ಅಭಿಮಾನದ ಹಾಡು


Team Udayavani, Nov 2, 2018, 6:00 AM IST

s-28.jpg

ಇತ್ತೀಚೆಗೆ ಕೆಲವು ಚಿತ್ರಗಳು ತಮ್ಮ ಕಥಾಹಂದರದ ಮೂಲಕ ಸದ್ದು ಮಾಡಿದರೆ, ಇನ್ನು ಕೆಲವು ಚಿತ್ರಗಳು ತಮ್ಮ ಶೀರ್ಷಿಕೆಯಿಂದಲೇ ಸದ್ದು ಮಾಡುತ್ತಿವೆ. ತೀರಾ ಚಿತ್ರ-ವಿಚಿತ್ರ ಎನಿಸುವ ಶೀರ್ಷಿಕೆಗಳು ಚಿತ್ರಗಳ ಒಮ್ಮೆಲೆ ಪ್ರೇಕ್ಷಕರಿಗೆ ಅರ್ಥವಾಗದ್ದಿರೂ, ಒಂದು ಕ್ಷಣ ನೋಡುಗರ ಮನಸೆಳೆಯುವುದರಲ್ಲಂತೂ ಅನುಮಾನವಿಲ್ಲ. ಇಂತಹ ಶೀರ್ಷಿಕೆಗಳ ಸಾಲಿಗೆ ಇತ್ತೀಚೆಗೆ ಸೇರುವ ಚಿತ್ರ “ಎ2ಎ2ಎ’. ಯಾವುದೇ ಸದ್ದಿಲ್ಲದೆ ತನ್ನ ಚಿತ್ರೀಕರಣ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ಎ2ಎ2ಎ’ ಚಿತ್ರ ಇದೀಗ ತನ್ನ ಹಾಡುಗಳನ್ನು ಬಿಡುಗಡೆಗೊಳಿಸುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. 

ಇತ್ತೀಚೆಗೆ “ಎ2ಎ2ಎ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್‌, ಕಿದ್ವಾಯಿ ಆಸ್ಪತ್ರೆಯ ನಿರ್ದೇಶರು ಹಾಗೂ ಹಿರಿಯ ನಿರ್ದೇಶಕ ನಂಜುಡೇ ಗೌಡ ಮೊದಲಾದವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಪೆನ್‌ ಡ್ರೈವ್‌ ಮೂಲಕ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. 

ಇನ್ನೊಂದು ವಿಶೇಷವೆಂದರೆ, ಈ ಚಿತ್ರದ ಮೂಲಕ ನಾಯಕ ಪ್ರತಾಪ್‌, ವಿಷ್ಣುವರ್ಧನ್‌ ಅಂತ ಹೆಸರು ಬದಲಿಸಿ ಕೊಂಡು ಕನ್ನಡ ಚಿತ್ರರಂಗಕ್ಕೆ ಪ್ರವೇಶಪಡೆಯುತ್ತಿದ್ದಾರೆ. ನಿಜ ಜೀವನದಲ್ಲೂ ನಟ ಸಾಹಸಿಂಹ ವಿಷ್ಣುವರ್ಧನ್‌ ಅಭಿಮಾನಿಯಾಗಿರುವ ಪ್ರತಾಪ್‌ ಅಲಿಯಾಸ್‌ ವಿಷ್ಣುವರ್ಧನ್‌, “ಎ2ಎ2ಎ’ ಚಿತ್ರದಲ್ಲೂ ವಿಷ್ಣುವರ್ಧನ್‌ ಅಭಿಮಾನಿಯಾಗಿ ವೈದ್ಯಕೀಯ ವಿದ್ಯಾರ್ಥಿಯ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ನಾಯಕನಿಗೆ ಮೂರು ವಿಭಿನ್ನ ಶೇಡ್‌ನ‌ ಪಾತ್ರಗಳಿದ್ದು, ತುಂಬಾ ಸವಾಲಿನ ಪಾತ್ರವನ್ನು ನಿರ್ವಹಿಸಿದ್ದಾರಂತೆ. ಚಿತ್ರದಲ್ಲಿ ಅಮೃತಾ ರಾಜ್‌ ವೈದ್ಯಕೀಯ ವಿದ್ಯಾರ್ಥಿನಿ ಪಾತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ .ಈ ಹಿಂದೆ  “ಪೇಪರ್‌ ದೋಣಿ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಆರ್‌.ಕೆ ನಾಥ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 

ಚಿತ್ರದ ಶೀರ್ಷಿಕೆಯ ಬಗ್ಗೆ ಮಾತನಾಡುವ ನಿರ್ದೇಶಕರು, ಕನ್ನಡದ ಹಿಟ್‌ ಚಿತ್ರಗಳಾದ ಜೋಗಿ, ಉಪೇಂದ್ರ, ಹುಚ್ಚ, ಬಂಧನ, ಕಸ್ತೂರಿ ನಿವಾಸ ಚಿತ್ರಗಳನ್ನು ಮಾದರಿಯನ್ನಾಗಿ ಇಟ್ಟು ಕೊಂಡೆ “ಎ2ಎ2ಎ ‘ಸಿನಿಮಾ ಮಾಡಿರುವುದಾಗಿ ಹೇಳುತ್ತಾರೆ. ಸದ್ಯ ಹಾಡುಗಳ ಮೂಲಕ ಹೊರಬಂದಿರುವ “ಎ2ಎ2ಎ’ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಚಿತ್ರಕ್ಕೆ ಹಿತನ್‌ ಹಾಸನ್‌ ಸಂಗೀತವಿದೆ. ಇದರಲ್ಲಿ ಒಂದು ಹಾಡನ್ನು ಸಾಹಸ ಸಿಂಹ ವಿಷ್ಣುವರ್ಧನ್‌ ಅವರಿಗಾಗಿಯೇ ವಿಶೇಷವಾಗಿ ಸಂಯೋಜಿಸಲಾಗಿದೆ. ಈ ಹಾಡು ವಿಷ್ಣು ಅಭಿಮಾನಿಗಳಿಗೆ ಇಷ್ಟವಾಗುತ್ತೆ ಎನ್ನುವುದು ಚಿತ್ರತಂಡದ ನಂಬಿಕೆ. ಹಿರಿಯ ನಟಿ ರೂಪಾದೇವಿ ಬಹು ದಿನಗಳ ನಂತರ ಈ ಚಿತ್ರದ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. “ಎ2ಎ2ಎ’ ಚಿತ್ರಕ್ಕೆ ಆದಿ ,ಅಂತ್ಯ ,ಆರಂಭ ಎಂಬ ಅಡಿಬರಹವಿದ್ದು, ಡಿ.ಜೆ ಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರತಂಡದ ಯೋಜನೆಯಂತೆ ಎಲ್ಲ ನಡೆದರೆ ಮುಂಬರುವ ಡಿಸೆಂಬರ್‌ ವೇಳೆಗೆ “ಎ2ಎ2ಎ’ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.