ಕೆಜಿಎಫ್-2 ಜೊತೆ ತೋತಾಪುರಿ ಟ್ರೇಲರ್‌


Team Udayavani, Apr 8, 2022, 12:36 PM IST

jaggesh

ನವರಸ ನಾಯಕ ಜಗ್ಗೇಶ್‌ ಹಾಗೂ ನಿರ್ದೇಶಕ ವಿಜಯಪ್ರಸಾದ್‌ “ನೀರ್‌ದೋಸೆ’ ಮೂಲಕ ಕಮಾಲ್‌ ಮಾಡಿದ್ದು ಗೊತ್ತೇ ಇದೆ. ಇದೀಗ “ತೋತಾಪುರಿ’ ಮೂಲಕ ಮತ್ತೆ ಯಶಸ್ವಿ ಜೋಡಿ ಒಂದಾಗಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ತಯಾರಾಗಿರುವ ಈ ಚಿತ್ರ ಎರಡು ಭಾಗಗಳಲ್ಲಿ ಮೂಡಿಬಂದಿದೆ. ಈವರೆಗೂ ಪೋಸ್ಟರ್‌ ಹಾಗೂ ಹಾಡಿನ ಮೂಲಕ ಜೋರಾಗಿ ಸುದ್ದಿಯಾಗಿದ್ದ “ತೋತಾಪುರಿ’ ಈಗ ಟ್ರೇಲರ್‌ ಮೂಲಕ ಸೌಂಡು ಮಾಡಲು ಸಜ್ಜಾಗಿದೆ. ಅದಕ್ಕೆ ಮುಹೂರ್ತ ಕೂಡ ಫಿಕ್ಸ್‌ ಆಗಿದೆ.

ಹೌದು, ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ “ತೋತಾಪುರಿ’ ಮೊದಲ ಭಾಗದ ಟ್ರೇಲರ್‌ “ಕೆಜಿಎಫ್-2′ ಜತೆ ರಿಲೀಸ್‌ ಮಾಡಲಿದೆ ಚಿತ್ರತಂಡ. ಏಪ್ರಿಲ್‌ 14ರಂದು ಕೆಜಿಎಫ್ ಭಾಗ 2 ಪ್ರಪಂಚದಾದ್ಯಂತ ತೆರೆಕಾಣುತ್ತಿದೆ. ಇದರೊಟ್ಟಿಗೆ “ತೋತಾಪುರಿ’ ಸಿನಿಮಾದ ಟ್ರೇಲ ರ್‌ ಸಹ ಬಿಡುಗಡೆಯಾಗಲಿದೆ. ಕೆಜಿಎಫ್ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲೂ “ತೋತಾಪುರಿ’ ಸವಿಯಬಹುದು.

ಜಗ್ಗೇಶ್‌ ಇದೇ ಮೊದಲ ಬಾರಿ ಎರಡು ಭಾಗವಿರುವ ಸಿನಿಮಾದಲ್ಲಿ ನಟಿಸಿದ್ದಾರೆ. ಜತೆಗೆ ಇದು ಅವರ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ. “ಬಾಗ್ಲು ತೆಗಿ ಮೇರಿ ಜಾನ್‌…’ ಹಾಡಿನ ಮುಖೇನ ವಿಶ್ವದಾದ್ಯಂತ ಸದ್ದು ಮಾಡಿರುವ “ತೋತಾಪುರಿ’ ಈಗ ಟ್ರೇಲರ್‌ ಮೂಲಕ ಜನರನ್ನು ತನ್ನತ್ತ ಸೆಳೆದುಕೊಳ್ಳಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ.

ಇದನ್ನೂ ಓದಿ:“ವರ್ಣಪಟಲ”; ಆಟಿಸಂ ಮೇಲೊಂದು ಚಿತ್ರ

ಕಾಮಿಡಿ ಸಿನಿಮಾವೊಂದು ಇದೇ ಮೊದಲ ಬಾರಿಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವುದು ವಿಶೇಷ. ಎರಡೂ ಭಾಗದ ಶೂಟಿಂಗ್‌ ಮೊದಲೇ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವುದೂ ಇದೇ ಮೊದಲು. ಹೀಗೆ ಹಲವು ಮೊದಲುಗಳನ್ನೊಳಗೊಂಡ “ತೋತಾಪುರಿ’ ಬೇಸಿಗೆಗೆ ಸವಿಯಲು ಸಿದ್ಧ.

ಮೋನಿಫಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕೆ.ಎ.ಸುರೇಶ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಇವರು ಎರಡನೇ ಮದುವೆ, ಗೋವಿಂದಾಯ ನಮಃ, ಶಿವಲಿಂಗ, ಶ್ರಾವಣಿ ಸುಬ್ರಮಣ್ಯ ಮೊದಲಾದ ಸಿನಿಮಾಗಳನ್ನು ನಿರ್ಮಿಸಿ, ಸೂಪರ್‌ ಹಿಟ್‌ ನಿರ್ಮಾಪಕ ಎನಿಸಿಕೊಂಡಿದ್ದಾರೆ. ಸುರೇಶ್‌ ನಿರ್ಮಿಸಿರುವ ಎಲ್ಲಾ ಸಿನಿಮಾಗಳು “ಬ್ಲಾಕ್‌’ಬಸ್ಟರ್‌ ಆಗಿರುವುದರಿಂದ “ತೋತಾಪುರಿ’ ಸಹ ಬಾಕ್ಸಾಫೀಸ್‌’ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂಬುದು ಸಿನಿ ಪಂಡಿತರ ಲೆಕ್ಕಾಚಾರ.

ಅತಿಹೆಚ್ಚು ದಿನ ಚಿತ್ರೀಕರಣ ಮಾಡಿರುವ ಸಿನಿಮಾ ಎಂಬ ಹೆಗ್ಗಳಿಕೆ “ತೋತಾಪುರಿ’ಗಿದೆ. ತಾರಾಗಣದ ವಿಷಯದಲ್ಲೂ ದಾಖಲೆ ಬರೆದಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ್, ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌ ಹಾಗೂ ಹೇಮಾದತ್‌ ಸೇರಿದಂತೆ ಸುಮಾರು ನೂರಕ್ಕೂ ಅಧಿಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತ, ನಿರಂಜನ್‌ ಬಾಬು ಕ್ಯಾಮೆರಾ, ಸುರೇಶ್‌ ಅರಸ್‌ ಸಂಕಲನ ಈ ಚಿತ್ರಕ್ಕಿದೆ. ಈ ಮೂಲಕ ಸಾಕಷ್ಟು ರಾಜ್ಯ ಪ್ರಶಸ್ತಿ ವಿಜೇತ ತಾಂತ್ರಿಕವರ್ಗ “ತೋತಾಪುರಿ’ಗೆ ಕಾರ್ಯ ನಿರ್ವಹಿಸಿದೆ ಎಂಬುದು ಈ ತಂಡದ ಹೆಚ್ಚುಗಾರಿಕೆ.

ಟಾಪ್ ನ್ಯೂಸ್

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.