ಪ್ರಿಯಾ ಪ್ರಿಯಾ ಹೋ ಹರಿಪ್ರಿಯಾ!


Team Udayavani, Jun 16, 2019, 5:00 AM IST

z-1

ಚಿತ್ರರಂಗದಲ್ಲಿ ಅಭಿನಯ ಮತ್ತು ಸೌಂದರ್ಯ ಎರಡರಿಂದಲೂ ಗುರುತಿಸಿಕೊಂಡಿರುವ ನಟಿ ಹರಿಪ್ರಿಯಾ. ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು ಹನ್ನೆರಡು ವರ್ಷಗಳಾದರೂ, ಇಂದಿಗೂ ಹರಿಪ್ರಿಯಾ ಅವರನ್ನು ಚಿತ್ರರಂಗ ಗುರುತಿಸುವುದು ಉಗ್ರಂ ಚಿತ್ರದ ಮೂಲಕ. ಉಗ್ರಂ ಚಿತ್ರ ಹರಿಪ್ರಿಯಾ ಸಿನಿ ಕೆರಿಯರ್‌ಗೆ ಒಂದೊಳ್ಳೆ ಬ್ರೇಕ್‌ ತಂದು ಕೊಟ್ಟಿತು. ಬಳಿಕ ಹರಿಪ್ರಿಯಾ ಚಿತ್ರರಂಗದಲ್ಲಿ ಬೇಡಿಕೆಯ ನಟಿಯಾಗಿ ಪ್ರವರ್ಧಮಾನಕ್ಕೆ ಬಂದರು. ಕಳೆದ ನಾಲ್ಕೈದು ವರ್ಷಗಳಿಂದ ಮಾಡಿದ ಚಿತ್ರಗಳು ಹರಿಪ್ರಿಯಾಗೆ ಸಾಕಷ್ಟು ಹೆಸರು, ಜನಪ್ರಿಯತೆ ಎರಡನ್ನೂ ತಂದು ಕೊಟ್ಟವು. ಅದರಲ್ಲೂ ಬುಲೆಟ್‌ ಬಸ್ಯಾ, ರಿಕ್ಕಿ, ಭರ್ಜರಿ, ರನ್ನ, ನೀರ್‌ ದೋಸೆ, ಬೆಲ್‌ ಬಾಟಂ, ಸೂಜೀದಾರ ಮೊದಲಾದ ಚಿತ್ರಗಳು ಹರಿಪ್ರಿಯಾ ಅವರು ಕ್ಲಾಸಿ ಮತ್ತು ಗ್ಲಾಮರ್‌ ಲುಕ್‌ ಎರಡಕ್ಕೂ ಒಪ್ಪುವ ನಟಿ ಎಂದು ಸಾಬೀತು ಮಾಡಿದವು.

ಇದೇ ವೇಳೆ ಛೇಂಜ್‌ ಓವರ್‌ ಎನ್ನುವಂತೆ ಹರಿಪ್ರಿಯಾ ಗ್ಲಾಮರ್‌ ಲುಕ್‌ನಿಂದ ಆ್ಯಕ್ಷನ್‌ ಲುಕ್‌ನತ್ತ ಮುಖ ಮಾಡಿದರು. ಡಾಟರ್‌ ಆಫ್ ಪಾರ್ವತಮ್ಮ ಚಿತ್ರದಲ್ಲಿ ಟಾಮ್‌ ಗರ್ಲ್ ಗೆಟಪ್‌ನಲ್ಲಿ ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ಹರಿಪ್ರಿಯಾ ಪ್ರೇಕ್ಷಕರ ಮುಂದೆ ಎಂಟ್ರಿ ಕೊಟ್ಟರು. ಆದರೆ ಅದೇಕೋ ಹರಿಪ್ರಿಯಾ ಹೊಸಲುಕ್‌ ಅಭಿಮಾನಿಗಳಿಗೆ ಅಷ್ಟಾಗಿ ಹಿಡಿಸಲಿಲ್ಲ. ಇಲ್ಲಿಯವರೆಗೆ ಗ್ಲಾಮರ್‌ ಪಾತ್ರಗಳಲ್ಲಿ ನೋಡಿದ ಪ್ರೇಕ್ಷಕರು, ಮೊದಲ ಬಾರಿಗೆ ಹರಿಪ್ರಿಯಾ ಅವರನ್ನು ಇಂಥದ್ದೊಂದು ಲುಕ್‌ನಲ್ಲಿ ನೋಡಿ ಅರಗಿಸಿಕೊಳ್ಳುವುದು ಕಷ್ಟವಾಯಿತು. ಅದಕ್ಕೇ ಇರಬೇಕೋ, ಏನೋ.., ಪ್ರೇಕ್ಷಕರು ಪಾರ್ವತಮ್ಮನ ಮಗಳ ಸಾಹಸಗಾಥೆ ನೋಡುವ ಮನಸ್ಸು ಮಾಡಲಿಲ್ಲ. ಹಾಗಾಗಿ ಡಾಟರ್‌ ಆಫ್ ಪಾರ್ವತಮ್ಮ ಬಂದಷ್ಟೇ ವೇಗದಲ್ಲಿ ಚಿತ್ರಮಂದಿರಗಳಿಂದಲೂ ಹೊರ ಹೋಗಬೇಕಾಯಿತು.

ಸದ್ಯ ಹರಿಪ್ರಿಯಾ ಕನ್ನಡ್‌ ಗೊತ್ತಿಲ್ಲ, ಎಲ್ಲಿದ್ದೆ ಇಲ್ಲೀ ತನಕ, ಕಥಾ ಸಂಗಮ, ಬಿಚ್ಚುಗತ್ತಿ, ಕುರುಕ್ಷೇತ್ರ ಹೀಗೆ ಸಾಲು ಸಾಲು ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಿದ್ಧತೆಯಲ್ಲಿದ್ದಾರೆ. ಈ ಎಲ್ಲಾ ಚಿತ್ರಗಳು ಕಥೆಗೆ ಮತ್ತು ಪಾತ್ರಗಳಿಗೆ ಪ್ರಾಮುಖ್ಯ ಇರುವ ಚಿತ್ರಗಳಾಗಿರುವುದರಿಂದ ಪ್ರೇಕ್ಷಕರಿಗೆ ಇಷ್ಟವಾಗುವುದು ಎಂಬ ವಿಶ್ವಾಸ ಹರಿಪ್ರಿಯಾ ಅವರದ್ದು.

ಒಟ್ಟಾರೆ ಗ್ಲಾಮರ್‌ ಮತ್ತು ಕ್ಲಾಸಿ ಲುಕ್‌ನಲ್ಲಿ ಹರಿಪ್ರಿಯಾ ಅವರನ್ನು ಮೆಚ್ಚಿಕೊಂಡಿರುವ ಪ್ರೇಕ್ಷಕರು ಅಂಥದ್ದೇ ಪಾತ್ರಗಳಲ್ಲಿ ಹೆಚ್ಚು ನೋಡಲು ಬಯಸುತ್ತಾರೆ ಎನ್ನುವ ಸಂಗತಿಯನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ಅವರ ಚಿತ್ರಗಳೇ ಹೇಳುತ್ತಿವೆ. ಪ್ರೇಕ್ಷಕರು ಬಯಸಿದಂತ ಪಾತ್ರಗಳನ್ನು ಹೆಚ್ಚು ಹೆಚ್ಚು ಮಾಡಲಿ ಎನ್ನುವುದು ಕನ್ನಡ ಸಿನಿ ಪ್ರಿಯರ ಆಶಯ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.