ವೀಕೆಂಡ್‌ ಟ್ರಿಪ್‌ ಹೋಗುವವರ ಡಮ್ಕಿ  ಢಮಾರ್‌


Team Udayavani, Mar 31, 2017, 10:45 AM IST

31-SUCHITRA-2.jpg

ಹೆಚ್ಚು ಮಾತಾಡುವುದಿಲ್ಲ ಅಂತಲೇ ಬಂದಿದ್ದರಂತೆ ನಿರ್ದೇಶಕ ಪ್ರದೀಪ್‌ ವರ್ಮ. ಆದರೆ, ವೇದಿಕೆ ಮೇಲಿದ್ದ ಗಣ್ಯರು, ಎದುರಿಗಿದ್ದ ಸಭಿಕರನ್ನು ನೋಡಿ ಅವರಿಗೆ ಅದೇನನ್ನಿಸಿತೋ ಗೊತ್ತಿಲ್ಲ. ಮಾತಾಡುತ್ತಲೇ ಹೋದರು. ಮಾತು ಎನ್ನುವುದಕ್ಕಿಂತ ಧನ್ಯವಾದ ಸಮರ್ಪಣೆಯೇ ಮುಖ್ಯವಾಗಿತ್ತು ಎಂದರೆ ತಪ್ಪಿಲ್ಲ. ಅದಕ್ಕಾಗಿಯೇ ಮೊಬೈಲ್‌ನಲ್ಲೇ ಅವರು ಯಾರ್ಯಾರ ಹೆಸರನ್ನು ಹೇಳಬೇಕು ಎಂದು ಬರೆದುಕೊಂಡು ಬಂದ್ದಿದರು. ಒಬ್ಬೊಬ್ಬರ ಹೆಸರನ್ನು ಹೇಳಿ, ಅವರೆಲ್ಲರಿಗೆ ಧನ್ಯವಾದ ಸಮರ್ಪಿಸಿದರು ಪ್ರದೀಪ್‌ ..

“ಡಮ್ಕಿ ಢಮಾರ್‌’ ಎನ್ನುವ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಅದು. ಈ ಚಿತ್ರದ ಮೂಲಕ ಪ್ರದೀಪ್‌ ಹೀರೋ ಆಗುತ್ತಿದ್ದಾರೆ. ಇದುವರೆಗೂ ಹಲವು ಚಿತ್ರಗಳಿಗೆ ಆಡಿಯೋ ಇಂಜಿನಿಯರ್‌ ಆಗಿ ಕೆಲಸ ಮಾಡಿದ್ದ ಪ್ರದೀಪ್‌, ಈಗ “ಡಮ್ಕಿ ಢಮಾರ್‌’
ಚಿತ್ರದ ಮೂಲಕ ಮೊದಲ ಬಾರಿಗೆ ಹೀರೋ ಆಗಿದ್ದಾರೆ. ಅಷ್ಟೇ ಅಲ್ಲ, ಈ ಚಿತ್ರಕ್ಕೆ ಸಂಗೀತ ನಿರ್ದೇಶಕ ಸಹ ಅವರೇ. ಈ ಚಿತ್ರವನ್ನು ಅವರ ತಂದೆ ಸದ್ಗುಣಮೂರ್ತಿ ನಿರ್ಮಿಸುತ್ತಿದ್ದಾರೆ. ಸದ್ಗುಣಮೂರ್ತಿ ಸಹ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆಡಿಯೋ
ಎಂಜಿನಿಯರ್‌ ಆಗಿ ಗುರುತಿಸಿಕೊಳ್ಳುವುದರ ಜೊತೆಗೆ, ಹಲವು ಚಿತ್ರಗಳಿಗೆ ಕೆಲಸ ಮಾಡಿದವರು. ಅವರ ಮೇಲಿನ ಸ್ನೇಹಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಬಂದಿದ್ದರು.

ಜೊತೆಗೆ ರಾಜ್‌ ಬಹದ್ದೂರ್‌, ಮನೋಮೂರ್ತಿ, ಎಚ್‌. ವಾಸು ಮುಂತಾದವರು ಸಹ ಇದ್ದರು. ಧನ್ಯವಾದಗಳನ್ನು ಸಮರ್ಪಿಸುವುದರ ಜೊತೆಗೆ ಪ್ರದೀಪ್‌, ಈ ಚಿತ್ರದ ಬಗ್ಗೆ ಸ್ವಲ್ಪ ಮಾಹಿತಿ ನೀಡಿದರು. “ಸಾಫ್ಟ್ವೇರ್‌ ಯುವಕ-ಯುವತಿಯರು ವಾರಾಂತ್ಯದಲ್ಲಿ ಟ್ರಿಪ್‌ಗೆ ಹೋಗುತ್ತಾರೆ. ಹಾಗೆ ಹೋಗುವ ಸಂದರ್ಭದಲ್ಲಿ ಕೆಲವು ಘಟನೆಗಳಾಗುತ್ತವೆ. ಅವರು ಏನೇನು ಸಮಸ್ಯೆಗಳನ್ನು ಎದುರಿಸುತ್ತಾರೆ
ಮತ್ತು ಅವರು ಅದೆಲ್ಲದರಿಂದ ಹೇಗೆ ಹೊರಗೆ ಬರುತ್ತಾರೆ ಎನ್ನುವುದೇ ಚಿತ್ರದ ಕಥೆ’ ಎಂದು ಹೇಳಿದರು ಪ್ರದೀಪ್‌. ಮಾತು ಮುಗಿಸುವ
ಮುನ್ನ ಇಡೀ ಸಿನಿಮಾ ಬಹಳ ಕುತೂಹಲವಾಗಿ ನೋಡಿಸಿಕೊಂಡು ಹೋಗುತ್ತದೆ ಎಂದು ಸಹ ಹೇಳಿದರು.

ಸಾ.ರಾ. ಗೋವಿಂದು ಅವರು ಸದ್ಗುಣಮೂರ್ತಿಯವರೊಂದಿಗಿನ ಗೆಳೆತನದ ಬಗ್ಗೆ ಮಾತನಾಡಿದರು. ಅಷ್ಟೇ ಅಲ್ಲ, ಚಾಮುಂಡೇಶ್ವರಿ
ಸ್ಟುಡಿಯೋದಿಂದ ಅದೆಷ್ಟು ಸಂಗೀತಗಾರರು ಬದುಕುಕಟ್ಟಿಕೊಂಡಿದ್ದಾರೆ ಎನ್ನುವುದುರ ಜೊತೆಗೆ, ಪ್ರದೀಪ್‌ ಅವರು ನಾಯಕನಾಗಿ ಬೆಳೆಯಲಿ ಎಂದು ಹಾರೈಸಿದರು. ಸಂಗೀತ ನಿರ್ದೇಶಕ ಮನೋಮೂರ್ತಿ ಸಹ ಪ್ರದೀಪ್‌ಗೆ ಹಾರೈಸುವುದರ ಮೂಲಕ ಸಮಾರಂಭ
ಮುಗಿಯಿತು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.