ಐದೇ ಐದು ಗೆರೆಗಳು


Team Udayavani, Apr 30, 2017, 3:45 AM IST

5-line.jpg

ಮೊನ್ನೆ ಹೋಗಿ ಎ.ಟಿ.ಎಂ.ನ ಬಾಯಿಗೆ ನನ್ನ ಕಾರ್ಡ್‌ ತುರುಕಿದೆ.
“ನಿನ್ನನ್ನೇ ಕಾಯುತ್ತಾ ಕುಳಿತಿ¨ªೆ’ ಎನ್ನುವಂತೆ ಆ ಎ.ಟಿ.ಎಂ. ನೋಟುಗಳನ್ನು ಹೊರಕ್ಕೆಸೆಯಿತು.
ಎಣಿಸುತ್ತ ಇ¨ªೆ.

ಯಾಕೋ ಬೆರಳು “ಚಕ್‌’ ಎಂದು ನಿಂತಿತು. ಏನೋ ವ್ಯತ್ಯಾಸ ಇದೆ ಎನ್ನುವುದನ್ನು ನನ್ನ ಮೂಗಿರಲಿ, ಬೆರಳೂ ಗುರುತಿಸುವುದನ್ನು ಕಲಿತಿದೆ.

ಮತ್ತೆ ಎ.ಟಿ.ಎಂ. ಕೋಣೆ ಹೊಕ್ಕೆ. ಎಲ್ಲ ನೋಟುಗಳನ್ನೂ ಒಂದೊಂದೇ ನೋಡುತ್ತ ಹೋದೆ.
ಹೌದು, ಅಲ್ಲಿ ವ್ಯತ್ಯಾಸ ಇತ್ತು.

500ರ ನೋಟುಗಳ ಪೈಕಿ ಕೆಲವಕ್ಕೆ ಗೀಟುಗಳಿದ್ದವು. ಕೆಲವಕ್ಕೆ ಆ ಗೀಟು ಇರಲಿಲ್ಲ. ಪೇಪರ್‌ನಲ್ಲಿ ಈಗ ಎ.ಟಿ.ಎಂ.ನಲ್ಲೂ ಖೋಟಾ ನೋಟುಗಳಿರುತ್ತದೆ ಅಂತ ಓದಿದ್ದವನಿಗೆ ಗೊಂದಲ ಶುರುವಾಯ್ತು.

ಕೆಲವರು ಅದೇನೋ ಆಕಾಶಕ್ಕೆ ಹಿಡಿದು ಇದು ಸಾಚಾ, ಇದು ಖೋಟಾ ಅಂತ ಹೇಳುತ್ತಾರೆ. ನನಗೋ ಆ ವಿದ್ಯೆ ಇದುವರೆಗೂ ಒಲಿದಿಲ್ಲ.

ಸರಿ, ಮನೆಗೆ ಬಂದವನೇ ಗೂಗಲ್‌ ಮೊರೆ ಹೊಕ್ಕೆ.
stripes on 500 rupee note ಅಂತ ಟೈಪಿಸಿ ಎಂಟರ್‌ ಒತ್ತಿದೆ.

ಒಂದು ಕ್ಷಣ ಕಣ್ಣಿಗೆ ಕತ್ತಲು ಕವಿದಂತಾಯಿತು.
“ಹೌದು ಕತ್ತಲು. ಆ ಕತ್ತಲಿನÇÉೇ ನಾನು ಲೋಕ ಕಾಣುತ್ತದಾ?’ ಎಂದು ಹುಡುಕಲು ಶುರು ಮಾಡಿದೆ.
ಆ ಹಕ್ಕಿ ಕೂಗು ಕೇಳುತ್ತಿದೆ, ಆದರೆ ಕಾಣುತ್ತಿಲ್ಲ, ಆ ಬಸ್‌ನ ಹೊಗೆ ಮೂಗಿಗೆ ಬಡಿಯುತ್ತಿದೆ, ಆದರೆ ಕಾಣಿಸುತ್ತಿಲ್ಲ.
ಆಕೆಯ ನಡಿಗೆಯ ಮೃದು ಸದ್ದೂ ಅನುಭವವಾಗುತ್ತಿದೆ, ಆದರೆ ಆಕೆ ಕಾಣುತ್ತಿಲ್ಲ. ಕೈಯಲ್ಲಿ ಹೌದು ನೋಟುಗಳಿವೆ, ಆದರೆ ಅದು ಎಷ್ಟರದ್ದು ಎಂದು ಗೊತ್ತಾಗುತ್ತಿಲ್ಲ.

ಹಾಗೆ ಗೊತ್ತಾಗುವುದಿಲ್ಲ ಎನ್ನುವ ಕಾರಣಕ್ಕಾಗಿಯೇ ಆರ್‌ಬಿಐ ನಿರ್ಧರಿಸಿದ್ದು; ಕಣ್ಣು ಕಾಣದವರಿಗೂ ನೋಟು ಎಷ್ಟರದ್ದು ಎಂದು ಗೊತ್ತಾಗಬೇಕು.

ಆಗ 500 ಹಾಗೂ 1000 ರೂಪಾಯಿಗಳ ನೋಟಿನ ಮೇಲೆ ಆರ್‌ಬಿಐ ಮುಟ್ಟಿದರೆ ಅನುಭವಕ್ಕೆ ಬರುವ ಐದು ಹಾಗೂ ಆರು ಗೆರೆಗಳನ್ನು ಎಳೆಯಿತು.

ಒಂದು ಪುಟ್ಟ ಕೆಲಸ. ಆದರೆ ಎಷ್ಟು ದೊಡ್ಡ ನಿಟ್ಟುಸಿರು.
ತಕ್ಷಣ ನನಗೆ ನನ್ನ ಬಾಲ್ಯದÇÉೇ ಕುಮಾರವ್ಯಾಸ ಭಾರತವನ್ನು ಕಿವಿಯ ಮೂಲಕ ಮೆದುಳಿಗೆ ತಲುಪಿಸಿದ, ಇನ್ನೊಬ್ಬರ ಹೆಗಲ ಸಹಾಯವಿಲ್ಲದೆ ಒಂದು ಹೆಜ್ಜೆ ಮುಂದಿಡಲೂ ಆಗದಿದ್ದ “ಕುಲುª ರಾಮಣ್ಣ’ ನೆನಪಾದರು.
ನನ್ನ ಬಾಲ್ಯಕ್ಕೆ ಕಥೆಗಳ ರಾಶಿಯನ್ನೇ ಸುರಿದ, ಇದ್ದಕ್ಕಿದ್ದಂತೆ ಒಂದು ದಿನ ಕುರುಡರಾಗಿ ಹೋದ ರಾಮಯ್ಯನವರು ನೆನಪಾದರು.

ಒಂದು ದಿನ ಜೋಶ್‌ನಲ್ಲಿ¨ªೆ. ಭಾನುವಾರ ಗೆಳತಿಯ ಜೊತೆ ಸುತ್ತಾಟಕ್ಕೆ ರೆಕ್ಕೆ ಕಟ್ಟುತ್ತಿ¨ªೆ. ಗೆಳೆಯ ಪ್ರವೀಣ್‌ ಭಾರ್ಗವ್‌ ಫೋನ್‌ ಮಾಡಿದರು, “ಬನ್ನೇರು ಘಟ್ಟಕ್ಕೆ ಬನ್ನಿ’ ಅಂತ. “ಓಕೆ’ ಎಂದುಕೊಂಡು ಅಲ್ಲಿಗೆ ತಲುಪಿಕೊಂಡ¨ªಾಯಿತು.

ಅಲ್ಲಿ ಕಾಲಿಟ್ಟವನು ಒಂದು ಕ್ಷಣ ಹಾಗೇ ನಿಂತೆ.
ಅಲ್ಲಿದ್ದದ್ದು ಕತ್ತಲ ನಂಬಿ ಬದುಕುತ್ತಿದ್ದವರ ಲೋಕ. ಪ್ರವೀಣ್‌ ಅವರಿಗೆ ಪ್ರಕೃತಿ ಶಿಬಿರ ನಡೆಸುತ್ತಿದ್ದರು. ಅದಕ್ಕೆ ನಾನು ಶಾಕ್‌ ಆದದ್ದು ! ಕಣ್ಣೇ ಇಲ್ಲದವರಿಗೆ ಹಸಿರ ಲೋಕವನ್ನು ಕಾಣಿಸುವುದು ಸಣ್ಣ ಸಂಗತಿಯೆ!
ಒಂದು ನವಿಲು. ಅದನ್ನು ಎದೆಗೊತ್ತಿಕೊಂಡ ಒಬ್ಬನ ಕಣ್ಣಲ್ಲಿ ನೀರು ಧಾರಾಕಾರವಾಗಿ ಸುರಿಯಲಾರಂಭಿಸಿತ್ತು.
“ಯಾಕೊ?’ ಎಂದೆ. “ನವಿಲಿನ ಬಿಸಿ ನನ್ನ ಎದೆಯ ಬಿಸಿಯ ಜೊತೆ ಮಾತನಾಡುತ್ತಿದೆ’ ಎಂದ.

ಅಷ್ಟಕ್ಕೇ ನಿಲ್ಲಿಸಲಿಲ್ಲ. “ಇಷ್ಟು ದಿನದ ಬದುಕಿನಲ್ಲಿ ನನಗೆ ಇಷ್ಟು ಬೆಚ್ಚನೆ ಅನುಭವ ನೀಡಿದವರು ಇನ್ನೊಬ್ಬರಿಲ್ಲ’ ಎಂದ.
ಇನ್ನೊಬ್ಬ ಹುಲಿಯ ಹೆಜ್ಜೆ ಗುರುತುಗಳನ್ನು ಹುಡುಕುತ್ತಿದ್ದ. ಅದರ ತೂಕ ಎಷ್ಟು ಎನ್ನುವುದನ್ನು ಅದು ಹೆಜ್ಜೆ ಊರಿದ ರೀತಿಯÇÉೇ ಕಂಡುಕೊಂಡುಬಿಟ್ಟಿದ್ದ.

ಇನ್ನೂ ಒಬ್ಬನ ಎದೆ ಲಬ್‌ ಡಬ್‌ ಬಡಿದುಕೊಳ್ಳುತ್ತಿತ್ತು- ಎಲ್ಲರಿಗೂ ಕೇಳುವಂತೆ. ಆತನ ಮುಖವಂತೂ ಬೆರಗಿನ ತವರು ಮನೆಯಾಗಿ ಹೋಗಿತ್ತು.

ಆತ ಮೊದಲ ಬಾರಿಗೆ ಜಂಪ್‌ ಮಾಡಿದ್ದ. “ಸಾರ್‌, ನಾನು ನೆಲದಲ್ಲಿ ಮಾತ್ರ ಓಡಾಡಬೇಕು, ಎತ್ತರ ಎನ್ನುವುದೇ ನನಗೆ ಗೊತ್ತಿರಲಿಲ್ಲ’ ಎಂದ. ಅವನ ದನಿ ಆಗತಾನೆ ವಸಂತಕ್ಕೆ ಕಾಲಿಡುತ್ತಿದ್ದ ತರುಣನಂತಿತ್ತು.

ಪ್ರವೀಣ್‌ ಅವನಿಗೆ ಮೊದಲ ಬಾರಿಗೆ ಜಿಗಿಯುವುದರ ಆಟ ಆಡಿಸಿದ್ದ. ಆನಂತರ ನಾನು ಕೀನೋ ಥಿಯೇಟರ್‌ ಬಳಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿ¨ªೆ. ಕೀನೋ ಥಿಯೇಟರ್‌ನಿಂದ ರೈಲ್ವೆ ಹಳಿಗಳ ಬಳಿ ಇರುವ ಸ್ಲಮ್‌ಗೆ ಹೋಗುವ ದಾರಿಯಿದೆ. ಅಲ್ಲಿ ಎಡಕ್ಕೆ ಇರುವ ಕಟ್ಟಡ ನನ್ನದಾಗಿ ಹೋಗಿತ್ತು.

ಏಕೆಂದರೆ, ಅಲ್ಲಿ ಕುವೆಂಪು ಕೃತಿಗಳನ್ನು ಬ್ರೇಲ್‌ ಲಿಪಿಗೆ ಅಳವಡಿಸುತ್ತಿದ್ದರು. ಹಗಲೂ ರಾತ್ರಿ ಕುವೆಂಪು ಅಕ್ಷರಗಳ ಬದಲು ಚುಕ್ಕಿಗಳಾಗಿ ಬದಲಾಗುತ್ತಿದ್ದರು.

ಕುವೆಂಪು ಕಂಡ ಆ ಮಲೆನಾಡು, ಗುತ್ತಿ ಐತ ಪಿಂಚಲು, ಹುಲಿಕಲ್‌ ನೆತ್ತಿ, ಜಲಗಾರ ಹೀಗೆ …
ಎಲ್ಲರೂ ಕತ್ತಲನ್ನೇ ತಮ್ಮೆದುರು ಹರಡಿಕೊಂಡಿದ್ದವರ ಲೋಕದಲ್ಲಿ ನಡೆಯಲಾರಂಭಿಸಿದ್ದರು.
ನಾನು ಅವರ ಜೊತೆ ಹೆಜ್ಜೆ ಹಾಕುತ್ತಾ, ಅವರ ಲೈಬ್ರರಿಯಲ್ಲಿರುವ ಕಾದಂಬರಿ ಯಾವುದು, ಕಥೆ ಯಾವುದು ಎನ್ನುವುದನ್ನು ಗೊತ್ತು ಮಾಡಿಕೊಳ್ಳುತ್ತಾ…
ಅವರ “ವೈಟ್‌ ಕೇನ್‌’ ಜೊತೆಗೆ ಹೆಜ್ಜೆ ಹಾಕುತ್ತ ನಡೆದೆ.

ಐದು ಗೆರೆ, ಐದೇ ಐದು ಗೆರೆ ನನ್ನ ಲೋಕವನ್ನು ಅಲುಗಾಡಿಸಿಬಿಟ್ಟಿತ್ತು.

– ಜಿ. ಎನ್‌. ಮೋಹನ್‌

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.