವಾರ್ಥ ಭಾವ ಇರುವ ಪಾತ್ರ ಮಾಡಿದ್ದಾರಂತೆ. ಚಿತ್ರಕ್ಕೆ ಡಾ.ಚಿನ್ಮಯ ಎಂ.ರಾವ್‌ ಸಂಗೀತ ನೀಡಿದ್ದಾರೆ. ವಿಜಯ್‌ರಾಜ್‌ ಹಿನ್ನೆಲೆ ಸಂಗೀತವಿದೆ. ಸಿದ್ದು ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.