ಪ್ರೇಕ್ಷಕರ ಮುಂದೆ ಮೂಕವಿಸ್ಮಿತ

ಟಿ.ಪಿ. ಕೈಲಾಸಂ ನಾಟಕ ಸಿನಿಮಾ ಆಯ್ತು

Team Udayavani, May 17, 2019, 6:00 AM IST

10

ಖ್ಯಾತ ಸಾಹಿತಿ ಟಿ.ಪಿ ಕೈಲಾಸಂ ಅವರ “ಟೊಳ್ಳು-ಗಟ್ಟಿ’ ನಾಟಕವನ್ನು ಅನೇಕರು ನೋಡಿರಬಹುದು, ಓದಿರಬಹುದು. ಟಿ.ಪಿ ಕೈಲಾಸಂ ಅವರ ಜನಪ್ರಿಯ ಕೃತಿಗಳಲ್ಲಿ ಒಂದಾಗಿರುವ “ಟೊಳ್ಳು-ಗಟ್ಟಿ’ ನಾಟಕ 60ರ ದಶಕದಲ್ಲಿ ಸಾಕಷ್ಟು ಜನಪ್ರಿಯವಾಗಿತ್ತು. ಈಗ ಇದೇ ನಾಟಕ “ಮೂಕ ವಿಸ್ಮಿತ’ ಎನ್ನುವ ಹೆಸರಿನಲ್ಲಿ ಸಿನಿಮಾ ರೂಪದಲ್ಲಿ ಈ ವಾರ ತೆರೆಗೆ ಬರುತ್ತಿದೆ.

ಅಂದಹಾಗೆ, ಈ “ಟೊಳ್ಳು-ಗಟ್ಟಿ’ ನಾಟಕವನ್ನು ಸಿನಿಮಾ ರೂಪಕ್ಕೆ ತರುವ ಸಾಹಕ್ಕೆ ಕೈ ಹಾಕಿದವರು ನವ ನಿರ್ದೇಶಕ ಗುರುದತ್‌ ಶ್ರೀಕಾಂತ್‌. “ಟೊಳ್ಳು-ಗಟ್ಟಿ’ ನಾಟಕದ ಕಥಾಹಂದರವನ್ನು ಇಟ್ಟುಕೊಂಡು ಅದನ್ನು ಇಂದಿನ ಪ್ರೇಕ್ಷಕರಿಗೆ ಇನ್ನಷ್ಟು ಹತ್ತಿರವಾಗುವಂತೆ ತಮ್ಮದೇ ಪರಿಕಲ್ಪನೆಯಲ್ಲಿ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಗುರುದತ್‌ ಶ್ರೀಕಾಂತ್‌.

ಚಿತ್ರದ ಬಿಡುಗಡೆಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡ ಚಿತ್ರತಂಡ, “ಮೂಕ ವಿಸ್ಮಿತ’ ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡಿತು.

ಚಿತ್ರದ ಬಗ್ಗೆ ಮೊದಲು ಮಾತಿಗಿಳಿದ ನಿರ್ದೇಶಕ ಗುರುದತ್‌ ಶ್ರೀಕಾಂತ್‌, “ಸುಮಾರು ಎರಡೂವರೆ ವರ್ಷಗಳ ಹಿಂದೆಯೇ ಈ ಚಿತ್ರವನ್ನು ಮಾಡುವ ಯೋಚನೆ ಬಂದು ಚಿತ್ರವನ್ನು ಪ್ರಾರಂಭಿಸಿದೆವು. ನಂತರ ಒಬ್ಬೊಬ್ಬರಾಗಿ ಚಿತ್ರತಂಡವನ್ನು ಸೇರಿಕೊಂಡರು. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ತಲುಪಿದೆ. ಚಿತ್ರದ ಬಗ್ಗೆ ಈಗಾಗಲೇ ಎಲ್ಲಾ ಕಡೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರದ ಬಗ್ಗೆ ನಾವು ಕೂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೇವೆ. ಕನ್ನಡದ ಮಟ್ಟಿಗೆ ಇದೊಂದು ಹೊಸಥರದ ಚಿತ್ರವಾಗಲಿದ್ದು, ಕನ್ನಡ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಬಾಲ್ಯದಿಂದಲೂ ಚಿತ್ರರಂಗದ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡಿದ್ದ ಗುರುದತ್‌ ಶ್ರೀಕಾಂತ್‌ ತಮ್ಮ ಪದವಿ ಶಿಕ್ಷಣ ಮುಗಿಯುತ್ತಿದ್ದಂತೆ ಚಿತ್ರರಂಗದತ್ತ ಮುಖ ಮಾಡಿದ ಹುಡುಗ. ಯಾವ ನಿರ್ದೇಶಕರು, ತಂತ್ರಜ್ಞರ ಬಳಿಯೂ ಕೆಲಸ ಮಾಡದ ಇವರು, ತಾನೇ ಸ್ವಪರಿಶ್ರಮದಿಂದ ಸಿನಿಮಾದ ಬಗ್ಗೆ ಒಂದಷ್ಟು ಅಧ್ಯಯನ ಮಾಡಿ ಬಳಿಕ, ಚೊಚ್ಚಲ ಬಾರಿಗೆ ನಿರ್ದೇಶನ ಮಾಡುವ ಸಾಹಸಕ್ಕೆ ಕೈ ಹಾಕಿದ್ದಾರೆ.

ಈ ಬಗ್ಗೆ ಮಾತನಾಡುವ ಗುರುದತ್‌ ಶ್ರೀಕಾಂತ್‌, “ಕನ್ನಡದ ಕೆಲವು ಅನುಭವಿ ನಿರ್ದೇಶಕರು, ತಂತ್ರಜ್ಞರ ಜೊತೆ ಕೆಲಸ ಮಾಡುವ ಆಸೆಯಿದ್ದರೂ, ಅದು ಸಾಧ್ಯವಾಗಲಿಲ್ಲ. ಕೊನೆಗೆ ನಾನೇ ಸಿನಿಮಾದ ಬಗ್ಗೆ ಒಂದಷ್ಟು ಅಧ್ಯಯನ ಮಾಡಿಕೊಂಡು ನಿರ್ದೇಶನ ಮಾಡಲು ಮುಂದಾದೆ. ಸುಮಾರು ಎರಡೂವರೆ ವರ್ಷ ಹಗಲು-ರಾತ್ರಿ ಎನ್ನದೆ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ಚಿತ್ರದಲ್ಲಿ ನಾನು ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಟಿ.ಪಿ ಕೈಲಾಸಂ ಅವರ ಶ್ರೇಷ್ಠ ನಾಟಕವನ್ನು ಅಷ್ಟೇ ಶ್ರೇಷ್ಠವಾಗಿ ತೆರೆಮೇಲೆ ತರಲು ಸಾಕಷ್ಟು ಶ್ರಮಿಸಿದ್ದೇವೆ’ ಎಂದರು.

ಇನ್ನು “ಮೂಕ ವಿಸ್ಮಿತ’ ಚಿತ್ರದಲ್ಲಿ ಗುರುದತ್‌ ಶ್ರೀಕಾಂತ್‌ ಅವರೊಂದಿಗೆ ತಾರಾಗಣ ಸಂದೀಪ ಮಲಾನಿ, ವಾಣಿಶ್ರೀ ಭಟ್‌, ಚಂದ್ರಕೀರ್ತಿ, ಮಾವಳ್ಳಿ ಕಾರ್ತಿಕ್‌, ಶೋಭಾ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಸಾಗರ, ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ “ಮೂಕ ವಿಸ್ಮಿತ’ ಚಿತ್ರದ ಟ್ರೇಲರ್‌ಗೆ ಎಲ್ಲಾ ಕಡೆಗಳಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ ಈ ವಾರ ಚಿತ್ರವನ್ನು ರಾಜ್ಯಾದ್ಯಂತ ಬಹುತೇಕ ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ಇನ್ನು “ಮೂಕ ವಿಸ್ಮಿತ’ ಚಿತ್ರದಲ್ಲಿ ನಟ ಸಂದೀಪ್‌ ಮಲಾನಿ “ಹಿರಿಯಣ್ಣ’ ಎನ್ನುವ ಮಾಧ್ವ ಬ್ರಾಹ್ಮಣನ ಪಾತ್ರದಲ್ಲಿ ಅಭಿನಯಿಸಿದ್ದಾರಂತೆ. ಚಿತ್ರದ ಬಗ್ಗೆ ಮತ್ತು ತಮ್ಮ ಪಾತ್ರದ ಬಗ್ಗೆ ಮಾತನಾಡುವ ಸಂದೀಪ್‌ ಮಲಾನಿ, “ಮೊದಲು ಈ ಟಿ.ಪಿ ಕೈಲಾಸಂ ಅವರ “ಟೊಳ್ಳು-ಗಟ್ಟಿ’ ನಾಟಕವನ್ನು ಓದಲು ನಿರ್ದೇಶಕರು ಕೊಟ್ಟರು. ಅದನ್ನು ಓದಿದ ನಂತರ ಹತ್ತಾರು ಪಾತ್ರಗಳು ಅಲ್ಲಿದ್ದರಿಂದ, ಅದರಲ್ಲಿ ನನ್ನ ಪಾತ್ರ ಯಾವುದು, ನನಗೆ ಯಾವ ಪಾತ್ರ ಸಿಗಬಹುದು ಎಂದು ಯೋಚಿಸುತ್ತಿದೆ. ಕೊನೆಗೆ ಅದರಲ್ಲಿರುವ ಹಿರಿಯಣ್ಣ ಎನ್ನುವ ಪಾತ್ರ ಸಿಕ್ಕಿತು. ಸುಮಾರು 50-55 ವರ್ಷದ ಮಾಧ್ವ ಬ್ರಾಹ್ಮಣ ವ್ಯಕ್ತಿಯ ಪಾತ್ರ ನನ್ನದು. ತುಂಬಾ ಹಠ ಸ್ವಭಾವವಿರುವ, ಮನೆಯಲ್ಲಿ ಎಲ್ಲರನ್ನೂ ಹೆದರಿಸಿಕೊಂಡು ಇರುವಂಥ ಪಾತ್ರ. ಐವತ್ತರ ದಶಕದಲ್ಲಿ ಬರುವಂಥ ಪಾತ್ರ. ಚಿತ್ರದ ಬಹುಭಾಗ ಸಾಗರದಲ್ಲಿ ನಡೆದಿದೆ. ಬೆಳಿಗ್ಗೆ 5 ಗಂಟೆಗೆ ಶೂಟಿಂಗ್‌ ಶುರುವಾಗುತ್ತಿತ್ತು. ಬಹುತೇಕ ಹೊಸ ಹುಡುಗರ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ. ಒಳ್ಳೆಯ ಕಥೆ ಚೆನ್ನಾಗಿ ಚಿತ್ರ ರೂಪದಲ್ಲಿ ಬಂದಿದೆ ಎಂಬ ಭರವಸೆ ಇದೆ. ಚಿತ್ರದಲ್ಲಿ ಕೌಟುಂಬಿಕ ಕಥಾಹಂದರವಿದೆ. ಮೂರು ಆಯಾಮಗಳಲ್ಲಿ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಹೊಸಬರ ಇಂಥ ಪ್ರಯತ್ನಕ್ಕೆ ಎಲ್ಲರಿಂದ ಪ್ರೋತ್ಸಾಹ, ಸಹಕಾರ ಸಿಕ್ಕಿದರೆ ಇನ್ನಷ್ಟು ಇಂತಹ ಚಿತ್ರಗಳು ಬರಬಹುದು’ ಎಂದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.