ಆಶಿಕಾ ಕೇ ಲಿಯೇ


Team Udayavani, Sep 23, 2018, 6:00 AM IST

s-1.jpg

ಆಶಿಕಾ ರಂಗನಾಥ್‌ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ತಾಯಿಗೆ ತಕ್ಕ ಮಗ ಸಿನೆಮಾ. ಹೌದು, ಆಶಿಕಾ, ತಾಯಿಗೆ ತಕ್ಕ ಮಗ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ಹಾಡೊಂದರಲ್ಲಿ ಆಶಿಕಾ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದು, ಈಗ ಆ ಹಾಡಿನ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿದೆ. ಜಯಂತ್‌ ಕಾಯ್ಕಿಣಿ ಸಾಹಿತ್ಯದಲ್ಲಿ ಮೂಡಿಬಂದ ಹೃದಯಕೆ ಹೆದರಿಕೆ… ಹೀಗೆ ನೋಡಿದರೆ… ಹುಡುಕುತಾ ಬರುವೆಯಾ ಹೇಳದೇ ಹೋದರೆ… ಎಂಬ ಹಾಡಿಗೆ ವ್ಯಕ್ತವಾಗುತ್ತಿರುವ ಮೆಚ್ಚುಗೆಯಿಂದ ಆಶಿಕಾ ಖುಷಿಯಾಗಿದ್ದಾರೆ. ಈ ಹಿಂದೆ ಶರಣ್‌ ನಾಯಕರಾಗಿದ್ದ “ರ್‍ಯಾಂಬೋ-2′ ಚಿತ್ರದಲ್ಲೂ ಆಶಿಕಾ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದರು. ಈಗ ತಾಯಿಗೆ ತಕ್ಕ ಮಗನ ಸರದಿ.  ವಿಲ್ಲಾವೊಂದರಲ್ಲಿ ಈ ಹಾಡನ್ನು ಚಿತ್ರೀಕರಿಸಲಾಗಿದೆ. ಶಶಾಂಕ್‌ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್‌ ರಾವ್‌ ನಾಯಕರಾಗಿದ್ದಾರೆ. ಈಗಾಗಲೇ ಈ ಜೋಡಿಯ ಹಿಂದಿನ ಸಿನೆಮಾಗಳು ಹಿಟ್‌ ಆಗಿರುವ ಮೂಲಕ ತಾಯಿಗೆ ತಕ್ಕ ಮಗ ಬಗ್ಗೆಯೂ ನಿರೀಕ್ಷೆ ಇದೆ. ಅದೇ ನಿರೀಕ್ಷೆಯಲ್ಲಿ ಆಶಿಕಾ ಕೂಡ ಎದುರು ನೋಡುತ್ತಿದ್ದಾರೆ.

ಕ್ರೇಜಿಬಾಯ್‌ ಚಿತ್ರದ ಮೂಲಕ ನಾಯಕಿಯಾದ ಆಶಿಕಾ ಆ ನಂತರ ಕನ್ನಡದಲ್ಲಿ ಮಾಸ್‌ ಲೀಡರ್‌, ಮುಗುಳುನಗೆ, ರಾಜು ಕನ್ನಡ ಮೀಡಿಯಂ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ತಾಯಿಗೆ ತಕ್ಕ ಮಗನ ಸರದಿ. ಕ್ರೇಜಿಬಾಯ್‌ ನಂತರ ತನಗೆ ಒಂದೆರಡು ಸಿನೆಮಾ ಸಿಗಬಹುದಷ್ಟೇ ಎಂದುಕೊಂಡಿದ್ದರಂತೆ ಆಶಿಕಾ. ಕ್ರೇಜಿಬಾಯ್‌ ಆದ ಮೇಲೆ ಒಂದು ಸಿನೆಮಾ ಸಿಗಬಹುದೇನೋ ಅಂದುಕೊಂಡಿದ್ದೆ. ಆದರೆ, ಈಗ ಒಳ್ಳೆಯ ಅವಕಾಶಗಳು ಸಿಗುತ್ತಿವೆ. ಒಂದೊಂದು ಅವಕಾಶಗಳ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕೆಂಬ ಆಸೆ ನನ್ನದು. ರಾತ್ರೋರಾತ್ರಿ ಬರುವ ಯಶಸ್ಸು ಶಾಶ್ವತವಲ್ಲ ಎಂದು ನಂಬಿದವಳು ನಾನು ಎಂದು ತಮ್ಮ ಜರ್ನಿ ಬಗ್ಗೆ ಹೇಳುತ್ತಾರೆ ಆಶಿಕಾ. ಆಶಿಕಾಗೆ ಅವರ  ವಯಸ್ಸಿಗೆ ತಕ್ಕುದಾದ ಪಾತ್ರಗಳೇ ಬರುತ್ತಿವೆಯಂತೆ. ಕಾಲೇಜು ಹುಡುಗಿ, ತರಲೆ, ತಮಾಷೆಯ ಪಾತ್ರಗಳು ಸಿಗುತ್ತಿರುವುದರಿಂದ ಆಶಿಕಾ ಕೂಡ ಖುಷಿಯಾಗಿದ್ದಾರೆ. ಕೆಲವು ನಟ-ನಟಿಯರು ಸಿನೆಮಾಕ್ಕೆ ಬರಬೇಕೆಂದು ಪ್ರಯತ್ನಿಸಿ ಬರುತ್ತಾರೆ. ಇನ್ನು ಕೆಲವರು ಸಿಗುವ ಅವಕಾಶವನ್ನು ಮಿಸ್‌ ಮಾಡಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಬರುತ್ತಾರೆ. ಅದೇ ರೀತಿ ಆಶಿಕಾಗೆ ಅವಕಾಶ ಸಿಕ್ಕಿ ಬಂದವರು. ಒಂದು ವೇಳೆ ಚಿತ್ರರಂಗಕ್ಕೆ ಬರದಿದ್ದರೆ ಆಶಿಕಾ ಏನಾಗುತ್ತಿದ್ದರು ಎಂದರೆ ಡಾಕ್ಟರ್‌ ಎಂಬ ಉತ್ತರ ಅವರಿಂದ ಬರುತ್ತದೆ.  ಅವರಿಗೆ ಡಾಕ್ಟರ್‌ ಆಗಬೇಕೆಂಬ ಆಸೆ ಇತ್ತಂತೆ. ಒಂದು ವೇಳೆ ಅದು ಸಾಧ್ಯವಾಗದೇ ಇದ್ದರೆ ಡ್ಯಾನ್ಸ್‌ ಕ್ಷೇತ್ರದಲ್ಲೆ ಏನಾದರೂ ಮಾಡಿಕೊಂಡು ಇರುತ್ತಿದ್ದರಂತೆ. 

“ನನಗೆ ಡ್ಯಾನ್ಸ್‌ ಎಂದರೆ ತುಂಬಾ ಇಷ್ಟ. ಬೇರೆ ಬೇರೆ ಡ್ಯಾನ್ಸ್‌ ಪ್ರಕಾರಗಳನ್ನು ಕಲಿಯೋದೆಂದರೆ ನನಗೆ ತುಂಬಾ ಇಷ್ಟ’ ಎನ್ನುವ ಆಶಿಕಾ, ಸದ್ಯ ತಾಯಿಗೆ ತಕ್ಕ ಮಗ ನಿರೀಕ್ಷೆಯಲ್ಲಿರುವುದು ಸುಳ್ಳಲ್ಲ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.