ವಿದೇಶಿ ವಿದ್ವಾಂಸರ ಕಣ್ಣಲ್ಲಿ ಭಾರತದ ಹಳ್ಳಿ


Team Udayavani, Mar 31, 2019, 6:00 AM IST

A-village-South-INDIA

ಆ್ಯಡಮ್‌ ಕ್ಲಾಫ‌ಮ್‌.

ಎಲ್ಲಿಯ ಉಡುಪಿ? ಎಲ್ಲಿಯ ಇಂಗ್ಲೆಂಡ್‌? ಎತ್ತಣಿಂದೆತ್ತ‌ ಸಂಬಂಧವಯ್ನಾ? ಯುರೋಪ್‌ ದೇಶದ ಇಂಗ್ಲೆಂಡ್‌ನ‌ ಆ್ಯಡಮ್‌ ಕ್ಲಾಫ‌ಮ್‌ (Adam Clapham)ರವರಿಗೆ ಕರಾವಳಿ ತೀರದ ಉಡುಪಿ ಜಿಲ್ಲೆಯ ಕಟಪಾಡಿಯ ಮಣಿಪುರದ ಒಂದು ಹಳ್ಳಿ ಇಷ್ಟವಾಗಿ ಈ ಹಳ್ಳಿಯಲ್ಲಿಯೇ ಉಳಿದು ತುಳುನಾಡಿನ ಸಂಸ್ಕೃತಿಯ ಬಗ್ಗೆ ಅಧ್ಯಯನ ಮಾಡುತ್ತ ಬದುಕು ಸಾಗಿಸುತ್ತಿದ್ದಾರೆ ಎಂದರೆ ಯಾರಿಗೂ ಅಚ್ಚರಿಯಾದೀತು ! ಕರಾವಳಿಯ ತೀರವೆಂದರೆ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿ, ಪ್ರಾಕೃತಿಕವಾಗಿ ಮಹತ್ವದ ಭೂಭಾಗ. ಒಂದು ಕಡೆ ಪಶ್ಚಿಮಘಟ್ಟದ ಗಿರಿಸರದಿ, ಇನ್ನೊಂದು ಕಡೆ ಸದಾ ಅಬ್ಬರಿಸುವ ಅರಬ್ಬಿ ಶರಧಿ, ನಡುವೆ ನದಿ, ತೋಟ, ಗದ್ದೆಗಳಿರುವ ಹಸಿರು ಪರಿಧಿ! ದೇವಸ್ಥಾನ, ಚರ್ಚು, ಮಸೀದಿಗಳಲ್ಲಿ ಇರುವ ಸಂಪ್ರದಾಯಗಳು, ಆಚಾರ, ವಿಚಾರಗಳು ಎಲ್ಲವನ್ನೂ ಗಮನಿಸಿದರೆ ಇದು ನಿಜವಾಗಿಯೂ ಬಹುಸಂಸ್ಕೃತಿಯ ಪ್ರತೀಕ.

ಆ್ಯಡಮ್‌ ಕ್ಲಾಫ‌ಮ್‌ ಪ್ರತಿಷ್ಠಿತ ಬಿಬಿಸಿ ಮಾಧ್ಯಮ ಕಂಪೆನಿಯಲ್ಲಿ ಡಾಕ್ಯುಮೆಂಟರಿ ಪ್ರೊಡ್ನೂಸರ್‌ ಹುದ್ದೆಯಲ್ಲಿದ್ದ ಕಾರಣ ವೃತ್ತಿನಿಮಿತ್ತ ಇಡೀ ಪ್ರಪಂಚವನ್ನೇ ಸುತ್ತಾಡಿದವರು. ವಿವಿಧ ದೇಶಗಳ ಸಾಂಸ್ಕೃತಿಕ ವೈವಿಧ್ಯವನ್ನು ಹತ್ತಿರದಿಂದ ಕಂಡವರು. ಬಿಬಿಸಿಯ ಉದ್ಯೋಗದಿಂದ ನಿವೃತ್ತಿ ಪಡೆದ ನಂತರವೂ ದೇಶ ಸುತ್ತಬೇಕು ಎಂಬ ಇವರ ಅಭಿಲಾಷೆ ಇಟ್ಟುಕೊಂಡವರು. ಭಾರತಕ್ಕೆ ಬರುತ್ತಿದ್ದ ಆಡಮ್‌ರವರರಿಗೆ ದಕ್ಷಿಣಭಾರತದ ಅದರಲ್ಲೂ ಕರಾವಳಿ ತೀರ ತುಂಬಾ ಇಷ್ಟವಾಗಿತ್ತು. ಆರಂಭದಲ್ಲಿ ಕೊಚ್ಚಿನ್‌ ಮತ್ತು ಕೇರಳದ ಇನ್ನಿತರ ಜಿಲ್ಲೆಗಳಲ್ಲಿ ಸುತ್ತಾಡುತ್ತಿದ್ದರು. ಕಾರವಾರದವರೆಗೂ ಹೋಗಿಬಂದರು. ಕೊನೆಗೆ ಉಡುಪಿ ಜಿಲ್ಲೆಯ ಕಟಪಾಡಿಯ ಮಣಿಪುರ ಎಂಬ ಗ್ರಾಮದಲ್ಲಿ ಇವರು ಒಂದು ಸಾಂಪ್ರದಾಯಿಕ ಮನೆಯನ್ನು ಆಯ್ಕೆ ಮಾಡಿ ಅದರಲ್ಲಿ ಕಳೆದ 12 ವರ್ಷಗಳಿಂದ ವಾಸಿಸುತ್ತಿದ್ದಾರೆ.

“ನದಿಗ್ರಾಮ’ವೆಂದೇ ಇವರಿಂದ ನಾಮಕರಣವಾದ ಮಣಿಪುರದ ಈ ತಾಣ ಹೇಗಿದೆಯೆಂದರೆ ಇವರು ವಾಸಿಸುವ ಮನೆಯ ಹಿಂದೆ ಉದ್ಯಾವರ ಹೊಳೆ, ಮನೆಯ ಎದುರು ವಿಶಾಲವಾಗಿ ಇರುವ ಹಸಿರು ಕಂಗೊಳಿಸುವ ಗದ್ದೆ, ತೋಟ. ಹಳ್ಳಿ. ಸನಿಹದಲ್ಲಿಯೇ ದೈವಸ್ಥಾನ, ಚರ್ಚು, ಮಸೀದಿಗಳಲ್ಲಿ ನಡೆಯುವ ಸಾಂಪ್ರದಾಯಿಕ ಸಮಾರಂಭಗಳು. ಪುಟ್ಟ ಮಣಿಪುರ ಇಡೀ ಭಾರತಕ್ಕೆ ಪ್ರತಿಬಿಂಬದಂತೆ ಕಾಣಿಸಿತು.

ಆ್ಯಡಮ್‌ ಕ್ಲಾಫ‌ಮ್‌ ತುಳುನಾಡಿನಲ್ಲಿ 12 ವರ್ಷಗಳ ತಿರುಗಾಟದಿಂದ ಪಡೆದ ತಿಳುವಳಿಕೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಎ ವಿಲೇಜ್‌ ಇನ್‌ ಸೌತ್‌ ಇಂಡಿಯ ಎಂಬ ಪುಸ್ತಕ ಬರೆದು ಇತ್ತೀಚೆಗೆ ಲಂಡನ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಇದು ಮಣಿಪುರ ಎಂಬ ಹಳ್ಳಿಯನ್ನು ಕೇಂದ್ರೀಕರಿಸಿಕೊಂಡು ಬರೆದ ಸಂಕಥನವಾದರೂ ದಕ್ಷಿಣಭಾರತದ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿನಿಧಿಸುವಂತಿದೆ. ಇಂಥ ದಾಖಲೀಕರಣಗಳು ಭವಿಷ್ಯದಲ್ಲಿ ಕರಾವಳಿಯ ಇತಿಹಾಸವನ್ನು ಕಟ್ಟುವಲ್ಲಿ ಮಹಣ್ತೀದ ಆಕರಗಳಾಗಲಿವೆ.

– ದಿನೇಶ ಹೊಳ್ಳ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.