ಚಂದನವನದಲ್ಲಿ ಅಸ್ಸಾಮಿ ಚೆಲುವೆ


Team Udayavani, Dec 29, 2019, 4:00 AM IST

78

ಕನ್ನಡ ಚಿತ್ರರಂಗಕ್ಕೆ ಪರಭಾಷಾ ನಟಿಯರ ಆಗಮನ ಹೊಸದೇನಲ್ಲ. ಹಲವು ದಶಕಗಳಿಂದ ಭಾರತದ ಬೇರೆ ಬೇರೆ ಮೂಲೆಗಳಿಂದ ನಟಿಯರಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು, ತಮ್ಮ ಪರಿಶ್ರಮ ಮತ್ತು ಪ್ರತಿಭೆಯ ಮೂಲಕವೇ ಕನ್ನಡ ಸಿನಿಪ್ರಿಯರ ಮನಗೆದ್ದು, ಚಂದನವನದಲ್ಲಿ ಭದ್ರವಾಗಿ ನೆಲೆಯೂರಿರುವ ಹಲವು ಉದಾಹರಣೆಗಳಿವೆ. ಈಗ ಈ ಸಾಲಿಗೆ ಖಯಾದು ರೋಹರ್‌ ಎಂಬ ಅಸ್ಸಾಮಿ ಚೆಲುವೆಯ ಹೆಸರು ಸೇರ್ಪಡೆಯಾಗುತ್ತಿದೆ.

ಈಗಷ್ಟೇ ಚಂದನವನಕ್ಕೆ ಕಾಲಿಟ್ಟು ಬಂದಿರುವ ಖಯಾದು, ಮುಗಿಲ್‌ ಪೇಟೆ ಚಿತ್ರದಲ್ಲಿ ರವಿಚಂದ್ರನ್‌ ಪುತ್ರ ಮನುರಂಜನ್‌ ಅವರಿಗೆ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಹಾಗಂತ, ಖಯಾದು ಅವರಿಗೆ ಸಿನಿಮಾ ಹೊಸದಲ್ಲ. ಇದಕ್ಕೂ ಮುನ್ನ ಅವರು ಮರಾಠಿ ಭಾಷೆಯ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಆ ಚಿತ್ರ ಇನ್ನೇನು ಬಿಡುಗಡೆಯ ಹಂತದಲ್ಲಿದೆ. ಆ ಸಿನಿಮಾ ರಿಲೀಸ್‌ಗೆ ಮುನ್ನವೇ, ದಕ್ಷಿಣ ಭಾರತ ಚಿತ್ರರಂಗಕ್ಕೆ ಬಂದಿರುವ ಖಯಾದು ಕನ್ನಡ ಚಿತ್ರರಂಗದ ಮೂಲಕ ಸೌಥ್‌ ಸಿನಿ ದುನಿಯಾಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಇನ್ನೊಂದು ವಿಶೇಷವೆಂದರೆ, ಖಯಾದು ಅಭಿನಯಿಸಿರುವ ಚಿತ್ರ ಇನ್ನೂ ಚಿತ್ರೀಕರಣದಲ್ಲಿ ಇರುವಾಗಲೇ, ಚಿತ್ರದಲ್ಲಿ ಅವರ ಗೆಟಪ್‌ ತೋರಿಸುವ ಕೆಲ ಪೋಟೋಗಳು ಹೊರಬಿದ್ದಿವೆ. ಇದರಲ್ಲಿ ಖಯಾದು ಅವರ ಲುಕ್‌, ಸ್ನಿಗ್ಧ ಸೌಂದರ್ಯ ನೋಡುಗರ ಗಮನ ಸೆಳೆಯುತ್ತಿದ್ದು, ಈ ಪೋಟೋಗಳನ್ನು ಹೊರಬರುತ್ತಿದ್ದಂತೆ ಒಂದಷ್ಟು ಹೊಸಚಿತ್ರಗಳ ಬೇರೆ ಬೇರೆ ಆಫ‌ರ್ ಅವರನ್ನು ಹುಡುಕಿಕೊಂಡು ಬರುತ್ತಿವೆಯಂತೆ.

ಕನ್ನಡ ಚಿತ್ರರಂಗದಲ್ಲಿ ತಮ್ಮ ಸಿನಿಮಾ ಯಾನ ಶುರು ಮಾಡಿರುವುದರ ಬಗ್ಗೆ ಮಾತನಾಡುವ ಖಯಾದು, “ನನಗೆ ಇದು ಮೊದಲ ಕನ್ನಡ ಸಿನಿಮಾ. ಮೊದಲ ಸಿನಿಮಾವೇ ಒಳ್ಳೆಯ ಅನುಭವ ತಂದು ಕೊಡುತ್ತಿದೆ. ಇನ್ನು ಕನ್ನಡ ಭಾಷೆ ಅಂದ್ರೆ ನನಗಿಷ್ಟ. ಸದ್ಯಕ್ಕೆ ಕನ್ನಡ ಭಾಷೆ ಅರ್ಥವಾಗುತ್ತೆ. ಆದ್ರೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ಕನ್ನಡ ಭಾಷೆ ಕಲಿಯಲು ತರಬೇತಿ ಕ್ಲಾಸ್‌ಗೆ ಹೋಗುತ್ತಿದ್ದೇನೆ. ಆದಷ್ಟು ಬೇಗ ಕನ್ನಡ ಕಲಿತು ಇಲ್ಲೇ ಇನ್ನಷ್ಟು ಸಿನಿಮಾ ಮಾಡುತ್ತೇನೆ’ ಎನ್ನುತ್ತಾರೆ.

ಒಟ್ಟಾರೆ, ಇಲ್ಲಿಯವರೆಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಬಹುತೇಕ ಎಲ್ಲ ಭಾಷೆಯ ನಟಿಯರೂ ಕನ್ನಡ ಚಿತ್ರರಂಗಕ್ಕೆ ಬಂದು ಹೋಗಿದ್ದಾರೆ. ಹೀಗೆ ಬಂದ ನೂರಾರು ಸಂಖ್ಯೆಯ ನಟಿಯರಲ್ಲಿ ಕೆಲವೇ ಕೆಲವರು ಮಾತ್ರ ಇಂದಿಗೂ ಪ್ರೇಕ್ಷಕರ ಮನಸ್ಸಿನಲ್ಲಿ ನೆಚ್ಚಿನ ನಟಿಯರಾಗಿ ತಮ್ಮದೇ ಆದ ಅಚ್ಚು ಮೂಡಿಸಿದ್ದಾರೆ. ಸದ್ಯ ಆರಂಭದಲ್ಲೇ ಒಂದಷ್ಟು ಭರವಸೆ ಮೂಡಿಸಿರುವ ಖಯಾದು ಅಂತಹ ನಾಯಕಿಯರಂತೆ ತಾನು ಕೂಡ ಕಮಾಲ್‌ ಮಾಡಲು ಯಶಸ್ವಿಯಾಗುತ್ತಾರಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.