ಇಂದಿನಿಂದ ಗಿರಿಗಿಟ್ ಆರಂಭ

ರೂಪೇಶ್‌ ಶೆಟ್ಟಿ ಹೊಸ ಭರವಸೆ

Team Udayavani, Aug 23, 2019, 5:04 AM IST

36

ತುಳು ಚಿತ್ರರಂಗದಲ್ಲಿ ಈ ವರ್ಷ ಇಲ್ಲಿವರೆಗೆ ಒಂದಷ್ಟು ಸಿನಿಮಾಗಳು ಬಿಡುಗಡೆಯಾಗಿವೆ. ಕೆಲವು ಸಿನಿಮಾಗಳು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದರೆ, ಇನ್ನು ಕೆಲವು ಸಿನಿಮಾಗಳು ಬೇಸರಕ್ಕೆ ಕಾರಣವಾಗಿವೆ. ಇದು ಯಾವುದೇ ಭಾಷೆಯ ಚಿತ್ರರಂಗದಲ್ಲಿ ಸಹಜ ಕೂಡಾ. ಈಗ ಚಿತ್ರತಂಡವೊಂದು ಸಿಕ್ಕಾಪಟ್ಟೆ ವಿಶ್ವಾಸದೊಂದಿಗೆ ಎದುರು ನೋಡುತ್ತಿದೆ. ಅದಕ್ಕೆ ಕಾರಣ ‘ಗಿರಿಗಿಟ್’. ಇಂದು (ಆ.23) ತೆರೆಕಾಣುತ್ತಿರುವ ತುಳು ಸಿನಿಮಾವಿದು. ಈಗಾಗಲೇ ಕನ್ನಡ, ತುಳು ಚಿತ್ರಗಳಲ್ಲಿ ನಟಿಸಿರುವ ರೂಪೇಶ್‌ ಶೆಟ್ಟಿ ಈ ಚಿತ್ರದ ನಾಯಕ. ಕೇವಲ ನಾಯಕರಾಗಿಯಷ್ಟೇ ಇವರು ಈ ಚಿತ್ರದಲ್ಲಿ ತೊಡಗಿಸಿಕೊಂಡಿಲ್ಲ. ನಿರ್ದೇಶನದಲ್ಲೂ ಭಾಗಿಯಾಗಿದ್ದಾರೆ. ರೂಪೇಶ್‌ ಶೆಟ್ಟಿ ಹಾಗೂ ರಾಕೇಶ್‌ ಕದ್ರಿ ಜೊತೆಯಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರ ವಿದೇಶಗಳಲ್ಲೂ ತೆರೆಕಾಣುತ್ತಿದೆ.

ಚಿತ್ರದ ಬಗ್ಗೆ ಮಾತನಾಡುವ ರೂಪೇಶ್‌ ಶೆಟ್ಟಿ, ‘ಇದು ಇವತ್ತಿನ ಟ್ರೆಂಡ್‌ಗೆ ತಕ್ಕಂತಹ ಸಿನಿಮಾ. ನಮ್ಮ ಜೀವನದ ಸುತ್ತಮುತ್ತ ಈ ಕಥೆ ನಡೆಯುತ್ತದೆ., ಕಾಮಿಡಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎನ್ನುತ್ತಾರೆ. ಇನ್ನು, ತುಳು ಚಿತ್ರರಂಗದಲ್ಲಿ ಹೊಸ ಬಗೆಯ ಸಿನಿಮಾವಾಗಿ ಈ ಚಿತ್ರ ಹಿಟ್ ಆಗುವ ವಿಶ್ವಾಸ ಕೂಡಾ ರೂಪೇಶ್‌ ಅವರಿಗಿದೆ. ಅದಕ್ಕೆ ಪೂರಕವಾಗಿ ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌, ಟ್ರೇಲರ್‌ಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ರೂಪೇಶ್‌ಗೆ ಜೋಡಿಯಾಗಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ. ಜೊತೆಗೆ ತುಳು ಚಿತ್ರರಂಗದ ಹಾಸ್ಯ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಅರವಿಂದ್‌ ಬೋಳಾರ್‌, ನವೀನ್‌ ಡಿ. ಪಡೀಲ್ , ಭೋಜರಾಜ್‌ ವಾಮಂಜೂರು , ಉಮೇಶ್‌ ಮಿಜಾರ್‌, ಪ್ರಸನ್ನ ಶೆಟ್ಟಿ ಬೈಲೂರು , ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಮುಂತಾದ ಹಾಸ್ಯ ಕಲಾವಿದರು ನಟಿಸಿದ್ದಾರೆ. ಮಂಜುನಾಥ ಅತ್ತಾವರ್‌ ಹಾಗೂ ಶೂಲಿನ್‌ ಫಿಲಂಸ್‌ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಖಳನಾಯಕನಾಗಿ ರೋಶನ್‌ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಇನ್ನು ಚಿತ್ರಕ್ಕೆ ಡೇರಿಲ್ ಮಸ್ಕರೇನಸ್‌ ಹಾಗೂ ಜೋಯೆಲ್ ರೆಬೆಲ್ಲೋ ಸಂಗೀತ, ‘ಬಲೆ ತೆಲಿಪಾಲೆ’ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಚಿತ್ರಕ್ಕಿದೆ. ಇಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸದೊಂದಿಗೆ ಚಿತ್ರತಂಡ ಎದುರು ನೋಡುತ್ತಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.