ಉಪಕಾರ ಸ್ಮರಣೆ
Team Udayavani, Jul 7, 2019, 5:00 AM IST
ವೇಗವಾಗಿ ಬರುತ್ತಿರುವ ಕಾರನ್ನು ತಡೆದು ನಿಲ್ಲಿಸಿದ ಪೊಲೀಸ್. ಗರ್ವದಿಂದ ಚಾಲಕನ ಸೀಟಿನತ್ತ ಬರುತ್ತ ಡ್ರೈವಿಂಗ್ ಲೈಸನ್ಸ್ ತೋರಿಸುವಂತೆ ಕೇಳಿದ. ಆತ ಕಂದಾಯ ಇಲಾಖೆಯ ಉದ್ಯೋಗಿ. ಎಲ್ಲ ಕಾಗದ ಪತ್ರಗಳನ್ನು ತೋರಿಸಿದ. ಇನ್ಶೂರೆನ್ಸ್ ಮಾತ್ರ ಲ್ಯಾಪ್ಸ್ ಆಗಿತ್ತು. ಪೊಲೀಸ್, ಕಂದಾಯ ಇಲಾಖೆಯ ಉದ್ಯೋಗಿಯ ಮುಖ ನೋಡಿದ. ಪರಸ್ಪರ ನಕ್ಕರು. “ಸರಿ, ಹೋಗಿ’ ಎಂದು ಪೊಲೀಸ್ ಅವನನ್ನು ಬಿಟ್ಟ. ಮತ್ತೂಮ್ಮೆ ಪೊಲೀಸ್ನ ಮಗನಿಗೆ ಅರ್ಜೆಂಟಾಗಿ ಜಾತಿ ಪ್ರಮಾಣ ಪತ್ರ ಬೇಕಾಗಿತ್ತು. ಆಫೀಸ್ ಕಡೆ ಹೋದರೆ ಅಲ್ಲಿನ ಅಲ್ಲಿದ್ದ ಸಿಬಂದಿ “ಒಂದು ವಾರ ಬೇಕಾಗುತ್ತದೆ. ಈಗ ಕಂಪ್ಯೂಟರೈಸ್ಡ್ ಆಗಿರೋದ್ರಿಂದ ಎಲ್ಲ ಶಿಸ್ತುಬದ್ಧವಾಗಿ ನಡೀತಿದೆ’ ಎಂದು ಹೇಳಿದರು.
ಈ ಹಿಂದೆ ತನ್ನ “ಔದಾರ್ಯ’ದ ಲಾಭವನ್ನು ಪಡೆದಿದ್ದ ಕಂದಾಯ ಇಲಾಖೆಯ ಉದ್ಯೋಗಿಯ ನೆನಪಾಯಿತು. ಅವನನ್ನು ಭೇಟಿಯಾದ. ಇಬ್ಬರೂ ಪರಸ್ಪರ ಮುಖ ನೋಡಿ ನಕ್ಕರು. ಆತನಲ್ಲಿ ಉಪಕಾರ ಸ್ಮರಣೆ ಇತ್ತು. ಆ ದಿನ ಸಂಜೆಯೇ ಜಾತಿ ಪ್ರಮಾಣ ಪತ್ರ ಪೊಲೀಸನ ಕೈ ಸೇರಿತು. ರೂಲ್ಸ್ ಪಾಲಿಸಬೇಕು ಎಂದು ಎಲ್ಲರೂ ಹೇಳುತ್ತಾರೆ. ಆದರೆ ರೂಲ್ಸ್ ಬ್ರೇಕ್ ಮಾಡುವುದರಿಂದಲೂ ಎಷ್ಟೆಲ್ಲ ಪ್ರಯೋಜನ ಇದೆ ನೋಡಿ, ಯಾರಿಗೆಲ್ಲ ಎಂದು ಕೇಳಬೇಡಿ !
ಭೋಜರಾಜ ಸೊಪ್ಪಿಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ