ವಿಶಿಷ್ಟ ಪೊಲೀಸ್ ಸ್ಟೋರಿಯಲ್ಲಿ ವಸಿಷ್ಠ
Team Udayavani, Dec 4, 2020, 3:57 PM IST
ವಸಿಷ್ಠ ಸಿಂಹ ಸಿನಿಮಾ ಮೇಲೆ ಸಿನಿಮಾ ಮಾಡುತ್ತಾ ಬಿಝಿಯಾಗುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ಸಿನಿಮಾ ಮಾಡುತ್ತಿರುವ ವಸಿಷ್ಠ ಈಗಕನ್ನಡದಲ್ಲೊಂದು ಹೊಸ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ನಡೆದಿದೆ.
“ಜನರತ್ನ ಪ್ರೊಡಕ್ಷನ್ಸ್’ ನಡಿಯಲ್ಲಿ ಜನಾರ್ದನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವಚನ್ ಈ ಚಿತ್ರದ ನಿರ್ದೇಶಕರು. ಈ ಚಿತ್ರದಲ್ಲಿ ಇಬ್ಬರು ಹೀರೋಗಳು. ವಸಿಷ್ಠ ಜೊತೆಗೆ ಕಿಶೋರ್ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನಿಖೆಯ ಹಾದಿಯಲ್ಲಿ ಸಾಗುವ ಈ ಸಿನಿಮಾದಲ್ಲಿ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತದೆ. ನೈಜ ಘಟನೆಗಳನ್ನು ಮಿಶ್ರಣ ಮಾಡಿ ಸಾಗುವ ಈ ಚಿತ್ರದಲ್ಲಿ ಎರಡೂ ಪಾತ್ರಗಳು ಪ್ರಮುಖವಾಗಿರುತ್ತವೆ ಎಂಬುದು ನಿರ್ದೇಶಕ ವಚನ್ ಅವರ ಮಾತು. ನಾಯಕ ವಸಿಷ್ಠ ಅವರಿಗೆ ಈ ಚಿತ್ರದ ಮೇಲೆ ವಿಶ್ವಾಸವಿದೆ. ಅದಕ್ಕೆಕಾರಣ ಸಿನಿಮಾದಕಥೆ ಹಾಗೂ ನಿರ್ದೇಶಕರ ನಿರೂಪಣಾ ಶೈಲಿ.”ಎಲ್ಲಾ ಸ್ನೇಹಿತರು ಸೇರಿಕೊಂಡು ಒಂದೊಳ್ಳೆಯ ಸಿನಿಮಾಮಾಡಬೇಕೆಂದು ಹೊರಟಿದ್ದೇವೆ. ಸಿನಿಮಾವನ್ನು ಪ್ರೀತಿಸುವ ಎಲ್ಲರೂ ಒಂದಾಗಿರುವುದರಿಂದ ಸಿನಿಮಾ ಚೆನ್ನಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ ವಸಿಷ್ಠ.
ಇದನ್ನೂ ಓದಿ : ವರ್ಷಾಂತ್ಯದಲ್ಲಿ ಸಿನಿಮಾ ಕ್ಯೂ
ಚಿತ್ರದಲ್ಲಿ ಚಿಕ್ಕಣ್ಣ, ಧರ್ಮಣ್ಣ, ಸುಮನ್, ಪ್ರಕಾಶ್ ತುಮ್ಮಿನಾಡು ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ನಾಲ್ಕು ಹಾಡುಗಳಿಗೆ ಅನೂಪ್ ಸೀಳಿನ್ ಸಂಗೀತ ನೀಡಲಿದ್ದಾರೆ. ಮಾಸ್ತಿ ಸಂಭಾಷಣೆ ಬರೆದರೆ, ನವೀನ್ಕುಮಾರ್ ಛಾಯಾಗ್ರಹಣ ಮತ್ತು ಹರೀಶ್ಕೊಮ್ಮೆ ಸಂಕಲನವಿದೆ. ಬೆಂಗಳೂರು, ತುಮಕೂರು, ಮೈಸೂರು, ಮಡಿಕೇರಿ ಸುತ್ತಮುತ್ತ ಮತ್ತು ವಿದೇಶಗಳಲ್ಲಿಯೂ ಶೂಟಿಂಗ್ ನಡೆಯಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ
ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ
ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ