ಚಂದನವನದಲ್ಲಿ ಚಂದದ ಭಾವನ!


Team Udayavani, Apr 21, 2019, 6:00 AM IST

1

ನಟ ಪುನೀತ್‌ ರಾಜಕುಮಾರ್‌ ಅಭಿನಯದ ಜಾಕಿ ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಪರಿಚಯವಾದ ಮಲೆಯಾಳಿ ಕುಟ್ಟಿ ಭಾವನಾ ಮೆನನ್‌. ಜಾಕಿ ಚಿತ್ರದ ಸೂಪರ್‌ ಹಿಟ್‌ ಸಕ್ಸಸ್‌ ನಂತರ ಕನ್ನಡ ಚಿತ್ರರಂಗದಲ್ಲಿ ಜಾಕಿ ಭಾವನಾ ಎಂದೇ ಜನಪ್ರಿಯವಾದ ಈ ಚೆಲುವೆ ನಂತರ ವಿಷ್ಣುವರ್ಧನ, ರೋಮಿಯೋ, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್‌, ಮೈತ್ರಿ, ಮುಕುಂದಾ – ಮುರಾರಿ, ಚೌಕ ಹೀಗೆ ಹಲವು ಚಿತ್ರಗಳಲ್ಲಿ ಅಭಿನಯಿಸಿ ತನ್ನದೇ ಆದ ಅಭಿಮಾನಿ ವರ್ಗವನ್ನು ಗಳಿಸಿಕೊಂಡಾಕೆ.

ಕನ್ನಡ, ಮಲೆಯಾಳ ಚಿತ್ರರಂಗದಲ್ಲಿ ಬಹುಬೇಡಿಕೆಯ ನಾಯಕ ನಟಿಯಾಗಿ ಯಶಸ್ಸಿನಲ್ಲಿರುವಾಗಲೇ ಭಾವನಾ ಅವರನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಈ ಘಟನೆಯಲ್ಲಿ ಮಲೆಯಾಳ ಚಿತ್ರರಂಗದ ಖ್ಯಾತ ನಟನೊಬ್ಬನ ಕೈವಾಡವಿರುವುದಾಗಿ ಹೇಳಲಾಗಿದ್ದು, ಇಡೀ ಮಲೆಯಾಳ ಚಿತ್ರರಂಗ ಭಾವನಾ ಅವರ ಬೆನ್ನಿಗೆ ಬೆಂಬಲವಾಗಿ ನಿಂತಿತ್ತು. ಈ ಘಟನೆ ಭಾವನಾ ಅವರ ಚಿತ್ರ ಬದುಕಿನಲ್ಲಿ ಮತ್ತು ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ತಲ್ಲಣವನ್ನೇ ಸೃಷ್ಟಿಸಿತು. ಈ ಘಟನೆಯ ಬಳಿಕ ಕೆಲಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಭಾವನಾ, ತಮ್ಮ ಬಹುಕಾಲದ ಗೆಳೆಯ ಬೆಂಗಳೂರು ಮೂಲದ ನಿರ್ಮಾಪಕ ನವೀನ್‌ ಎಂಬುವವರನ್ನು ವರಿಸುವ ಮೂಲಕ ವೈವಾಹಿಕ ಬದುಕಿಗೆ ಕಾಲಿಟ್ಟರು.

ಸಾಮಾನ್ಯವಾಗಿ ಮದುವೆಯ ಬಳಿಕ ಬಹುತೇಕ ನಾಯಕ ನಟಿಯರು ತೆರೆಮರೆಗೆ ಸರಿಯುತ್ತಾರೆ ಎಂಬ ಮಾತುಗಳಿಗೆ ಅಪವಾದ ಎನ್ನುವಂತೆ, ಮದುವೆಯ ನಂತರ ಭಾವನಾ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗುತ್ತಿದ್ದಾರೆ. ಮದುವೆಯ ಬಳಿಕ ಟಗರು ಚಿತ್ರದ ಮೂಲಕ ಮತ್ತೆ ಸ್ಯಾಂಡಲ್‌ವುಡ್‌ ಭರ್ಜರಿಯಾಗಿ ರೀ ಎಂಟ್ರಿ ಕೊಟ್ಟ ಭಾವನಾ, ಈಗ ಕನ್ನಡದಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಗೋಲ್ಡನ್‌ಸ್ಟಾರ್‌ ಗಣೇಶ್‌ ಅಭಿನಯದ 99, ಪ್ರಜ್ವಲ್‌ ದೇವರಾಜ್‌ ನಾಯಕನಾಗಿರುವ ಇನ್ಸ್‌ಪೆಕ್ಟರ್‌ ವಿಕ್ರಂ, ಶಿವರಾಜಕುಮಾರ್‌ ಅಭಿನಯದ ಮೈ ನೇಮ್‌ ಈಸ್‌ ಆಂಜಿ, ಇನ್ನೂ ಹೆಸರಿಡದ ಎರಡು ಚಿತ್ರಗಳು ಸೇರಿದಂತೆ ಸುಮಾರು ಐದಾರು ಚಿತ್ರಗಳಲ್ಲಿ ಭಾವನಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಭಾವನಾ ಕನ್ನಡ ಚಿತ್ರರಂಗದಲ್ಲಿ ಹತ್ತು ವರ್ಷಗಳ ಜರ್ನಿಯನ್ನು ಪೂರ್ಣಗೊಳಿಸುವ ಉತ್ಸಾಹದಲ್ಲಿದ್ದಾರೆ. ಭಾವನಾ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಸಮಯದಲ್ಲೇ, ಚಿತ್ರರಂಗಕ್ಕೆ ಕಾಲಿಟ್ಟ ಅನೇಕ ನಾಯಕ ನಟಿಯರು ಸದ್ಯ ತೆರೆಮರೆಗೆ ಸರಿದಿರುವಾಗ, ಬದುಕಿನಲ್ಲಿ ಅನೇಕ ಏಳು-ಬೀಳುಗಳನ್ನು ಕಂಡ ಭಾವನಾ ಮತ್ತೆ ಹೊಸ ಹುರುಪಿನೊಂದಿಗೆ ಚಿತ್ರರಂಗದಲ್ಲಿ ಸಕ್ರಿಯರಾಗುತ್ತಿರುವುದು ನಿಜಕ್ಕೂ ಗಮನಾರ್ಹ ಸಂಗತಿ. ಈ ವರ್ಷ ಭಾವನಾ ಕನ್ನಡದಲ್ಲಿ ಅಭಿನಯಿಸಿರುವ ಕನ್ನಿಷ್ಟ ಎರಡು-ಮೂರು ಚಿತ್ರಗಳು ಬಿಡುಗಡೆಯಾಗಲಿದ್ದು, ಭಾವನ ಸೆಕೆಂಡ್‌ ಇನ್ನಿಂಗ್ಸ್‌ ಚಿತ್ರಗಳಿಗೆ ಸಿನಿಪ್ರಿಯರ ರೆಸ್ಪಾನ್ಸ್‌ ಹೇಗಿರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.