ನೀರು ಅಮೂಲ್ಯವಾದುದು ….


Team Udayavani, Jan 4, 2019, 12:30 AM IST

x-86.jpg

ನೀರಿನ ಬಳಕೆ ಕುರಿತು ಈಗಾಗಲೇ ಹಲವು ಚಿತ್ರಗಳು ಬಂದು ಹೋಗಿವೆ. ಆ ಸಾಲಿಗೆ ಈಗ “ಆಘ್ರ್ಯ’ ಚಿತ್ರ ಹೊಸ ಸೇರ್ಪಡೆ. “ಅಘ್ರ್ಯ’ ಸಂಸ್ಕೃತ ಪದ. ಅದರರ್ಥ ಒಳ್ಳೆಯ ಕಾರ್ಯಕ್ರಮ ಎಂಬುದು. ಇಂಥದ್ದೊಂದು ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ ಶ್ರೀನಿವಾಸ್‌ (ಆಡಿಟರ್‌ ಶ್ರೀನಿವಾಸ್‌). ನಿರ್ದೇಶನ ಮಾತ್ರವಲ್ಲ, ಕಥೆ ಮತ್ತು ನಿರ್ಮಾಣದ ಜವಾಬ್ದಾರಿಯೂ ಅವರದೇ. ಇತ್ತೀಚೆಗೆ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭಕೋರಿದರು.

ನಂತರ ಚಿತ್ರತಂಡದೊಂದಿಗೆ ಪತ್ರಕರ್ತರ ಮುಂದೆ ಕುಳಿತ ನಿರ್ದೇಶಕ ಆಡಿಟರ್‌ ಶ್ರೀನಿವಾಸ್‌ ಮಾತಿಗಿಳಿದರು. “ಇದು ಸಣ್ಣ ಬಜೆಟ್‌ ಚಿತ್ರ. ಮುಹೂರ್ತ ಮಾಡೋಕೆ ಕಾರಣ, ಮೊದಲ ಚಿತ್ರವಾದ್ದರಿಂದ ಆತ್ಮೀಯರನ್ನು ಆಹ್ವಾನಿಸಿ, ಖುಷಿ ಹಂಚಿಕೊಳ್ಳಬೇಕಿತ್ತು. ಹಾಗಾಗಿ ಎಲ್ಲರ ಸಮ್ಮುಖದಲ್ಲಿ ಮೊದಲ ದೃಶ್ಯಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದೇನೆ. ಈ ಚಿತ್ರ ಶುರುವಿಗೆ ಕಾರಣ, ಶ್ರೀನಿವಾಸ್‌ ಕೌಶಿಕ್‌. ಒಮ್ಮೆ ಚರ್ಚೆ ಮಾಡುವಾಗ, ನಾನು ನೀರಿನ ಸದ್ಬಳಕೆ ಕುರಿತು ಮಾತನಾಡಿದ್ದೆ. ಅದನ್ನೇ ಯಾಕೆ ಚಿತ್ರ ಮಾಡಬಾರದು ಅಂತ ಧೈರ್ಯ ಕೊಟ್ಟರು. ನಿರ್ದೇಶನವನ್ನು ನೀವೇ ಮಾಡಿ ಅಂತ ಹೇಳಿದ ಮೇಲೆ, ಒಳ್ಳೆಯ ಉದ್ದೇಶ ಇರುವ ಚಿತ್ರ ಮಾಡುತ್ತಿದ್ದೇನೆ. ಕಥೆ ಬಗ್ಗೆ ಹೇಳುವುದಾದರೆ, ದೇವರು ನಮಗೆ ಎಲ್ಲ ನೀಡಿದ್ದಾನೆ. ಆದರೆ ಪ್ರಕೃತಿಯನ್ನು ನಾವು ಸ್ವಾರ್ಥಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿದ್ದೇವೆ. ಮನುಷ್ಯ ಎಲ್ಲವನ್ನೂ ತಯಾರು ಮಾಡಬಲ್ಲ. ಆದರೆ, ನೀರನ್ನು ತಯಾರಿಸಲು ಮಾತ್ರ ಸಾಧ್ಯವಿಲ್ಲ. ನೀರು ಯಥೇತ್ಛವಾಗಿ ದುರ್ಬಳಕೆಯಾಗುತ್ತಿದೆ. ನೀರನ್ನು ಹೇಗೆ ಸಂಪಾದನೆ ಮಾಡಹುದು ಎಂಬ ಕುರಿತಾದ ಚಿತ್ರಣ ಇಲ್ಲಿರಲಿದೆ. ಇನ್ನು, ಇದು ಸಾಮಾಜಿಕ ಕಳಕಳಿ ಇಟ್ಟುಕೊಂಡು ಮಾಡುತ್ತಿರುವ ಚಿತ್ರ. ಬೆಂಗಳೂರು ಸೇರಿದಂತೆ ಹಲವು ಕಡೆ ಚಿತ್ರೀಕರಣ ಮಾಡಲಾಗುವುದು. ಕ್ಲೈಮ್ಯಾಕ್ಸ್‌ ಚಿತ್ರದ ಹೈಲೈಟ್‌.ಅದಕ್ಕೊಂದು ದೊಡ್ಡ ಕೆರೆ ಬೇಕು. ಇಲ್ಲಿ ಬರೀ ನೀರಿನ ವಿಷಯ ಹೇಳುವುದಿಲ್ಲ. ಮನರಂಜನೆ ಜೊತೆಗೆ ಒಂದಷ್ಟು ಸಂದೇಶವೂ ಇರಲಿದೆ’ ಎನ್ನುತ್ತಾರೆ ನಿರ್ದೇಶಕ ಆಡಿಟರ್‌ ಶ್ರೀನಿವಾಸ್‌.

ನಾಯಕಿ ಅಶ್ವಿ‌ನಿಗೌಡ ಅವರಿಗೆ ಚಿತ್ರದ ಕಥೆ ಕೇಳಿದಾಗ ಮಾಡಬೇಕು ಎನಿಸಿದ್ದು ನಿಜವಂತೆ. “ಇದೊಂದು ಸಾಮಾಜಿಕ ಕಳಕಳಿ ಇಟ್ಟುಕೊಂಡು ಮಾಡುತ್ತಿರುವ ಚಿತ್ರ. ನಾನೂ ಸಹ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವುದರಿಂದ ನನ್ನ ನಿಜ ಬದುಕಿಗೂ ಈ ಪಾತ್ರ ಹತ್ತಿರವಾಗಿದೆ. ನಾನಿಲ್ಲಿ ಎನ್‌ಜಿಓದಲ್ಲಿ ಕೆಲಸ ಮಾಡುವ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಹೊಸ ವರ್ಷಕ್ಕೆ ಹೊಸತನ ಇರುವ ಚಿತ್ರ ಸಿಕ್ಕ ಖುಷಿ ನನಗಿದೆ’ ಎಂಬುದು ಅಶ್ವಿ‌ನಿ ಮಾತು.

ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಬರೆದಿರುವ ಶ್ರೀನಿವಾಸ್‌ ಕೌಶಿಕ್‌, “ನೀರಿನ ಮಹತ್ವ ಕುರಿತಾದ ಕಥೆ ಇಲ್ಲಿದ್ದರೂ, ಇಲ್ಲಿ ಬರೀ ಸಮಸ್ಯೆ ಹೇಳುವುದಿಲ್ಲ. ಚಿತ್ರದುದ್ದಕ್ಕೂ ಮನರಂಜನೆ ಸಿಗಲಿದೆ. ಅದರೊಂದಿಗೆ ಒಳ್ಳೆಯ ಉದ್ದೇಶವೂ ಇರಲಿದೆ. ಒಂದು ಸಂಸಾರ ಸರಿಯಾಗಬೇಕು, ಪ್ರಕೃತಿಯನ್ನೂ ಉಳಿಸಬೇಕೆಂಬ ವಿಷಯ ಅಡಕವಾಗಿದೆ’ ಎಂದರು.

ಇನ್ನು, ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ರಾಜೇಶ್‌ ರಾವ್‌, ಸಿನಿಮಾದಲ್ಲಿ ಒಳ್ಳೆಯ ಅವಕಾಶ ಎದುರು ನೋಡುತ್ತಿದ್ದರು. ಅವರಿಗೆ ಸಿಕ್ಕ ಒಳ್ಳೆಯ ಅವಕಾಶ ಇದು. ಕಾರ್ಪೋರೇಟ್‌ ಸಂಸ್ಥೆಯಲ್ಲಿ ಕೆಲಸ ಮಾಡುವ ವ್ಯಕ್ತಿ, ಏನಾದರೂ ಸಾಧಿಸಬೇಕೆಂದು ಹೊರಟಾಗ, ಕಣ್ಣ ಮುಂದೆ ಕೆರೆಯೊಂದನ್ನು ಅಭಿವೃದ್ಧಿಪಡಿಸುವ ಯೋಚನೆ ಬರುತ್ತೆ. ಅತ್ತ ಮನೆ, ಇತ್ತ ಸಾಮಾಜಿಕ ಕೆಲಸ ಮಾಡುವ ಮೂಲಕ ಎರಡನ್ನೂ ಹೇಗೆ ಬ್ಯಾಲೆನ್ಸ್‌ ಮಾಡುತ್ತಾನೆ ಎಂಬ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡರು ಅವರು.

ಮೈಸೂರಿನ ಸ್ಪರ್ಶಾ ಶೆಣೈ ರಾಜೇಶ್‌ರಾವ್‌ ಪತ್ನಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.  ಕೆ.ಕಲ್ಯಾಣ್‌ ಎರಡು ಹಾಡುಗಳಿಗೆ ಸಂಗೀತ ನೀಡಿದರೆ, ನಾಗರಾಜ್‌ ಅದವಾನಿ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.