ಇದು ದೇಶ ತಿರುಗಿ ನೋಡುವ ಸಿನಿಮಾ.. ತೋತಾಪುರಿ ಬಗ್ಗೆ ತಂಡದ ಒಕ್ಕೊರಲ ಧ್ವನಿ


Team Udayavani, Sep 9, 2022, 12:57 PM IST

totapuri kannada movie

ಇದು ಅಪರೂಪದಲ್ಲಿ ಅಪರೂಪದ ಸಿನಿಮಾ….’ – ನಟ ಜಗ್ಗೇಶ್‌ ಹೀಗೆ ಹೇಳಿ, ಪಕ್ಕದಲ್ಲಿದ್ದ ಪೋಸ್ಟರ್‌ ನೋಡಿದರು. ವಿಭಿನ್ನ ಲುಕ್‌ನ ಅವರ ಪೋಸ್ಟರ್‌ ಅಲ್ಲಿ ಕಂಗೊಳಿಸುತ್ತಿತ್ತು. ಅಂದಹಾಗೆ, ಜಗ್ಗೇಶ್‌ ಅಪರೂಪದ ಸಿನಿಮಾ ಎಂದಿದ್ದು, “ತೋತಾಪುರಿ’ಗೆ.

ಈಗಾಗಲೇ “ಬಾಗ್ಲು ತೆಗಿ ಮೇರಿ ಜಾನ್‌’ ಹಾಡು ಹಾಗೂ ಟ್ರೇಲರ್‌ ಮೂಲಕ ಚಿತ್ರರಂಗದ, ಸಿನಿ ಪ್ರೇಮಿಗಳ ಗಮನ ಸೆಳೆದಿರುವ “ತೋತಾಪುರಿ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಸೆ.30ರಂದು ಚಿತ್ರ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಅದಕ್ಕೂ ಮುನ್ನ ಚಿತ್ರತಂಡ ಮಾಧ್ಯಮದ ಮುಂದೆ ಬಂದು ಸಿನಿಮಾದ ಬಗೆಗಿನ ಮಾಹಿತಿ ಹಂಚಿಕೊಂಡಿತು.

“ಅದೆಷ್ಟೋ ಸಿನಿಮಾಗಳು ಬರುತ್ತವೆ, ಹೋಗುತ್ತವೆ. ಆದರೆ, ಕೆಲವು ಸಿನಿಮಾಗಳು ಮಾತ್ರ ನೆನಪಿನಲ್ಲಿ ಉಳಿಯುತ್ತವೆ. ಅಂತಹ ಸಿನಿಮಾಗಳಲ್ಲಿ “ತೋತಾಪುರಿ’ ಕೂಡಾ ಒಂದು. ಈ ಸಿನಿಮಾದ ಜರ್ನಿ ತುಂಬಾ ಅದ್ಭುತವಾಗಿತ್ತು. ಇದನ್ನು ಸಿನಿಮಾ ಎನ್ನುವುದಕ್ಕಿಂತ ಒಂದು ಸುಂದರ ಕಾದಂಬರಿ ಎನ್ನ ಬಹುದು. ನಿರ್ದೇಶಕ ವಿಜಯ ಪ್ರಸಾದ್‌ ತುಂಟತನದ ಜೊತೆಗೆ ಒಂದು ಸುಂದರ ಸಂದೇಶ ಕೊಟ್ಟಿದ್ದಾರೆ. ಇಡೀ ದೇಶ ಮೆಚ್ಚುವಂತಹ ಸಂದೇಶವದು’ ಎಂದು ಖುಷಿಯಿಂದ ಹೇಳಿಕೊಂಡರು ಜಗ್ಗೇಶ್‌.

ಇದೇ ವೇಳೆ ನಿರ್ಮಾಪಕ ಕೆ.ಎ.ಸುರೇಶ್‌ ಅವರ ಸಿನಿಮಾ ಪ್ರೀತಿ ಹಾಗೂ ತಾಳ್ಮೆಯ ಬಗ್ಗೆಯೂ ಮಾತನಾಡಿದರು. “ನಿರ್ಮಾಪಕ ಸುರೇಶ್‌ ಸಿನಿಮಾವನ್ನು ತುಂಬಾನೇ ಪ್ರೀತಿಸುವ ವ್ಯಕ್ತಿ. ಜೊತೆಗೆ ಅಷ್ಟೇ ತಾಳ್ಮೆ ಇರುವ ವ್ಯಕ್ತಿ. ಈ ಸಿನಿಮಾ ಅವರಿಗೆ ಒಳ್ಳೆಯದನ್ನೇ ಮಾಡುತ್ತದೆ. ಈ ಸಿನಿಮಾಕ್ಕೆ ಏನೇ ತೊಂದರೆ ಆದರೂ ನಾನು ಅವರ ಜೊತೆ ನಿಲ್ಲುತ್ತೇನೆ’ ಎಂದರು.

ನಿರ್ದೇಶಕ ವಿಜಯ ಪ್ರಸಾದ್‌ ಚಿತ್ರದಲ್ಲಿ ನಟಿಸಿದ ಪ್ರತಿಯೊಬ್ಬರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಜೊತೆಗೆ, ಮನುಷ್ಯ-ಮನುಷ್ಯರನ್ನು ಪ್ರೀತಿಸಿದರೆ ಎಲ್ಲವೂ ಚೆನ್ನಾಗಿರುತ್ತದೆ. ಇವತ್ತಿನ ಸಮಾಜಕ್ಕೆ ಇದು ಮುಖ್ಯ ಕೂಡಾ. ಇಂತಹ ಅರಿವು ಮೂಡಿಸುವ ಸಿನಿಮಾ “ತೋತಾಪುರಿ’ ಎಂದರು.

ನಿರ್ಮಾಪಕ ಸುರೇಶ್‌ ಕೂಡಾ ಇದು ಇಡೀ ದೇಶ ಮೆಚ್ಚುವ ಸಿನಿಮಾವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಉಳಿದಂತೆ ನಾಯಕಿ ಅದಿತಿ ಪ್ರಭುದೇವ, ಧನಂಜಯ್‌, ವೀಣಾ ಸುಂದರ್‌, ಸುಮನ್‌ ರಂಗನಾಥ್‌ ಸೇರಿದಂತೆ ಚಿತ್ರದ ಕಲಾವಿದರು “ತೋತಾಪುರಿ’ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.