ಕಿರುತೆರೆಯಲ್ಲಿ ಶ್ರುತಿ


Team Udayavani, Jul 21, 2019, 5:37 AM IST

Shruti,-serial

ಕನ್ನಡ ಚಿತ್ರರಂಗದ 80-90ರ ದಶಕದ ಜನಪ್ರಿಯ ನಾಯಕ ನಟಿ ಶ್ರುತಿ ಇಂದಿಗೂ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವವರು. ಸಿನಿಮಾ, ರಿಯಾಲಿಟಿ ಶೋಗಳು, ರಾಜಕಾರಣ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಶ್ರುತಿ ಈಗ ಧಾರಾವಾಹಿಯ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇಲ್ಲಿಯವರೆಗೆ ಸಿನಿಮಾ, ರಂಗಭೂಮಿ, ರಿಯಾಲಿಟಿ ಶೋಗಳಲ್ಲಿ ಹಲವು ಪಾತ್ರಗಳನ್ನು ಸುಲಲಿತವಾಗಿ ನಿರ್ವಹಿಸಿರುವ ಶ್ರುತಿ, ಇದೇ ಮೊದಲ ಬಾರಿಗೆ ಧಾರಾವಾಹಿಯೊಂದರ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಇನ್ನೊಂದು ವಿಶೇಷವೆಂದರೆ, ಅದೂ ಕೂಡ ಧಾರಾವಾಹಿಯ ಅತಿಥಿ ಪಾತ್ರದಲ್ಲಿ!

ಹೌದು, ಕನ್ನಡದ ಖಾಸಗಿ ವಾಹಿನಿ ಯೊಂದರಲ್ಲಿ ಪ್ರಸಾರವಾಗುತ್ತಿರುವ ಸೇವಂತಿ ಧಾರಾವಾಹಿ ಈಗ ನೂರನೆ ಸಂಚಿಕೆಯ ಹೊಸ್ತಿಲಿನಲ್ಲಿದ್ದು, ಪ್ರೇಕ್ಷಕರನ್ನು ಮತ್ತಷ್ಟು ಮನರಂಜಿಸಿ, ರೋಚಕ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಶ್ರುತಿ ಅವರನ್ನು ಗೆಸ್ಟ್‌ ಅಪೀಯರೆನ್ಸ್‌ ನಲ್ಲಿ ಪ್ರೇಕ್ಷಕರ ಮುಂದೆ ಕರೆತರುವ ಆಲೋಚನೆ ಧಾರಾವಾಹಿ ತಂಡದ್ದು.

ಮೊದಲ ಬಾರಿಗೆ ಧಾರಾವಾಹಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವುದರ ಬಗ್ಗೆ ಮಾತನಾಡುವ ಶ್ರುತಿ, “ನಾನೊಬ್ಬ ಕಲಾವಿದೆಯಾಗಿ ಎಲ್ಲಾ ಥರದ ಪಾತ್ರಗಳಲ್ಲೂ ಕಾಣಿಸಿ ಕೊಳ್ಳಲು ಬಯಸುತ್ತೇನೆ. ಅಭಿನಯದ ವಿಚಾರಕ್ಕೆ ಬಂದಾಗ ನನಗೆ ರಂಗಭೂಮಿ, ಸಿನಿಮಾ, ಸೀರಿಯಲ್‌ ಅಂಥ ಯಾವ ಬೇಧ-ಭಾವವೂ ಇಲ್ಲ. ಸಿಕ್ಕ ಪಾತ್ರಕ್ಕೆ ನ್ಯಾಯ ಒದಗಿಸಿ ಅಭಿನಯಿಸುವುದಷ್ಟೇ ನನ್ನ ಕೆಲಸ. ಧಾರಾವಾಹಿಯ ಪಾತ್ರ ನನಗೆ ಹೊಸದಿರಬಹುದು, ಆದರೆ ಕಿರುತೆರೆ ನನಗೆ ಹೊಸದಲ್ಲ. ಈಗಾಗಲೆ ಕಿರುತೆರೆಯ ಕೆಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿ, ಜಡ್ಜ್ ಆಗಿ ಕೆಲಸ ಮಾಡಿದ್ದೇನೆ. ಈಗ ಇದೊಂದು ಹೊಸ ಅವಕಾಶ ಬಂದಿದೆ. ಅದನ್ನೂ ಖುಷಿಯಿಂದ ಸ್ವೀಕರಿಸಿದ್ದೇನೆ’ ಎನ್ನುತ್ತಾರೆ.

ಇನ್ನೊಂದು ವಿಶೇಷವೆಂದರೆ, ಐದು ಭಾಷೆಯಲ್ಲಿ ರಿಲೀಸ್‌ ಆಗುತ್ತಿರುವ ದಮಯಂತಿ ಟೀಸರ್‌ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್‌ ನಟರ ಬಳಿ ಅದ್ಧೂರಿಯಾಗಿ ರಿಲೀಸ್‌ ಮಾಡಿಸುವ ಪ್ಲಾನ್‌ನಲ್ಲಿದೆ ಚಿತ್ರತಂಡ. ಆಗಸ್ಟ್‌ ವೇಳೆಗೆ ದಮಯಂತಿಯ ಆಡಿಯೋ ಹೊರಬರಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್‌ ವೇಳೆಗೆ ದಮಯಂತಿ ಥಿಯೇಟರ್‌ನಲ್ಲಿ ದರ್ಶನ ಕೊಡಲಿದ್ದಾಳೆ.

ಒಟ್ಟಾರೆ ಹೊಸ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ಸಿದ್ಧತೆಯಲ್ಲಿ ಶ್ರುತಿ ಅವರಿದ್ದರೆ, ಶ್ರುತಿ ಅವರ ಸ್ಪೆಷಲ್‌ ಎಂಟ್ರಿಯಿಂದ ಹೊಸ ಜೋಶ್‌ನಲ್ಲಿ ಮುನ್ನುಗ್ಗುವ ನಿರೀಕ್ಷೆಯಲ್ಲಿದೆ ಧಾರಾವಾಹಿಯ ತಂಡ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.