ಸ್ಮೈಲ್ ಎಸೆದ ಯಶ್‌! ನಗುವೊಂದು ಆಯುಧ, ನಗುವೊಂದು ಔಷಧ


Team Udayavani, Jan 20, 2017, 3:45 AM IST

Smile-Please_(150).jpg

“ಗಾಂಧಿನಗರಕ್ಕೆ ಬಂದ ಸಂದರ್ಭದಲ್ಲಿ ಬಹುತೇಕ ನಿರ್ಮಾಪಕರ ಹಿಂದೆ ಅಲೆದಾಡಿದ್ದುಂಟು. ಆದರೆ, ಕೆ.ಮಂಜು ಅವರನ್ನು ಭೇಟಿ ಮಾಡಿ ಕಥೆ ಹೇಳಿದ ಎರಡು ದಿನದಲ್ಲೇ ಚಿತ್ರಕ್ಕೆ ಚಾಲನೆ ಸಿಕ್ಕಿತು’

“ನಗು ಎಂಬ ವೆಪನ್‌ ಲೈಫ್ನಲ್ಲಿದ್ದರೆ ಏನು ಬೇಕಾದರೂ ಸಾಧಿಸಬಹುದು. ಜಗತ್ತಿನಲ್ಲಿ ಭಾಷೆ ಗೊತ್ತಿಲ್ಲದಿದ್ದರೂ, ಒಂದು ಸ್ಮೈಲ್ನಿಂದ ಗೆಳೆತನವೇ ಸೃಷ್ಟಿಯಾಗುತ್ತೆ…’ ಹೀಗೆ ಸ್ಮೈಲ್ ಮಾಡುತ್ತಲೇ ಹೇಳುತ್ತಾ ಹೋದರು ನಟ ಯಶ್‌. 
ಸಂದರ್ಭ, “ಸ್ಮೈಲ್ ಪ್ಲೀಸ್‌’ ಆಡಿಯೋ ಸಿಡಿ ಬಿಡುಗಡೆ. ಚಿತ್ರದ ಮೂರು ಹಾಡುಗಳು ಮತ್ತು ಟ್ರೇಲರ್‌ವೊಂದನ್ನು ತೋರಿಸಿದ ಚಿತ್ರತಂಡ, ಯಶ್‌ ಅವರಿಂದ ಆಡಿಯೋ ಸಿಡಿ ಬಿಡುಗಡೆ ಮಾಡಿಸಿತು. ಸಿಡಿ ರಿಲೀಸ್‌ ಮಾಡಿದ ಯಶ್‌, “ಚಿತ್ರದ ಹಾಡು ಮತ್ತು ಟ್ರೇಲರ್‌ ನೋಡಿದಾಗ, ಎಲ್ಲೋ ಒಂದು ಕಡೆ ಪಾಸಿಟಿವ್‌ ವಿಷಯಗಳಿವೆ ಎನಿಸುತ್ತೆ. ಲೈಫ್ ಬಗ್ಗೆ ಸಿನಿಮಾ ಇರಬಹುದೇನೋ. ಚಿಕ್ಕ ಚಿಕ್ಕ ಎಮೋಷನ್ಸ್‌ ಇಲ್ಲಿ ಕಾಣಿಸುತ್ತಿವೆ. ಎಷ್ಟೇ ಕಷ್ಟವಿದ್ದರೂ, ಒಂದು ನಗು ಎಲ್ಲವನ್ನೂ ಮರೆಸುತ್ತೆ. ಇದೊಂದು ಒಳ್ಳೆಯ ಸಿನಿಮಾ ಆಗಿ ಹೊರಬರಲಿ. ಇಲ್ಲಿರುವ ಪ್ರತಿಯೊಬ್ಬರಿಗೂ ಚಿತ್ರ ಯಶಸ್ಸು ಕೊಡಲಿ’ ಅಂತ ಶುಭಹಾರೈಸಿದರು ಯಶ್‌.

ನಿರ್ದೇಶಕ ರಘು ಸಮರ್ಥ್ಗೆ “ಸ್ಮೈಲ್ ಪ್ಲೀಸ್‌’ ಮೊದಲ ಚಿತ್ರ. ಹಾಗಾಗಿ, ಅಂದು ಅವರು ಎಲ್ಲರಿಗೂ ಥ್ಯಾಂಕ್ಸ್‌ ಹೇಳುವುದನ್ನು ಮರೆಯಲಿಲ್ಲ. ಈ ಸಿನಿಮಾದ ಹಿಂದೆ ದುಡಿದ ಪ್ರತಿಯೊಬ್ಬರ ಸಹಕಾರವನ್ನು ಗುಣಗಾನ ಮಾಡಿದರು. “ಗಾಂಧಿನಗರಕ್ಕೆ ಬಂದ ಸಂದರ್ಭದಲ್ಲಿ ಬಹುತೇಕ ನಿರ್ಮಾಪಕರ ಹಿಂದೆ ಅಲೆದಾಡಿದ್ದುಂಟು. ಆದರೆ, ಕೆ.ಮಂಜು ಅವರನ್ನು ಭೇಟಿ ಮಾಡಿ ಕಥೆ ಹೇಳಿದ ಎರಡು ದಿನದಲ್ಲೇ ಚಿತ್ರಕ್ಕೆ ಚಾಲನೆ ಸಿಕ್ಕಿತು. ಚಿತ್ರದಲ್ಲಿ ಒಳ್ಳೆಯ ಸಂದೇಶವಿದೆ.

ಮನರಂಜನೆ ಇಲ್ಲಿ ಹೈಲೆಟ್‌ ಆಗಿದೆ. ಜಗದೀಶ್‌ ವಾಲಿ ಚಿತ್ರದ ಕಣ್ಣು. ಅನೂಪ್‌ ಸೀಳಿನ್‌ ನನ್ನ ನಿರೀಕ್ಷೆ ಮೀರಿ ಹಾಡುಗಳನ್ನು ಕೊಟ್ಟಿದ್ದಾರೆ. ಇನ್ನು, ಗುರುನಂದನ್‌, ಕಾವ್ಯಾಶೆಟ್ಟಿ, ರಂಗಾಯಣ ರಘು ಎಲ್ಲರೂ ನನ್ನ ಕನಸಿಗೆ ಬಣ್ಣ ತುಂಬಿದ್ದಾರೆ. ಮೊದಲ ಪ್ರಯತ್ನದಲ್ಲಿ ತಪ್ಪುಗಳಿದ್ದರೆ ಬದಿಗೊತ್ತಿ ಸಹಕರಿಸಿ’ ಎಂದರು ರಘು ಸಮರ್ಥ್.

“ಅವಕಾಶ ಕೊಟ್ಟ ನಿರ್ದೇಶಕ, ನಿರ್ಮಾಪಕರಿಗೆ ಥ್ಯಾಂಕ್ಸ್‌’ ಎಂದು ಮಾತಿಗಿಳಿದ ಗುರುನಂದನ್‌, “ಇಲ್ಲಿ ಮನರಂಜನೆಯೇ ಹೈಲೆಟ್‌. ಮೊದಲ ಸಿನಿಮಾ ನೋಡಿದವರಿಗೆ ಈ ಚಿತ್ರವೂ ಇಷ್ಟವಾಗಲಿದೆ. ಕುಟುಂಬ ಸಮೇತ ಬಂದು ಸಿನಿಮಾ ನೋಡಬೇಕು. ಇದು ಎಲ್ಲಾ ವರ್ಗಕ್ಕೂ ಸೀಮಿತವಾದ ಸಿನಿಮಾ’ ಅಂದರು ಗುರುನಂದನ್‌.

ಕೆ.ಮಂಜು ಇಲ್ಲಿ ಹಾಡೊಂದಕ್ಕೆ ನೃತ್ಯ ನಿರ್ದೇಶನವನ್ನೂ ಮಾಡಿದ್ದಾರಂತೆ. ಅಷ್ಟೇ ಅಲ್ಲ, ಹಾಡಲ್ಲಿ ನಾಯಕ, ನಾಯಕಿ ನಡುವೆ ಲಿಪ್‌ಲಾಕ್‌ ಮಾಡಿಸುವಲ್ಲಿಯೂ ಯಶಸ್ವಿಯಾಗಿದ್ದಾರಂತೆ. ಕಥೆ, ಸಂದರ್ಭಕ್ಕೆ ಪೂರಕವಾಗಿದ್ದರಿಂದ ಲಿಪ್‌ಲಾಕ್‌ ಮಾಡಿಸಲಾಗಿದೆ ಎಂಬುದು ಮಂಜು ಮಾತು.

ಇನ್ನು, ಕಾವ್ಯಾ ಶೆಟ್ಟಿಗೆ ಶೀರ್ಷಿಕೆಯಂತೆಯೇ ಸಿನಿಮಾವೂ ಮೂಡಿಬಂದಿರುವ ಖುಷಿ ಇದೆಯಂತೆ. ಸಿನಿಮಾಗೆ ಬಂದವರು ಆರಂಭದಿಂದ ಅಂತ್ಯದಿಂದ ನಗ್ತಾನೇ ಇರ್ತಾರೆ ಎಂಬ ಗ್ಯಾರಂಟಿ ಕೊಟ್ಟರು ಕಾವ್ಯಾ. ನೇಹಾ ಪಾಟೀಲ್‌, ಅನೂಪ್‌ ಸೀಳಿನ್‌, ರಂಗಾಯಣ ರಘು “ಸ್ಮೈಲ್’ ಕೊಡುತ್ತಲೇ ಸಿನಿಮಾ ಬಗ್ಗೆ ಮಾತಾಡಿ ಸುಮ್ಮನಾದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.