ಕಾಪಿಕಟ್ಟೆ ತುಂಬಾ ಜನವೋ ಜನ

ಹಾಡಿಗಿಂತ ಥ್ಯಾಂಕ್ಸ್‌ ಸದ್ದೇ ಜೋರು..

Team Udayavani, Dec 6, 2019, 5:58 AM IST

ws-30

ಈ ಚಿತ್ರದ ವಿಶೇಷವೆಂದರೆ, ಬಹುತೇಕ ಹಾಸ್ಯ ಕಲಾವಿದರು ಕಾಣಿಸಿಕೊಂಡಿದ್ದಾರೆ. ಕನ್ನಡದ ಸುಮಾರು 35 ಕ್ಕೂ ಹೆಚ್ಚು ಹಿರಿಯ ಹಾಗೂ ಕಿರಿಯ ಹಾಸ್ಯ ಕಲಾವಿದರನ್ನು ಒಟ್ಟಿಗೆ ನೋಡಬಹುದು.

ವೇದಿಕೆ ದೊಡ್ಡದಿತ್ತು. ವೇದಿಕೆ ಮೇಲೆ ಕುಳಿತವರ ಮತ್ತು ನಿಂತವರ ಸಂಖ್ಯೆ ಕೂಡ ಅಷ್ಟೇ ದೊಡ್ಡದಾಗಿತ್ತು. ಆ ವೇದಿಕೆ ಸಿನಿಮಾ ಮಾಹಿತಿಗಿಂತ, ಬರೀ ಥ್ಯಾಂಕ್ಸ್‌ಗೆ ಮತ್ತು ಸನ್ಮಾನಿಸಿ ಗೌರವಿಸುವುದಕ್ಕೆ ಸೀಮಿತವಾಗಿತ್ತು. ಸಮಯವೂ ಮೀರಿತ್ತು. ಆದರೂ, ಸಿನಿಮಾಗೆ ಕೆಲಸ ಮಾಡಿದವರನ್ನು ಕರೆದು, ಕೂರಿಸಿ, ಥ್ಯಾಂಕ್ಸ್‌ ಹೇಳಿ ಸನ್ಮಾನಿಸಿ, ಗೌರವಿಸುವ ಕಾರ್ಯ ಮುಂದುವರೆದಿತ್ತು. ಅದರ ನಡುವೆ, ಹಾಡು, ಟ್ರೇಲರ್‌ ಕೂಡ ತೋರಿಸಲಾಯಿತು.

ಇದು “ಕಾಪಿ ಕಟ್ಟೆ’ ಚಿತ್ರದ ಹಾಡು ಹಾಗು ಟ್ರೇಲರ್‌ ಬಿಡುಗಡೆಯಲ್ಲಿ ಕಂಡುಬಂದ ದೃಶ್ಯ. ನೃತ್ಯ ನಿರ್ದೇಶಕರಾಗಿದ್ದ ಕಪಿಲ್‌ ಈ ಚಿತ್ರದ ನಿರ್ದೇಶಕರು. ಇದು ಅವರ ನಿರ್ದೇಶನದ ಮೂರನೇ ಚಿತ್ರ. ಚಿತ್ರದ ವಿಶೇಷವೆಂದರೆ, ಬಹುತೇಕ ಹಾಸ್ಯ ಕಲಾವಿದರು ಕಾಣಿಸಿಕೊಂಡಿದ್ದಾರೆ. ಕನ್ನಡದ ಸುಮಾರು 35 ಕ್ಕೂ ಹೆಚ್ಚು ಹಿರಿಯ ಹಾಗೂ ಕಿರಿಯ ಹಾಸ್ಯ ಕಲಾವಿದರನ್ನು ಒಟ್ಟಿಗೆ ನೋಡುವ ಅವಕಾಶ ಕಲ್ಪಿಸಿದ್ದಾರೆ ನಿರ್ದೇಶಕ ಕಪಿಲ್‌. ಹಾಸ್ಯ ಕಲಾವಿದರನ್ನಿಟ್ಟುಕೊಂಡೇ ಒಂದು ಅಪರೂಪದ ಕಥೆಗೆ ಹಣ ಹಾಕಿರೋದು ಜಿ.ರಾಘವೇಂದ್ರ. ಅವರಿಗೆ ಇದು ಹೊಸ ಅನುಭವ.

ಕಥೆ ಬಗ್ಗೆ ಹೇಳುವುದಾದರೆ, ಹಿರಿಯ ನಾಗರೀಕರ ಮನಸ್ಥಿತಿ ಹೇಗಿರುತ್ತೆ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಹೇಗೆಲ್ಲಾ ಒದ್ದಾಡುತ್ತಾರೆ. ಸಾಕಷ್ಟು ನೋವು ಇದ್ದರೂ, ತಮ್ಮ ಬದುಕಿನ ಪಯಣವನ್ನು ಹೇಗೆ ಸಾಗಿಸುತ್ತಾರೆ. ತಮ್ಮ ಸಮಕಾಲೀನ ಗೆಳೆಯರ ಜೊತೆ ಬೆರೆಯುವ ಹಿರಿಯ ಮನಸ್ಸುಗಳು, ಒಂದೆಡೆ ಸೇರಿ ಚರ್ಚಿಸುವ ವಿಷಯವೇ ಚಿತ್ರದ ಹೈಲೈಟ್‌. ಇನ್ನು, ಒಂದೇ ಹಂತದಲ್ಲಿ ಚಿತ್ರೀಕರಿಸಿರುವ ಚಿತ್ರದಲ್ಲಿ ಎಂ.ಎಸ್‌.ಉಮೇಶ್‌, ಬೆಂಗಳೂರು ನಾಗೇಶ್‌, ಹೊನ್ನವಳ್ಳಿ ಕೃಷ್ಣ, ಡಿಂಗ್ರಿ ನಾಗರಾಜ್‌, ರಮೇಶ್‌ಭಟ್‌, ಸುಂದರ್‌ ರಾಜ್‌, ಬ್ಯಾಂಕ್‌ ಜನಾರ್ದನ್‌, “ಶಂಖನಾದ’ಅರವಿಂದ್‌, ಮೈಸೂರು ರಮಾನಂದ್‌, ಮನದೀಪ್‌ರಾಯ್‌, ಶಂಕರ್‌ಭಟ್‌, ಬಿರಾದರ್‌, ದೊಡ್ಡಣ್ಣ, ದಯಾನಂದ್‌, ಟೆನ್ನಿಸ್‌ಕೃಷ್ಣ, ಮೈಕೆಲ್‌ವುಧು, ರೇಖಾದಾಸ್‌ ನಟಿಸಿದ್ದಾರೆ. ಆನಂದರೆಡ್ಡಿ ಹಾಗು ಶೃತಿ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನರಸಿಂಹಮೂರ್ತಿ ಚಿತ್ರಕಥೆ, ಸಂಭಾಷಣೆ ಬರೆದರೆ, ಗೋಪಿ ಕಲಕಾರ್‌ ಸಂಗೀತವಿದೆ. ಸಿ.ನಾರಾಯಣ್‌ ಛಾಯಾಗ್ರಹಣವಿದೆ. ಉದಯಲೇಖ ಸಾಹಿತ್ಯ ಬರೆದಿದ್ದಾರೆ. ಅಂದಿನ ಕಾರ್ಯಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಕಾರ್ಯದರ್ಶಿ ಎನ್‌.ಎಂ.ಸುರೇಶ್‌, ನಾಗಣ್ಣ ಇತರರು ಸಾಕ್ಷಿಯಾಗಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.