ಹಾಡು, ವಿಸ್ಮಯ, ವಿನೋದ…


Team Udayavani, Jun 23, 2017, 1:21 PM IST

Arjun-Sarja.jpg

ಮೈಕ್‌ ಹಿಡಿದೇ ವೇದಿಕೆ ಹತ್ತಿದರು ಶ್ರುತಿ. ಇದೇನು ಆಡಿಯೋ ಬಿಡುಗಡೆ ಸಮಾರಂಭದಲ್ಲಿ, ಚಿತ್ರದ ನಾಯಕಿ
ಮೊದಲು ಮಾತಾಡುತ್ತಿದ್ದಾರೆಲ್ಲಾ ಎಂದು ತಲೆ ಕೆರೆದುಕೊಳ್ಳುವುದಕ್ಕಿಂತ ಮುನ್ನವೇ, ಶ್ರುತಿ ತಾವು “ವಿಸ್ಮಯ’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದ ನಿರೂಪಕಿಯಾಗಿ ವೇದಿಕೆ ಏರಿದ್ದಾಗಿ ಹೇಳಿದರು. ಅಲ್ಲಿಂದ ನಂತರ ಸುಮಾರು ಒಂದೂವರೆ ಗಂಟೆಯ ಸಮಾರಂಭವನ್ನು ಅವರು ನಡೆಸಿಕೊಟ್ಟರು.

ತಮ್ಮ ತಂಡದವರನ್ನು ಮಾತಿಗೆಳೆಯುವುದರ ಜೊತೆಗೆ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಅಂದಹಾಗೆ “ವಿಸ್ಮಯ’, ಅರ್ಜುನ್‌ ಸರ್ಜಾ ಅಭಿನಯದ 150ನೇ ಚಿತ್ರ. ಅಷ್ಟೇ ಅಲ್ಲ, ಚಿತ್ರವು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಅದೇ ಕಾರಣಕ್ಕೆ ಗ್ರಾಂಡ್‌ ಆಗಿ ಆಡಿಯೋ ಬಿಡುಗಡೆ 
ಸಮಾರಂಭವನ್ನು ಆಯೋಜಿಸಿಸಲಾಗಿತ್ತು. ಚಿತ್ರದ ಟ್ರೇಲರ್‌ ತೋರಿಸುವ ಮೂಲಕ ಸಮಾರಂಭ ಶುರುವಾಯಿತು. ಆ ನಂತರ ಸಂಗೀತ ನಿರ್ದೇಶಕ ನವೀನ್‌ ಅವರನ್ನು ಕರೆಯಲಾಯಿತು. ಡಾ. ರಾಜಕುಮಾರ್‌, ಡಾ. ವಿಷ್ಣುವರ್ಧನ್‌ ಮತ್ತು ಶಂಕರ್‌ ನಾಗ್‌ ಅವರ ಜನಪ್ರಿಯ ಹಾಡುಗಳನ್ನು ಕೊಳಲಲ್ಲಿ ನುಡಿಸುವ ಮೂಲಕ ನವೀನ್‌ ಗೌರವ ಸಲ್ಲಿಸಿದರು.

ನಂತರ “ಬಾರೋ ಬಾರೋ ಯುದ್ಧ ಮಾಡೋಣ’ ಎಂಬ ಹಾಡನ್ನು “ನೆರುಪ್ಪುಡಾ’ ಖ್ಯಾತಿಯ ಅರುಣ್‌  ರಾಜ,
“ಒಲವೇ ಶಾಶ್ವತ’ ಎಂಬ ಹಾಡನ್ನು ವಾಸುಕಿ ವೈಭವ್‌ ಹಾಡಿದರು. ಆ ನಂತರ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಒಬ್ಬೊಬ್ಬರೇ ಬಂದು ಮಾತಿಗೆ ನಿಂತರು. ಮೊದಲಿಗೆ ಅರ್ಜುನ್‌ ಸರ್ಜಾ. “ಅಭಿಮನ್ಯು’ ಚಿತ್ರದ ನಂತರ ಒಂದು ವಿಶೇಷವಾದ ಚಿತ್ರದಲ್ಲಿ ಅವರು ನಟಿಸಿದ್ದಾರಂತೆ. “ಇದು ನನ್ನ 150ನೇ ಚಿತ್ರ. ಮೊದಲು ಗೊತ್ತಿರಲಿಲ್ಲ. ಆ ನಂತರ ಚಿತ್ರತಂಡದವರು ಈ ವಿಷಯ ಹೇಳಿದರು. ಇದೊಂದು ಪಕ್ಕಾ ಕಮರ್ಷಿಯಲ್‌ ಚಿತ್ರ. ಥ್ರಿಲ್ಲರ್‌ ಜೊತೆಗೆ ಫ್ಯಾಮಿಲಿ ಚಿತ್ರ. ಒಂಥರಾ ಅಪರೂಪದ ಸಂಗಮ. ಈ ಚಿತ್ರದಲ್ಲಿ ನಟಿಸುವುದು ಬೇಡ ಅಂತಲೇ ಕಥೆ ಕೇಳಿದೆ. ಕೊನೆಗೆ ಇಷ್ಟವಾಗಿ ನಟಿಸಿದೆ’ ಎಂದರು ಅರ್ಜುನ್‌.

ಈ ಚಿತ್ರದಲ್ಲಿ ತಮಿಳು ನಟ ಪ್ರಸನ್ನ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಅರ್ಜುನ್‌ ಸರ್ಜಾ ಇಲ್ಲದಿದ್ದರೆ, ಕನ್ನಡ ಚಿತ್ರವೊಂದರಲ್ಲಿ ನಟಿಸುವುದು ಕಷ್ಟವಾಗುತಿತ್ತು ಎಂದರು ಪ್ರಸನ್ನ. “ಅವರ 150ನೇ ಚಿತ್ರದಲ್ಲಿ ನಟಿಸಿದ್ದು ನಮ್ಮ ಭಾಗ್ಯ. ನಾವಿಲ್ಲದಿದ್ದರೂ, ಆ ಚಿತ್ರ ಮುಗಿಯುತಿತ್ತು. ಆದರೆ, ನಾವು ಈ ಚಿತ್ರದಲ್ಲಿ ಇದ್ದೀವಿ ಎಂಬ ಖುಷಿ ಇದೆ. ಒಂದೇ ಬೇಸರ ಅಂದರೆ, ನನಗೆ ನಾಯಕಿ ಇಲ್ಲದಿರುವುದು.

ಅರ್ಜುನ್‌ ಮತ್ತು ಶ್ರುತಿ ಅವರ ರೊಮ್ಯಾನ್ಸ್‌ ನೋಡಿ, ನನಗೂ ಜೋಡಿ ಇಲ್ಲ ಎಂದು ಬೇಸರವಾಯಿತು’ ಎಂದು ನಕ್ಕರು ಪ್ರಸನ್ನ. ನಂತರ ನಿರ್ದೇಶಕ ಅರುಣ್‌ ವೈದ್ಯನಾಥನ್‌, ನಿರ್ಮಾಪಕರಾದ ಜಯರಾಮ್‌, ಸುಧನ್‌ ಹಾಗೂ ಉಮಾಶಂಕರ್‌, ಛಾಯಾಗ್ರಾಹಕ ಅರವಿಂದ್‌ ಕೃಷ್ಣ ಎಲ್ಲರೂ ಚಿತ್ರದ ಬಗ್ಗೆ ಮತ್ತು ಅರ್ಜುನ್‌ ಸರ್ಜಾ ಅವರ ಜೊತೆಗೆ ಕೆಲಸ ಮಾಡಿದ್ದರ ಖುಷಿಯನ್ನು ಹಂಚಿಕೊಂಡರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.