ವಾಸು ಪಕ್ಕಾ ಡಿಫ್ರೆಂಟ್‌


Team Udayavani, Jul 27, 2018, 6:00 AM IST

26.jpg

ಪ್ರೀ-ರಿಲೀಸ್‌ ಇವೆಂಟ್‌!
ಮುಹೂರ್ತ ಸಮಾರಂಭ ಗೊತ್ತು. ಆಡಿಯೋ ಬಿಡುಗಡೆ, ಟೀಸರ್‌ ಬಿಡುಗಡೆ, ಟ್ರೇಲರ್‌ ಬಿಡುಗಡೆ ಇವೆಲ್ಲವೂ ಗೊತ್ತು. ಆದರೆ, ಈ ಪ್ರೀ-ರಿಲೀಸ್‌ ಇವೆಂಟ್‌ ಅಂದರೆ ಏನು ಗೊತ್ತಾ? ಗೊತ್ತಿಲ್ಲದಿದ್ದರೆ ಕೇಳಿ. ಚಿತ್ರ ಬಿಡುಗಡೆಗೂ ಮುನ್ನ ಒಂದು ಸಮಾರಂಭ ಮಾಡಿ, ಆ ಸಮಾರಂಭದಲ್ಲಿ ಚಿತ್ರ ಯಾವ ದಿನ ಬಿಡುಗಡೆಯಾಗುತ್ತದೆ ಎಂದು ಅಧಿಕೃತವಾಗಿ ಘೋಷಿಸಲಾಗುತ್ತದೆ. ಇದುವರೆಗೂ ಎಲ್ಲರೂ ಪತ್ರಿಕಾಗೋಷ್ಠಿ ಮಾಡಿ, ತಮ್ಮ ಚಿತ್ರ ಯಾವತ್ತು ಬಿಡುಗಡೆಯಾಗುತ್ತದೆ ಎಂದು ಹೇಳುತ್ತಿದ್ದರು. ಆದರೆ, ಅನೀಶ್‌ ತೇಜೇಶ್ವರ್‌, ಅಂಬೇಡ್ಕರ್‌ ಭವನದಲ್ಲಿ ಒಂದು ಸಮಾರಂಭ ಮಾಡಿ, ಅಲ್ಲಿ ತಮ್ಮ ಹೊಸ ಚಿತ್ರ “ವಾಸು – ಪಕ್ಕಾ ಕಮರ್ಷಿಯಲ್‌’ ಆಗಸ್ಟ್‌ 3ರಂದು ಬಿಡುಗಡೆಯಾಗುತ್ತಿದೆ ಎಂದು ಅಧಿಕೃತವಾಗಿ ಘೋಷಿಸಿದರು. ಅಷ್ಟೇ ಅಲ್ಲ, ದರ್ಶನ್‌ ಅವರನ್ನು ಮುಖ್ಯ ಅತಿಥಿಯಾಗಿ ಕರೆದು, ಅವರಿಂದ ಘೋಷಿಸಲಾಯಿತು.

ಅಂದು ಮೊದಲ ಒಂದು ಗಂಟೆ ಹಾಡು, ಡ್ಯಾನ್ಸು, ಟ್ರೇಲರ್‌ ಎಂದೆಲ್ಲಾ ಸಂಭ್ರಮವಿತ್ತು. ನಟಿಯರಾದ ಅನೂಷಾ ರಂಗನಾಥ್‌, ಕೃಷಿ ತಾಪಂಡ, ಅನಿತಾ ಭಟ್‌ ಮುಂತಾದವರು ವೇದಿಕೆಗೆ ಬಂದು ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿ ಹೋದರು. ಯುವ ಪ್ರತಿಭೆ ಯಶವಂತ್‌, ಯೋಗಾಸನದ ವಿವಿಧ ಭಂಗಿಗಳನ್ನು ತೋರಿಸಿ ಪ್ರೇಕ್ಷಕರನ್ನು ಖುಷಿಪಡಿಸಿದರು. ಆ ನಂತರ ದರ್ಶನ್‌ ಬಂದರು. ಅದಕ್ಕೂ ಮುನ್ನ ರಿಷಭ್‌ ಶೆಟ್ಟಿ, ಪ್ರಮೋದ್‌ ಶೆಟ್ಟಿ ಮುಂತಾದವರು ಬಂದಿದ್ದರು. ಎಲ್ಲರೂ ವೇದಿಕೆ ಮೇಲೆ ಆಗಸ್ಟ್‌ ಮೂರರಂದು  ಬಿಡುಗಡೆ ಇರುವ ಪೋಸ್ಟರ್‌ನ್ನು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ದರ್ಶನ್‌, “ಚಿತ್ರದ ಪ್ರಚಾರ ಮಾಡುವುದನ್ನು ನಾವು ಅನೀಶ್‌ರಿಂದ ಕಾಪಿ ಮಾಡಬೇಕು. ಏಳು ಚಿತ್ರಗಳಲ್ಲಿ ನಟಿಸಿ, ಮೊದಲ ಬಾರಿ ನಿರ್ಮಾಪಕರಾಗುತ್ತಿದ್ದಾರೆ. ಚಿತ್ರರಂಗಕ್ಕೆ ಏನಾದರೂ ಮಾಡಬೇಕೆಂದು ಅವರು ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಒಂದು ಸಿನಿಮಾ ಬಂದರೆ, ನೂರಾರು ಜನರಿಗೆ ಕೆಲಸ ಸಿಗುತ್ತದೆ. ಅಷ್ಟೇ ಅಲ್ಲ, ಇದರ ಲಾಭದಲ್ಲಿ ಪ್ರತಿಯೊಬ್ಬರಿಗೂ ಶೇರ್‌ ಹೋಗುತ್ತದೆ. ವಾಸು ತುಣುಕುಗಳು ಪಕ್ಕಾ ಕಮರ್ಷಿಯಲ್‌ ಆಗಿದೆ. ಇಲ್ಲಿ ಯಾರೂ ಸ್ಟಾರ್‌ಗಳು ಇಲ್ಲ. ಸ್ಟಾರ್‌ಗಳನ್ನು ಹುಟ್ಟು ಹಾಕುವವರು ಅಲ್ಲಿದ್ದಾರೆಂದು ಜನರತ್ತ ಮೈಕ್‌ ತೋರಿ’ ಚಪ್ಪಾಳೆ ಗಿಟ್ಟಿಸಿಕೊಂಡರು ದರ್ಶನ್‌.

ಈ ಸಮಾರಂಭಕ್ಕೆ ದರ್ಶನ್‌ ಅವರನ್ನು ಆಹ್ವಾನಿಸಬೇಕೆಂದು ಅನೀಶ್‌ ಹೋದಾಗ, ಆತ್ಮೀಯವಾಗಿ ಬರಮಾಡಿಕೊಂಡರಂತೆ ದರ್ಶನ್‌. ಅಷ್ಟೇ ಅಲ್ಲ, ಸಮಾರಂಭಕ್ಕೆ ಖಂಡಿತಾ ಬರುವುದಾಗಿ ಅವರು ಹೇಳಿದರಂತೆ. ಜೀವ ಇರುವ ತನಕ ದರ್ಶನ್‌ ಅವರ ಸಹಕಾರವನ್ನು ಮರೆಯುವುದಿಲ್ಲ ಎಂದರು ಅನೀಶ್‌. “ಬಾಕ್ಸ್‌ ಆಫೀಸ್‌ ಸುಲ್ತಾನ್‌’ ಬಂದು ಆಶಿರ್ವಾದ ಮಾಡಿದ್ದಾರೆಂದರೆ ಚಿತ್ರ ಹಿಟ್‌ ಆದಂತೆ  ಅಂತ ಭವಿಷ್ಯ ನುಡಿದರು ರಿಶಬ್‌ ಶೆಟ್ಟಿ. ಇನ್ನು ದರ್ಶನ್‌ ಅವರು ಸಿನಿಮಾಕ್ಕೆ ಹರಸಲು ಬಂದಿದ್ದು ನಮಗೆ ಶಕ್ತಿ ಬಂದಂತೆ ಆಗಿದೆ ಎಂದು ನಾಯಕಿ ನಿಶ್ವಿ‌ಕಾ ನಾಯ್ಡು 
ಖುಷಿಪಟ್ಟರು. 

ಟಾಪ್ ನ್ಯೂಸ್

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.