ಸ್ವ -ರಚಿತಾ ರಾಮ್‌!


Team Udayavani, Jul 8, 2018, 6:00 AM IST

v-1.jpg

ಬಹುಶಃ ಕನ್ನಡ ಚಿತ್ರರಂಗದ ಅತ್ಯಂತ ಬೇಡಿಕೆಯ ನಟಿ ಯಾರು ಎಂಬ ಪ್ರಶ್ನೆ ಉದ್ಭವವಾದರೆ ಮೊದಲು ಸಿಗುವ ಉತ್ತರವೇ ರಚಿತಾ ರಾಮ್‌. ರಚಿತಾ ರಾಮ್‌ ಸದ್ಯಕ್ಕೆ ನಾಲ್ಕು ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳೆಲ್ಲಾ ಈ ವರ್ಷ ಒಂದರ ಹಿಂದೊಂದು ಬಿಡುಗಡೆಯಾಗಲಿದೆ. ಸದ್ಯಕ್ಕೆ ಬಿಝಿಯಾಗಿರುವ ರಚಿತಾ, ಒಪ್ಪಿಕೊಂಡಿರುವ ಎಲ್ಲ ಚಿತ್ರಗಳನ್ನು ಮುಗಿಸಿ, ಮುಂದಿನ ಚಿತ್ರಗಳಿಗೆ ಡೇಟ್ಸ್‌ ಹೊಂದಿಸಬೇಕಿದೆ.

ಬರೀ ಬಿಝಿಯಾಗಿರುವುದಷ್ಟೇ ಅಲ್ಲ, ನಾಲ್ಕೂ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದ್ದು, ನಾಲ್ಕರಲ್ಲೂ ವಿಭಿನ್ನವಾದ ಪಾತ್ರಗಳು ಅವರಿಗೆ ಸಿಕ್ಕಿದೆಯಂತೆ. ಈ ಪೈಕಿ ಬಿಡುಗಡೆಗೆ ಸಿದ್ಧವಾಗುತ್ತಿರುವ ಅಯೋಗ್ಯ ಚಿತ್ರದಲ್ಲಿ ಮಂಡ್ಯ ಹುಡುಗಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಪಕ್ಕಾ ಮಂಡ್ಯ ಕನ್ನಡ ಸಂಭಾಷಣೆಯನ್ನೂ ಅವರು ಹೇಳುತ್ತಾರಂತೆ. ಸೀತಾರಾಂ ಕಲ್ಯಾಣ ಔಟ್‌ ಅಂಡ್‌ ಔಟ್‌ ಫ್ಯಾಮಿಲಿ ಸ್ಟೋರಿಯಾದರೆ, ನಟ ಸಾರ್ವಭೌಮದಲ್ಲಿ ಸ್ಟೈಲಿಶ್‌ ಹುಡುಗಿಯಂತೆ. ಐ ಲವ್‌ ಯೂ ಚಿತ್ರದಲ್ಲಿ ಸಖತ್‌ ಬೋಲ್ಡ್‌ ಆದಂತಹ ಪಾತ್ರ ಅವರದ್ದಾಗಿದೆ. ರಚಿತಾ ಹೇಳುವಂತೆ, “ಇಷ್ಟು ದಿನ ಮಾಡಿದ ಪಾತ್ರ ಒಂದು ಕಡೆಯಾದರೆ, ಆ ಸಿನೆಮಾದ ಪಾತ್ರವೇ ಬೇರೆಯದ್ದಾಗಿ ನಿಲ್ಲುತ್ತದೆ. ಸೆಟ್‌ಗೆ ಬ್ಲ್ಯಾಕ್ ಆಗಿ ಬರ್ತೀನಿ. ಆ ನಂತರ ನಿಮಗೆ ಯಾವ ತರಹದ ಅಭಿನಯ ಬೇಕೋ ಅದನ್ನು ತೆಗೀರಿ ಎಂದು ನಿರ್ದೇಶಕ ಆರ್‌.ಚಂದ್ರು ಅವರಿಗೆ ಹೇಳಿದ್ದೇನೆ’ ಎನ್ನುತ್ತಾರೆ ರಚಿತಾ.

ದರ್ಶನ್‌ ಅಭಿನಯದ ಬುಲ್‌ಬುಲ್‌ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ರಚಿತಾ, ಈ ಐದು ವರ್ಷಗಳಲ್ಲಿ ಒಂಬತ್ತು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಇದರಲ್ಲಿ ಹಲವು ಹಿಟ್‌ಗಳು ಸಿಗುವುದರ ಜೊತೆಗೆ, ಕನ್ನಡದ ಬಹುತೇಕ ಸ್ಟಾರ್‌ ಕಲಾವಿದರ ಜೊತೆಗೆ ನಟಿಸಿರುವ ಹೆಗ್ಗಳಿಕೆ ರಚಿತಾಗಿದೆ. “ಈ ಐದು ವರ್ಷದಲ್ಲಿ ನಾನು ಮಾಡಿರುವ ಅಷ್ಟೂ ಸಿನೆಮಾಗಳ ಹೆಸರುಗಳು ಜನರಲ್ಲಿ ಬಾಯಲ್ಲಿದೆ. ಜನ ಹೆಸರು ಹೇಳುತ್ತಾರೆಂದರೆ ಅದಕ್ಕೆ ಕಾರಣ ನನ್ನ ಸಿನೆಮಾ ಆಯ್ಕೆ. ನಾನು ಗುಣಮಟ್ಟಕ್ಕೆ ಹೆಚ್ಚು ಪ್ರಾಮುಖ್ಯ ಕೊಡುತ್ತೇನೆ. 100 ಸಿನೆಮಾ ಮಾಡುವ ಬದಲು 10 ಸಿನೆಮಾ ಮಾಡಿದರೂ ಜನ ಅದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದೇ ನಿಟ್ಟಿನಲ್ಲಿ ನಾನು ಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎನ್ನುತ್ತಾರೆ ರಚಿತಾ.

ಬುಲ್‌ಬುಲ್‌ ಮೂಲಕ ಸ್ಟಾರ್‌ ಸಿನೆಮಾದಿಂದ ತನ್ನ ಸಿನೆಮಾ ಯಾನ ಆರಂಭವಾಗಿದ್ದು, ಇವತ್ತಿಗೂ ಅದೇ ತರಹ ನಡೆದುಕೊಂಡು ಬಂದಿದೆ ಎನ್ನುವ ರಚಿತಾ, “ಐದು ವರ್ಷದ ಹಿಂದೆ ಜರ್ನಿ ಆರಂಭಿಸಿದಾಗ ಹೇಗಿದ್ದೇನೋ ಇವತ್ತಿಗೂ ಅದೇ ರೀತಿ ಸಾಗಿದೆ. ಎಲ್ಲೂ ಡೌನ್‌ಫಾಲ್‌ ಆಗಿಲ್ಲ. ಆವತ್ತಿನಿಂದ ಇವತ್ತಿನವರೆಗೂ ದೊಡ್ಡ ಸಿನಿಮಾ, ದೊಡ್ಡ ತಂಡದ ಜೊತೆಗೆ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಅದೆಲ್ಲಕ್ಕೂ ಹೆಚ್ಚಾಗಿ ಈ ಐದು ವರ್ಷಗಳಲ್ಲಿ ಚಿತ್ರರಂಗ ಹೊಸ ಅನುಭವ, ಪಾಠಗಳನ್ನು ನೀಡಿತು. ಯಾರಲ್ಲಿ ಹೇಗೆ ವರ್ತಿಸಬೇಕು, ಒಂದು ತಂಡವಾಗಿ ಹೇಗಿರಬೇಕು ಎಂಬುದನ್ನು ಕಲಿತೆ’ ಎಂಬುದನ್ನು ನೆನಪಿಸಿಕೊಳ್ಳುತ್ತಾರೆ ರಚಿತಾ.

ಮೂಲತಃ ಕಿರುತೆರೆಯಿಂದ ಬಂದ ರಚಿತಾ, ಈಗಲೂ ಕಿರುತೆರೆಯಲ್ಲಿ ಸಕ್ರಿಯವಾಗಿದ್ದಾರೆ. ಮುಂಚಿನಂತೆ ಧಾರಾವಾಹಿಗಳಲ್ಲಿ ನಟಿಸುವುದಕ್ಕೆ ಸಾಧ್ಯವಾಗದಿದ್ದರೂ, ರಿಯಾಲಿಟಿ ಶೋಗಳಲ್ಲಿ ಅವರು ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಲೇ ಇದ್ದಾರೆ. ಅದನ್ನು ಮುಂದುವರೆಸುವುದಾಗಿ ಹೇಳುವ ರಚಿತಾ, “ನಾನು ಕಿರುತೆರೆಯಿಂದ ಬಂದವಳು. ನಾನು ಅದನ್ನು ಯಾವತ್ತೂ ಮರೆಯೋದಿಲ್ಲ. ಸಿನೆಮಾಕ್ಕಿಂತ ಹೆಚ್ಚಾಗಿ ಮನೆ ಮನೆಗೆ ತಲುಪೋದು ಕಿರುತೆರೆ. ಜನರಿಗೆ ನಾವು ಏನು, ಹೇಗೆ, ನಮ್ಮ ವರ್ತನೆ ಹೇಗಿರುತ್ತದೆ ಎಂಬುದು ಜನರಿಗೆ ಗೊತ್ತಾಗೋದು ಕಿರುತೆರೆಯಿಂದ. ಜೊತೆಗೆ ನಾನು ಕಿರುತೆರೆಯ ಕಾರ್ಯಕ್ರಮ ತುಂಬಾ ಎಂಜಾಯ್‌ ಮಾಡುತ್ತೇನೆ’ ಎನ್ನುತ್ತಾರೆ ರಚಿತಾ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.