ಓಜಸ್‌ನಲ್ಲಿ ಸ್ತ್ರೀ ಶಕ್ತಿ


Team Udayavani, Jan 31, 2020, 5:35 AM IST

youth-21

ಮಹಿಳೆಯೊಬ್ಬಳು ಸುಶಿಕ್ಷಿತೆಯಾದರೆ, ಸಬಲೆಯಾದರೆ ಕೇವಲ ತನ್ನ ಮನೆಗೆ ಮಾತ್ರವಲ್ಲ ಇಡೀ ಸಮಾಜಕ್ಕೇ ಬೆಳಕಾಗುತ್ತಾಳೆ. ಈಗ ಇದೇ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ಚಿತ್ರತಂಡ, ಮಹಿಳೆಯೊಬ್ಬಳ ಸಾಧನೆಯ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದೆ. ಅಂದಹಾಗೆ, ಆ ಚಿತ್ರದ ಹೆಸರು “ಓಜಸ್‌’. “ಓಜಸ್‌’ ಎಂದರೆ ಶಬ್ಧಕೋಶದಲ್ಲಿ ಬೆಳಕು ಎಂಬ ಅರ್ಥವಿದೆ. ಒಬ್ಬ ಮಹಿಳೆಯು ಬೆಳೆದು ನಿಂತರೆ, ಮನೆ-ಮನಗಳ ಜೊತೆ ಸಮಾಜವನ್ನೇ ಬೆಳಗುತ್ತಾಳೆ. ಅದಕ್ಕಾಗಿ ಚಿತ್ರದ ಕಥೆ ಮತ್ತು ಆಶಯಕ್ಕೆ ತಕ್ಕಂತೆ ಇರುವುದರಿಂದ ಚಿತ್ರಕ್ಕೆ “ಓಜಸ್‌’ ಎಂದು ಹೆಸರಿಡಲಾಗಿದೆ ಎನ್ನುತ್ತದೆ ಚಿತ್ರತಂಡ.

ಸುಮಾರು ಎರಡು-ಮೂರು ವರ್ಷಗಳ ಹಿಂದೆಯೇ ಶುರುವಾದ ಈ ಚಿತ್ರ ಇದೀಗ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಇದೇ ಫೆಬ್ರವರಿ 7ಕ್ಕೆ ತೆರೆಗೆ ಬರುತ್ತಿದೆ. “ರಜತ ರಘುನಾಥ ಪೊ›ಡಕ್ಷನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ರಜತ ರಘುನಾಥ, ಡಾ. ಎಡ್ವರ್ಡ್‌ ಡಿಸೋಜ ನಿರ್ಮಿಸಿ¨ªಾರೆ. ಚಿತ್ರಕ್ಕೆ ಸಿ.ಜೆ ವರ್ಧನ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಇಲ್ಲಿಯವರೆಗೆ ಗ್ಲಾಮರಸ್‌ ಮತ್ತು ಬೋಲ್ಡ್‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನೇಹಾ ಸಕ್ಸೇನಾ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಹಿರಿಯ ನಟಿ ಭವ್ಯಾ, ಹಿರಿಯ ನಟರಾದ ಡಿಂಗ್ರಿ ನಾಗರಾಜ್‌, ಮೈಸೂರು ರಮಾನಂದ್‌, ಯತಿರಾಜ್‌, ಜಿ. ಮೂರ್ತಿ, ಹನುಮಂತ ರಾಜು, ದುಬೈ ರಫೀಕ್‌, ಶೋಭಾ, ಶಿವಾನಿ ಮೊದಲಾದವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಬಿಡುಗಡೆಗೂ ಮುನ್ನ “ಓಜಸ್‌’ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ಕೆಲ ವಿಷಯಗಳ ಬಗ್ಗೆ ಮಾತನಾಡಿತು.

“ಇದೊಂದು ಮಹಿಳಾ ಪ್ರಧಾನ ಚಿತ್ರ. ಬಡ ಕುಟುಂಬದಲ್ಲಿ ಹುಡುಗಿಯೊಬ್ಬಳು ಅನೇಕ ಕಷ್ಟ-ಕಾರ್ಪಣ್ಯಗಳನ್ನು ಎದುರಿಸಿ ನಿಂತು ಕೊನೆಗೆ ಡಿ.ಸಿ ಆಗುತ್ತಾಳೆ. ಬಾಲ್ಯದಲ್ಲಿ ಒಂದು ಥರದ ಸವಾಲುಗಳನ್ನು ಎದುರಿಸಿ ಗೆದ್ದ ಹುಡುಗಿಗೆ ನಂತರ, ಭ್ರಷ್ಟಾಚಾರದಂಥ ಸವಾಲುಗಳು ಎದುರಾಗುತ್ತದೆ. ತನ್ನ ಹಾದಿಯಲ್ಲಿ ರಾವಣನ ಗುಣವನ್ನು ಹೊಂದಿರುವ ವ್ಯಕ್ತಿಗಳನ್ನು ಹೇಗೆ ರಾಮನ ಗುಣದ ವ್ಯಕ್ತಿಗಳನ್ನಾಗಿ ಬದಲು ಮಾಡುತ್ತಾಳೆ ಅನ್ನೋದೆ ಚಿತ್ರದ ಕಥೆ. ಇಡೀ ಚಿತ್ರದಲ್ಲಿ ಎಲ್ಲೂ ಫೈಟ್ಸ್‌ ಆಗಲಿ, ವೈಲೆಂಟ್‌ ಆಗಲಿ ಇಲ್ಲ’ ಎಂದು ಚಿತ್ರದ ಕಥಾಹಂದರ ಬಿಚ್ಚಿಟ್ಟಿತು ಚಿತ್ರತಂಡ.

“ಓಜಸ್‌’ ಚಿತ್ರಕ್ಕೆ ಪಿ.ವಿ.ಆರ್‌. ಸ್ವಾಮಿ ಛಾಯಾಗ್ರಹಣ, ಜೆ. ಗುರುಪ್ರಸಾದ್‌ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಕಾರ್ತಿಕ್‌ ವೆಂಕಟೇಶ್‌ ಸಂಗೀತ ಸಂಯೋಜಿಸಿದ್ದಾರೆ. ಬೆಂಗಳೂರು, ತುಮಕೂರು, ಮದ್ದೂರು ಮೊದಲಾದ ಕಢೆಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದೆ.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.