ತುಳಜಾಪುರದಿಂದ ಭಕ್ತಾಪುರದವರೆಗೆ


Team Udayavani, Jun 16, 2019, 5:00 AM IST

z-2

ಬೆಂಗಳೂರಿನಿಂದ ದೆಹಲಿ ಅಲ್ಲಿಂದ ಕಾಠ್ಮಂಡು ತ್ರಿಭುವನ್‌ ವಿಮಾನ ನಿಲ್ದಾಣ ತಲುಪುವಾಗ ಸಂಜೆ ಸುಮಾರು 3 ಗಂಟೆಯಾಗಿತ್ತು. ಐದೇ ನಿಮಿಷದಲ್ಲಿ ಇಮಿಗ್ರೇಶನ್‌ ಮುಗಿಸಿ ಹೊರಬಂದಾಗ ಕಾಠ್ಮಂಡು ನಗರವಿಡೀ ಧೂಳಿನ ಮುಸುಕು. ಜನರೆಲ್ಲ ಮೂಗಿಗೆ ಬಟ್ಟೆ ಹಿಡಿದುಕೊಂಡು ಬಹಳ ರಹಸ್ಯಮಯವಾಗಿ ಕಾಣುತ್ತಿದ್ದರು. ಇನ್ನು ಕಾಠ್ಮಂಡುವಿನ ಕಟ್ಟಡಗಳ್ಳೋ ಒಂದಕ್ಕೂ ಸಿಮೆಂಟಿನ ಗಿಲಾವಾಗಿರಲಿಲ್ಲ. ಅವೆಲ್ಲ ಬೆತ್ತಲೆಯಾಗಿ ನಾಚಿಕೆ ಇಲ್ಲದೆ ನಿಂತಿದ್ದವು. ಬೀಸತೊಡಗಿದ್ದ ತಣ್ಣನೆಯ ಗಾಳಿಯಲ್ಲಿ ತ್ರಿತುಂಗ ಬಸ್‌ 8 ಕಿ. ಮೀ ದೂರ ಪ್ರಯಾಣ ಮಾಡಿ ಗೋಕರ್ಣ ಫಾರೆಸ್ಟ್‌ ರೆಸಾರ್ಟಿಗೆ ತಲುಪಿಸಿತ್ತು. ನಮ್ಮ ತಂಡಕ್ಕೆ ರೂಮು ಕೊಡಿಸಿ ಅರ್ಧಗಂಟೆಯಲ್ಲಿ ಸಿದ್ಧವಾಗಲು ಹೇಳಿದ್ದರು. ಕಾಠ್ಮಂಡು ನಗರದೊಳಗಿನಿಂದ ಭಕ್ತಾಪುರದ ತಲೇಜು ಭವಾನಿಯ ದೇವಾಲಯದ ಕಡೆಗೆ ವಾಹನ ಹೊರಟಿತ್ತು.

ತಲೇಜು ಭವಾನಿ ನೇಪಾಳದ ಜನಪ್ರಿಯ ದೇವತೆಗಳಲ್ಲಿ ಒಬ್ಬಳು. ತಲೇಜು ಭವಾನಿಯ ಮೂಲ ಮಹಾರಾಷ್ಟ್ರದ ತುಳಜಾಪುರ. ಅಲ್ಲಿನ ಭವಾನಿ ನೇಪಾಳದ ಭಕ್ತಾಪುರಕ್ಕೆ ಬಂದು ಸೇರಿದ ಕಥೆಯೇ ರೋಚಕ. ಈ ಕಥೆ ನಮ್ಮನ್ನು ಸಾವಿರ ವರ್ಷ ಹಿಂದಕ್ಕೆ ಕರೆದೊಯ್ಯುತ್ತದೆ. ಇಲ್ಲಿನ ಇನ್ನಿತರ ಶಕ್ತಿದೇವತೆಗಳಾದ ಮನಕಾಮನಾದೇವಿ, ಜೀವಂತ ದೇವತೆಕುಮಾರಿ ದೇವಿಯ ಆರಾಧಕರು ಬಹಳ ಮಂದಿ ಇಲ್ಲಿದ್ದಾರೆ.

ಕನಸಿನಲ್ಲಿ ಕಂಡವಳು
ನೇಪಾಳದ ಮಲ್ಲ ಅರಸರು ಕೊಂಕಣ ದೇಶದ ಕರ್ನಾಟಕಿ ವಂಶದ ನಾನ್ಯದೇವನ (ಕ್ರಿ.ಶ.1096) ವಂಶದವರಾಗಿದ್ದು ಸಿಮರೋಗಂಧವನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಒಮ್ಮೆ ಜನಾಂಗದ ಪ್ರಧಾನ ಪೂರ್ವಪುರುಷ ನಾನ್ಯದೇವನ ಕನಸಿನಲ್ಲಿ ಕಂಡ ಭವಾನಿ ದೇವಿ ಯಂತ್ರವೊಂದನ್ನು ಈತನಿಗೆ ಪ್ರಸಾದಿಸಿದಳಂತೆ. ಅಂದಿನಿಂದ ತುಳಜಾಭವಾನಿ ಕರ್ನಾಟಕಿ ವಂಶದ ಕುಲದೇವತೆಯಾಗಿ ಪೂಜಿಸಲ್ಪಡುತ್ತಿದ್ದಳು. ಕ್ರಿ.ಶ. 11 ನೇ ಶತಮಾನದಲ್ಲಿ ಅಂದರೆ ನಾನ್ಯದೇವನ ಕಾಲದಲ್ಲಿ ಕರ್ನಾಟಕದ ಬಾದಾಮಿ ಚಾಲುಕ್ಯರು ಖ್ಯಾತಿಯ ಉತ್ತುಂಗದಲ್ಲಿದ್ದರು. ಇವರ ಸಾಮ್ರಾಜ್ಯ ಬಿಹಾರ, ಬಂಗಾಲದ ಕಡೆಗೂ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ನಾನ್ಯದೇವನ ಮುಖಾಂತರ ತುಳಜಾಭವಾನಿ ನೇಪಾಳ ತಲುಪಿರುವ ಸಾಧ್ಯತೆಗಳಿವೆ.

ಕ್ರಿ. ಶ. 1326 ರಲ್ಲಿ ಯಾಸುದ್ದೀನ್‌ ತುಘಲಕ್‌ ಸಿಮರೋಗಂಧದ ಮೇಲೆ ದಾಳಿ ಮಾಡಿ ಅಂದಿನ ರಾಜ ಹರಿಸಿಂಘದೇವನನ್ನು ನೇಪಾಳದ ಪರ್ವತಗಳ ಕಡೆಗೆ ಓಡಿಸಿದ್ದ. ಹರಿಸಿಂಘದೇವ ತಾನು ಅರಮನೆ ಬಿಡುವ ಮುನ್ನ ತನಗೆ ಆನುವಂಶಿಕವಾಗಿ ಬಂದಿದ್ದ ತುಳಜಾಪುರದ ಭವಾನಿಯ ಯಂತ್ರವನ್ನು ತನ್ನೊಂದಿಗೆ ಕೊಂಡೊಯ್ದನಂತೆ. ಆತನ ವಂಶಸ್ಥ ಮಹೇಂದ್ರಮಲ್ಲ ಕ್ರಿ.ಶ.1564 ರಲ್ಲಿ ಕಾಠ್ಮಂಡು ಲಕಾಯು ಮಾರ್ಗ, ಕಾಠ್ಮಂಡು ಗೋಕರ್ಣೇಶ್ವರ, ಭಕ್ತಾಪುರದ ದರ್ಬಾರ್‌ ಚೌಕಗಳಲ್ಲಿ ತ್ರಿಕೋಣರೇಖೆಗಳಲ್ಲಿ ವಾಸ್ತುಪ್ರಕಾರ ಸ್ಥಾಪಿಸಿದ. ಮತ್ತೂಂದು ದೇವಾಲಯ ಗುಜರಾತಿನ ಪಟಾನ್‌ನಲ್ಲಿದೆ. ಕ್ರಮೇಣ ತುಳಜಾ ಎಂಬ ಹೆಸರು ಅಪಭ್ರಂಶಗೊಂಡು ತಲೇಜುವಾಗಿದೆ ಎನ್ನಲಾಗುತ್ತದೆ. ಮತ್ತೂಂದು ದಂತಕಥೆಯ ಪ್ರಕಾರ ಅರಸನೊಂದಿಗೆ ತಲೇಜು ಭವಾನಿ ಪಗಡೆ ಆಟಕ್ಕೆ ಬರುತ್ತಿದ್ದಳಂತೆ. ಪದೇಪದೇ ಸೋಲುತ್ತಿದ್ದ ದೇವಿ ಅರಸನ ಕೋರಿಕೆಯ ಮೇರೆಗೆ ಇಲ್ಲಿ ನೆಲೆ ನಿಂತಳು.

ಭವಾನಿ ದೇವಾಲಯವು ತಾಂತ್ರಿಕ ಆಚರಣೆಗಳ ರಂಗಸ್ಥಳವಾಗಿ ನಡೆದುಬಂದಿದೆ ಎನ್ನಬಹುದು. ಜನ ತಮ್ಮ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ದೇವಿಗೆ ಕುರಿ- ಕೋಳಿಗಳನ್ನು ಬಲಿ ನೀಡುತ್ತಾರೆ. ಅಲ್ಲಿಂದ ಹೊರಡುವಾಗ ನಮ್ಮ ದೇವತೆಯನ್ನು ಕಂಡ ಖುಷಿ ಮನದಲ್ಲಿ ಇತ್ತು.

ಲಿಂಗರಾಜು ಡಿ. ಎಸ್‌.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.