ಚಾಲುಕ್ಯರ ಸಮಾಧಿಗಳ ಸುತ್ತ


Team Udayavani, Dec 22, 2019, 4:34 AM IST

cd-2

ವಾಸ್ತುಶಿಲ್ಪ ಸುವರ್ಣಯುಗಕ್ಕೆ ಸಾಕ್ಷಿಯಾಗಿದ್ದ ಚಾಲುಕ್ಯ ರಾಜರ ಸಮಾಧಿಗಳ ಸಮಗ್ರ ಅಧ್ಯಯನ ನಡೆದರೆ ಇತಿಹಾಸದಲ್ಲಿ ಮತ್ತೂಂದು ಅಧ್ಯಾಯ ತೆರೆದುಕೊಂಡೀತು.

ಭಾರತದಲ್ಲಿ ಹಿಂದೂ ದೇವಾಲಯಗಳ ನಿರ್ಮಾಣದ ಅತಿ ದೊಡ್ಡ ಆಂದೋಲನವನ್ನು ಆರಂಭಿಸಿದವರು ಚಾಲುಕ್ಯ ಅರಸರು. ಅವರ ಸಮಾಧಿಗಳು ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲು ಸಮೀಪದ ಹುಲಿಗೆಮ್ಮನಕೊಳ್ಳದಲ್ಲಿ ಪತ್ತೆಯಾಗಿವೆ.

ಐಹೊಳೆ, ಬಾದಾಮಿ, ಪಟ್ಟದಕಲ್ಲು, ಮಹಾಕೂಟ ದೇವಾಲಯಗಳನ್ನು ನಿರ್ಮಿಸಿ “ಹಿಂದೂ ವಾಸ್ತುಶಿಲ್ಪದ ಪ್ರಯೋಗ ಶಾಲೆ’ ಅಥವಾ ಹಿಂದೂ ವಾಸ್ತುಶಿಲ್ಪದ ತೊಟ್ಟಿಲು’ ಎಂದೇ ಪ್ರಸಿದ್ಧಿಯಾಗಿರುವ ಚಾಲುಕ್ಯರ ಬಗ್ಗೆ ಕಳೆದ ನಾಲ್ಕೈದು ದಶಕಗಳಿಂದ ಅನೇಕ ವಿದ್ವಾಂಸರು ಸಂಶೋಧನೆಯಲ್ಲಿ ತೊಡಗಿದ್ದರು. ಈ ಪರಂಪರೆಯನ್ನು ಕೇವಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು. ಕೇವಲ 30 ಕಿ.ಮೀ. ವ್ಯಾಪ್ತಿಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವಿವಿಧ ದೇವಾಲಯಗಳು ಇಡೀ ದೇಶದಲ್ಲಿ ಕಂಡುಬರುವುದು ಚಾಲುಕ್ಯರು ಆಳಿದ ಈ ನಾಡಿನಲ್ಲಿ ಮಾತ್ರ.

ದೇವಾಲಯದ ನಿರ್ಮಾಣದಲ್ಲಿ ವಿವಿಧ ಪ್ರಯೋಗಗಳು ಮತ್ತು ಪ್ರಭೇದಗಳನ್ನು ಒಳಗೊಂಡ ಕಾರಣ ಇದನ್ನು ದೇವಾಲಯ ವಾಸ್ತುಶಿಲ್ಪದ ತೊಟ್ಟಿಲು ಎಂದು ಪ್ರಸ್ಸಿ ಬ್ರೌನ್‌ ಉಲ್ಲೇಖೀಸುತ್ತಾನೆ. ಹಿಂದೂ ವಾಸ್ತುಶಿಲ್ಪ ನಾಗರಿಕತೆಯ ಇತಿಹಾಸದಲ್ಲಿ ಅತಿದೊಡ್ಡ ದೇವಾಲಯ ನಿರ್ಮಾಣ ಚಳುವಳಿ, ಕ್ರಿ.ಶ. 540-800 ರಿಂದ 250 ನೂರು ವರ್ಷಗಳಿಗೂ ಹೆಚ್ಚು ಕಾಲ ಮುಂದುವರೆದಿದೆ.

6ನೇ ಶತಮಾನದಿಂದ 8ನೇ ಶತಮಾನದವರೆಗೆ ನಡೆದ ಈ ದೇವಾಲಯಗಳ ನಿರ್ಮಾಣದ ಆಂದೋಲನ ಹೊಸ ಶಿಲ್ಪಕಲಾ ಪರಂಪರೆಗೆ ದಾರಿದೀಪವಾಯಿತು. ದ್ರಾವಿಡ ಹಾಗೂ ನಾಗರ ಶೈಲಿಯ ಈ ದೇವಾಲಯಗಳು ಚಾಲುಕ್ಯರ ಶಿಲ್ಪಕಲೆ ಪರಂಪರೆಯ ಪರಾಕಾಷ್ಠೆಯನ್ನು ಎತ್ತಿ ತೋರುತ್ತವೆ. ಇಂತಹ ಮಹಾನ್‌ ರಾಜರು ಬದುಕಿ ಬಾಳಿದ ಜೀವನ ವೃತ್ತಾಂತ ರಹಸ್ಯಮಯ.

ಚಾಲುಕ್ಯರು ಬಾಳಿದ ಅರಮನೆಗಳ ಬಗ್ಗೆ ಯಾವ ಉಲ್ಲೇಖವೂ ಇಲ್ಲ ಮತ್ತು ಅರಮನೆಗಳ ಕುರುಹುಗಳೂ ಇಲ್ಲ. ಸಾವಿನ ನಂತರ ಆಡಂಬರದ ಸಮಾಧಿ ನಿರ್ಮಾಣವನ್ನೂ ಮಾಡಲಿಲ್ಲ. ಇವರ ಸಮಾಧಿಗಳೆಲ್ಲಿ ಎಂಬುದೇ ಸಂಶೋಧಕರಿಗೆ ಸವಾಲಾಗಿತ್ತು. ಶಿವ ಮತ್ತು ವಿಷ್ಣುವನ್ನು ನಂಬಿದ ರಾಜರು ತಮ್ಮ ಸಾವನ್ನು ಸಹ ರಹಸ್ಯಮಯಗೊಳಿಸಿರುವುದು ಆಶ್ಚರ್ಯ. ಆದರೆ 2005ರಿಂದ ಸತತ ಹದಿನಾಲ್ಕು ವರ್ಷಗಳ ಕಾಲ ಚಾಲುಕ್ಯರ ನಾಡಿನ ಸಂಶೋಧನೆ ನಡೆದಿದೆ. ಈ ಹಾದಿಯಲ್ಲಿ ಅನೇಕ ರೋಚಕ ವಿಷಯಗಳು ಕಂಡುಬಂದಿವೆ. ಚಾಲುಕ್ಯರ ನಾಡಿನಲ್ಲಿ ಬೆಳಕಿಗೆ ಬಾರದ ಶಕ್ತಿ ಆರಾಧನೆ ತಂತ್ರಸಾಧನೆಗಳು ಅಚ್ಚರಿ ಮೂಡಿಸಿವೆ.

ಚಾಲುಕ್ಯ ರಾಜವಂಶಸ್ಥರ ಮೂಲ ಸ್ಥಾನ ಹಾಗೂ ಇತಿಹಾಸದ ಬಗ್ಗೆ ಅನೇಕ ಸಂಶೋಧನಾಕಾರರು ವಿಚಾರಗಳನ್ನು ಮಂಡಿಸಿದ್ದಾರೆ. ತುಂಗಭದ್ರಾ ಸುತ್ತಮುತ್ತಲಿನವರೆಂದು, ಸ್ಥಳೀಯ ಆಂಧ್ರದ ಗಡಿಭಾಗದ ವರೆಂದು, ಅಲ್ಲದೆ ಇವರು ಸ್ಥಳೀಯ ಪಾಳೆಗಾರರೆಂದು ಗುರುತಿಸಿದ್ದುಂಟು. ಇತಿಹಾಸಜ್ಞ ಡಾ. ಶೀಲಾಕಾಂತ ಪತ್ತಾರ ಅವರ ಪ್ರಕಾರ ಚಾಲುಕ್ಯರು ಕನ್ನಡನಾಡಿನವರು. ಸ್ಥಳೀಯ ಚಲಕಿ, ಸಲುಕಿ, ಸಲಕಿ, ಎಲ್ಲವೂ ದೇಶಿಯ ನಾಮಗಳಿದ್ದು ಇವರೆಲ್ಲರೂ ಕೃಷಿಕರು. ಚಾಲುಕ್ಯರ ನಾಡಿನಲ್ಲಿ ಸತತ ಮೂವತ್ತು ವರ್ಷ ಸಂಶೋಧನೆ ಕೈಗೊಂಡಿರುವ ವಿದೇಶಿ ವಿದ್ವಾಂಸ ಡಾ. ಜಾರ್ಜ್‌ ಮಿಶೆಲ್‌ ಒಟ್ಟು 16 ರಾಜವಂಶಸ್ಥರ ಪೀಳಿಗೆಯಲ್ಲಿ 7 ಪ್ರಮುಖರನ್ನು ಉಲ್ಲೇಖೀಸಿರುತ್ತಾರೆ. 6ನೆಯ ಶತಮಾನದ ಆರಂಭದಲ್ಲಿ ಜಯಸಿಂಹನಿಂದ ಆರಂಭಗೊಂಡ ಈ ವಂಶ 757ರಲ್ಲಿ ಕೀರ್ತಿವರ್ಮನವರೆಗೆ ಹಬ್ಬಿದೆ.

ಹುಲಿಗೆಮ್ಮನ ಕೊಳ್ಳದ ಸಮಾಧಿ ರೂಪದ ದೇವಾಲಯಗಳು ಪಟ್ಟದಕಲ್ಲು ಹತ್ತಿರದ ಭದ್ರ ನಾಯಕನ ಜಾಲಿಹಾಳ ಹತ್ತಿರದಲ್ಲಿವೆ. ಈ ಪ್ರದೇಶದಲ್ಲಿ 2ನೇ ಪುಲಿಕೇಶಿ ಕೆಲಕಾಲ ವಾಸಿಸಿರುವ ಉಲ್ಲೇಖವಿದೆ. ಇಲ್ಲಿರುವ 11 ಚಿಕ್ಕ ಚಿಕ್ಕ ದೇವಾಲಯಗಳು ಹನ್ನೊಂದು ರಾಜರ ಸಮಾಧಿಗಳು ದೇಶದ ಪ್ರಮುಖ 12 ಜ್ಯೋತಿರ್ಲಿಂಗಗಳ ರೂಪವೆಂದು ಸ್ಥಳೀಯರು ತಪ್ಪಾಗಿ ಅರ್ಥೈಸಿದ್ದಾರೆ. ಹಿಂದೂ ಧರ್ಮದ ಪ್ರಕಾರ ಒಂದೇ ವಂಶಸ್ಥರ ಅಂತ್ಯಕ್ರಿಯೆಗಳನ್ನು ಒಂದೆಡೆ ಮಾಡುವುದು ರೂಢಿ. ಅಲ್ಲದೆ ಚಾಲುಕ್ಯ ರಾಜರ ಅಸ್ತಿ ಅಂತ್ಯಕ್ರಿಯೆಗಳನ್ನು ಹುಲಿಗೆಮ್ಮನ ಕೊಳ್ಳದ ಬೆಟ್ಟದಲ್ಲಿ ಮಾಡಿ ಅದರ ಮೇಲೆ ಲಿಂಗಗಳನ್ನು ಸ್ಥಾಪಿಸಿ ಚಿಕ್ಕ ಚಿಕ್ಕ ದೇವಸ್ಥಾನ ನಿರ್ಮಿಸಲಾಗಿದೆ.

ಈ ರಾಜವಂಶಸ್ಥರ ರುಧ್ರಭೂಮಿ ಇಲ್ಲಿರುವ ಬಗ್ಗೆ ಅನೇಕ ಐತಿಹ್ಯಗಳಿವೆ. ಇದನ್ನು ಪುಷ್ಟೀಕರಿಸುವಂತೆ ಶಿಖರವಲ್ಲದ ಒಂದು ದೇವಾಲಯದ ಮಂಟಪದಲ್ಲಿ 2ನೇ ವಿಕ್ರಮಾದಿತ್ಯನ ಅಸ್ತಿಗಳನ್ನು ಸಮಾಧಿ ಮಾಡಲಾಗಿರುವ ಬಗ್ಗೆ ಅಲ್ಲಿರುವ ಶಾಸನದಲ್ಲಿ ಉಲ್ಲೇಖೀಸಲಾಗಿದೆಯೆಂದು ಡಾ. ಜಾರ್ಜ್‌ ಮಿಶೆಲ್‌ ಸಂಶೋಧಿಸಿದ್ದಾರೆ.

ಉಳಿದ ಯಾವ ರಾಜರ ಸಮಾಧಿಗಳ ಬಗ್ಗೆ ಉಲ್ಲೇಖ ವಿಲ್ಲವಾದರೂ ಹಿಂದೂ ಸಂಪ್ರದಾಯದಂತೆ ರಾಜವಂಶಸ್ಥರ ಸಮಾಧಿಗಳನ್ನು ಒಂದೆಡೆ ನಿರ್ಮಿಸುವುದು ಹಾಗೂ ಸಮಾಧಿಗಳ ಮೇಲೆ ಲಿಂಗಗಳನ್ನು ಇಡುವ ಪದ್ಧತಿ ಇದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಪ್ರಾಚ್ಯ ಹಾಗೂ ಪುರಾತತ್ವ ಇಲಾಖೆಗಳು ಇಲ್ಲಿರುವ ಸಮಾಧಿಗಳ ಉತ್ಖನನ ನಡೆಸಿದಲ್ಲಿ ಸತ್ಯಾಸತ್ಯತೆ ಗೊತ್ತಾಗುವುದು.

ಚಾಲುಕ್ಯರ ಸಮಾಧಿಗಳ ಕುರಿತು 80ರ ದಶಕದಲ್ಲಿ ಚಾಲುಕ್ಯರ ಶಾಸನ ಅಧ್ಯಯನ ಮಾಡಿದ ಡಾ. ಕೆ. ವಿ. ರಮೇಶ ಅವರು ಅಲ್ಲಿರುವ 2ನೇ ವಿಕ್ರಮಾದಿತ್ಯ ರಾಜನ ಅಸ್ತಿ ಸಮಾಧಿ ಬಗ್ಗೆ ಉಲ್ಲೇಖೀಸಿದ್ದಾರೆ ನಿಜ. ಆದರೆ ಅಲ್ಲಿರುವ ಉಳಿದ 10 ಚಿಕ್ಕ ಚಿಕ್ಕ ಗುಡಿಗಳ ಬಗ್ಗೆ ಸರಿಯಾಗಿ ತಿಳಿಸಿಲ್ಲ. ಅಲ್ಲದೆ, ಈವರೆಗೆ ಯಾವೊಬ್ಬ ಸಂಶೋಧಕನೂ ಸಹ ಅವು ರಾಜರ ಸಮಾಧಿಗಳಲ್ಲಯೆಂದು ವಾದಿಸಿಲ್ಲ. ಇವುಗಳ ಬಗ್ಗೆ ಹೆಚ್ಚಿನ ತರ್ಕಬದ್ಧ ವಿಚಾರಗಳನ್ನು ತಿಳಿಸಿಲ್ಲ.

ಉತ್ತರ ಕರ್ನಾಟಕ ವಿಶೇಷವಾಗಿ ಈ ಚಾಲುಕ್ಯ ಭೂಮಿ ಬಹಳ ಪ್ರಾಚೀನ ಕಾಲದ ಭೂಮಿ. ಅದರ ಪುರಾತತ್ವ ಅವಶೇಷಗಳ ಸಂಪತ್ತು ಇನ್ನೂ ತೆಗೆಯಲಾಗಿಲ್ಲ. ಪೂರ್ವ ಐತಿಹಾಸಿಕ ತಾಣಗಳ ಸಮೀಕ್ಷೆ ಮತ್ತು ಪರಿಶೋಧನೆ ಮತ್ತು ಅವುಗಳ ಉತ್ಖನನ, ಡಾಲ್ಮೆನ್ಸ್‌ ಮತ್ತು ಬಂಡೆಗಳ ಅಧ್ಯಯನ, ಕಲಾತ್ಮಕ ಸ್ಮಾರಕಗಳ ಪರಿಶೀಲನೆ, ಭೂಮಿಯಲ್ಲಿ ಹರಡಿರುವ ಹೆಚ್ಚಿನ ಸಂಖ್ಯೆಯ ಶಾಸನಗಳ ಅರ್ಥೈಸುವಿಕೆ ಮತ್ತು ಜನರ ಸಾಂಸ್ಕೃತಿಕ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳಲು ಅವುಗಳ ಸರಿಯಾದ ಮೌಲ್ಯಮಾಪನ ಮಾಡುವ ಅಗತ್ಯವಿದೆ.

ಮಂಜುನಾಥ ಸುಳ್ಳೊಳ್ಳಿ

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.