ಇರಾಕ್‌ ದೇಶದ ಕತೆ: ಸುಳ್ಳಾಗದ ಭವಿಷ್ಯ


Team Udayavani, May 12, 2019, 6:00 AM IST

4

ಅಹ್ಮದ್‌ ಕಬ್ಲಿರ್‌ ಎಂಬ ಸಮಗಾರನಿದ್ದ. ಪ್ರಾಮಾಣಿಕವಾಗಿ ದುಡಿದು ಅಂದಿನ ಖರ್ಚಿಗೆ ಬೇಕಾದಷ್ಟು ಹಣ ಸಂಪಾದನೆ ಮಾಡುತ್ತಿದ್ದ. ಅವನ ಹೆಂಡತಿ ಸತ್ತಾರಾ. ಅವಳಿಗೆ ತುಂಬ ಹಣ ಬೇಕು, ಮೈತುಂಬ ಒಡವೆಗಳಿರಬೇಕು ಎಂದು ಹಲವಾರು ಕನಸುಗಳಿದ್ದವು. ಹೆಚ್ಚು ಹಣ ಸಂಪಾದಿಸಲು ಗಂಡನನ್ನು ಪೀಡಿಸುತ್ತ ಇದ್ದಳು. ಒಂದು ಸಲ ಸತ್ತಾರಾ ಬೀದಿಯಲ್ಲಿ ಕುಳಿತು ಬಂದವರಿಗೆ ಭವಿಷ್ಯ ಹೇಳಿ ಸಲೀಸಾಗಿ ಹಣ ಸಂಪಾದಿಸುವ ವ್ಯಕ್ತಿಯನ್ನು ನೋಡಿದಳು. ಗಂಡನ ಬಳಿಗೆ ಬಂದು, “”ನೀನು ಇಂದಿನಿಂದ ಪಾದರಕ್ಷೆ ಹೊಲಿಯುವುದು ಬೇಡ. ಜ್ಯೋತಿಷ ಹೇಳಿ ಹಣ ಗಳಿಸಬೇಕು” ಎಂದು ಹೇಳಿದಳು.

ಅಹ್ಮದ್‌ ತಲೆಗೆ ಕೈಯಿಟ್ಟ. “”ನಾನು ಜ್ಯೋತಿಷ ಹೇಳುವುದೆ? ನನಗೆ ಅದರ ಯಾವ ಜ್ಞಾನವೂ ಇಲ್ಲ. ಸುಮ್ಮನೆ ನನ್ನನ್ನು ಒತ್ತಾಯಿಸಬೇಡ” ಎಂದು ಬೇಡಿಕೊಂಡ. ಆದರೆ, ಸತ್ತಾರಾ ಕಿವಿಗೊಡಲಿಲ್ಲ. “”ನೀನು ಧಾರಾಳವಾಗಿ ಹಣ ಸಂಪಾದಿಸಲು ಜ್ಯೋತಿಷಿಯಾಗಬೇಕು. ತಪ್ಪಿದರೆ ನಾನು ನಿನ್ನನ್ನು ತೊರೆದು ತವರುಮನೆಗೆ ಹೋಗಿಬಿಡುತ್ತೇನೆ” ಎಂದು ಹಟ ಹಿಡಿದಳು. ಮಾತ್ರವಲ್ಲ, ತನ್ನ ಗಂಡ ಒಬ್ಬ ಮಂತ್ರವಾದಿಯಿಂದ ಜ್ಯೋತಿಷ ವಿದ್ಯೆ ಕಲಿತು ಭೂತ, ಭವಿಷ್ಯ, ವರ್ತಮಾನಗಳನ್ನು ಹೇಳಬಲ್ಲ ಎಂದು ಎಲ್ಲರಲ್ಲಿಯೂ ಪ್ರಚಾರ ಮಾಡಿಬಂದಳು.

ಅದೇ ವೇಳೆಗೆ ದೇಶವನ್ನಾಳುವ ರಾಜನ ಕಿರೀಟದಿಂದ ಅಮೂಲ್ಯವಾದ ಒಂದು ರತ್ನವು ಕಾಣದಾಯಿತು. ಇದನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಆಗ ಮಂತ್ರಿಗಳು, “”ನಮ್ಮ ಅರಮನೆಗೆ ಸನಿಹವೇ ಇರುವ ಅಹ್ಮದ್‌ ಕಬ್ಲಿರ್‌ ದೊಡ್ಡ ಜ್ಯೋತಿಷಿಯೆಂದು ಎಲ್ಲರೂ ಹೇಳುತ್ತಿದ್ದಾರೆ. ಅವನನ್ನು ಕರೆಸಿ ಕೇಳಿದರೆ ರತ್ನದ ಪತ್ತೆಯಾಗುತ್ತದೆ” ಎಂದು ಸಲಹೆ ನೀಡಿದರು. ರಾಜನು ಭಟರನ್ನು ಕಳುಹಿಸಿ ಅಹ್ಮದನನ್ನು ಸಭೆಗೆ ಕರೆಸಿ ರತ್ನ ಎಲ್ಲಿದೆಯೆಂದು ತಿಳಿಸಲು ಕೋರಿದ.

ಜ್ಯೋತಿಷದ ಗಂಧಗಾಳಿಯೇ ಇಲ್ಲದ ಅಹ್ಮದನಿಗೆ ನಾಲಿಗೆ ಒಣಗಿಹೋಯಿತು. ತನಗೇನೂ ತಿಳಿಯದು ಎಂದರೆ ರಾಜನು ನಂಬುವುದಿಲ್ಲ. ಅದಕ್ಕಾಗಿ, “”ನಾಳೆ ಹೇಳುತ್ತೇನೆ” ಎಂದು ಜಾರಿಕೊಳ್ಳಲು ಯತ್ನಿಸಿದ. ರಾಜನು, “”ಸರಿ, ನಾಳೆಯೇ ಹೇಳು. ಆದರೆ ಅದುವರೆಗೆ ನೀನು ನಮ್ಮ ಅರಮನೆಯ ಒಳಗಿನ ಕೋಣೆಯಲ್ಲಿ ಇರು. ಹೊರಗೆ ಹೋಗಬೇಡ” ಎನ್ನುತ್ತ ಅವನನ್ನು ಒಂದು ಕೋಣೆಯೊಳಗೆ ಕಳುಹಿಸಿದ. ರಾತ್ರೆಯಾದರೂ ಅಹ್ಮದನಿಗೆ ನಿದ್ರೆ ಬರಲಿಲ್ಲ. ತನ್ನ ಹೆಂಡತಿಯ ಧನ ಲೋಭದಿಂದಾಗಿ ತನಗೆ ಇಂತಹ ಕಷ್ಟ ಪ್ರಾಪ್ತವಾಯಿತು ಎಂದು ಯೋಚಿಸುತ್ತ, “”ಹೆಣ್ಣೇ, ನಿನ್ನ ದುರಾಶೆಯಿಂದಾಗಿ ಮರಣದಂಡನೆಯ ತನಕ ಬಂದಿತಲ್ಲ!” ಎಂದು ಹೇಳಿಕೊಂಡ.

ಅಸಲು ಸಂಗತಿಯೆಂದರೆ ರತ್ನವನ್ನು ಅರಮನೆಯ ಒಬ್ಬ ದಾಸಿ ಕಳವು ಮಾಡಿದ್ದಳು. ಅವಳು ಅಹ್ಮದ್‌ ಮಲಗಿದ್ದ ಕೋಣೆಯ ಹೊರಗಡೆ ನಿಂತು ಅವನು ಇದನ್ನು ಹೇಗೆ ಪತ್ತೆ ಮಾಡುತ್ತಾನೆಂದು ತಿಳಿಯಲು ಕಾಯುತ್ತ ಇದ್ದಳು. ಅಹ್ಮದ್‌ ಹೇಳಿಕೊಂಡ ಮಾತು ಕಿವಿಗೆ ಬೀಳುತ್ತಲೇ ಅವಳಿಗೆ ಭಯವಾಯಿತು. ಇವನಿಗೆ ತಾನು ಕಳವು ಮಾಡಿರುವ ವಿಷಯ ಗೊತ್ತಾಗಿದೆ, ಹೀಗಾಗಿ ಹಾಗೆ ಹೇಳಿದ್ದಾನೆ ಎಂದು ಭಾವಿಸಿ ಅಹ್ಮದನ ಬಳಿಗೆ ಬಂದು ನಿಜ ವಿಷಯ ಹೇಳಿದಳು. “”ನಾನು ರತ್ನವನ್ನು ಮರಳಿ ಕೊಡುತ್ತೇನೆ. ಆದರೆ ನನಗೆ ಶಿಕ್ಷೆಯಾಗದಂತೆ ಮಾಡಿದರೆ ನೂರು ಚಿನ್ನದ ನಾಣ್ಯಗಳನ್ನು ನೀಡುತ್ತೇನೆ” ಎಂದು ಕಾಲು ಹಿಡಿದು ಬೇಡಿಕೊಂಡಳು.

ಅಹ್ಮದ್‌, “”ನೀನು ರತ್ನವನ್ನು ತೆಗೆದುಕೊಂಡು ಹೋಗಿ ರಾಜನ ಹಾಸಿಗೆಯ ಕೆಳಗೆ ಇರಿಸಿಬಿಡು. ಉಳಿದುದನ್ನು ನಾನು ನೋಡಿಕೊಳ್ಳುತ್ತೇನೆ”’ ಎಂದು ಹೇಳಿ ಅವಳು ಕೊಟ್ಟ ನಾಣ್ಯಗಳನ್ನು ತೆಗೆದುಕೊಂಡ. ಬೆಳಗಾಯಿತು. ರಾಜನು ಅವನ ಭೇಟಿಗೆ ಬಂದು, “”ಕದ್ದವರ ವಿಷಯ ಗೊತ್ತಾಯಿತೆ?” ಎಂದು ಕೇಳಿದ. ಅಹ್ಮದ್‌ ಮುಗುಳ್ನಗುತ್ತ, “”ಪ್ರಭುಗಳೇ, ಕೊಡಲಿ ಹೆಗಲಲ್ಲಿರಿಸಿಕೊಂಡು ಹುಡುಕಿದವರಂತೆ ಮಾಡುತ್ತೀರಲ್ಲ! ರತ್ನ ನಿಮ್ಮ ಹಾಸಿಗೆಯ ಕೆಳಗಿರುವಂತೆ ತೋರುತ್ತಿದೆ” ಎಂದು ಹೇಳಿದ. ರಾಜನು ಹುಡುಕಿದಾಗ ರತ್ನವು ಅಲ್ಲಿ ಪತ್ತೆಯಾಯಿತು. ಅವನು ಸಂತೋಷದಿಂದ ಅಹ್ಮದನಿಗೆ ಒಂದು ಕುದುರೆಯನ್ನಲ್ಲದೆ ಐನೂರು ಚಿನ್ನದ ನಾಣ್ಯಗಳನ್ನು ಕೊಟ್ಟು ಕಳುಹಿಸಿದ.

ಕುದುರೆಯ ಮೇಲೆ ಕುಳಿತು ಅಹ್ಮದ್‌ ಮನೆಗೆ ಬರುವಾಗ ಶ್ರೀಮಂತ ಹೆಂಗಸೊಬ್ಬಳು ತನ್ನ ದಾಸಿಯರೊಂದಿಗೆ ಓಡೋಡಿ ಬಂದು ಅವನನ್ನು ತಡೆದು ನಿಲ್ಲಿಸಿದಳು. “”ನನ್ನ ಹಲವು ರತ್ನಾಭರಣಗಳು ನಾಪತ್ತೆಯಾಗಿವೆ. ಈ ದಾಸಿಯರ ಪೈಕಿ ಯಾರೋ ಕದ್ದಿರಬೇಕು. ಅರಮನೆಯ ರತ್ನವನ್ನು ನೀನು ಸುಲಭವಾಗಿ ಕಂಡುಹಿಡಿದ ವಿಷಯ ಎಲ್ಲರಿಗೂ ಗೊತ್ತಾಗಿದೆ. ನನ್ನ ಆಭರಣಗಳನ್ನೂ ಪತ್ತೆ ಮಾಡಿಕೊಡು” ಎಂದು ಕೇಳಿದಳು.

ತನಗೆ ಏನೂ ತಿಳಿಯದು ಎಂದು ಅಹ್ಮದ್‌ ಹೇಳಿದರೆ ಹೆಂಗಸು ನಂಬುವ ಸ್ಥಿತಿಯಲ್ಲಿರಲಿಲ್ಲ. ಅವಳಿಂದ ಪಾರಾಗಲು ಅವನು ಒಂದು ಉಪಾಯ ಮಾಡಿ, “”ಹೀಗೆಲ್ಲ ಅರ್ಧ ದಾರಿಯಲ್ಲಿ ನಿಲ್ಲಿಸಿ ಕೇಳಿದರೆ ಹೇಳುವುದು ಸಾಧ್ಯವಿಲ್ಲ. ಸ್ನಾನ ಮಾಡಿ, ಫ‌ಲ, ಪುಷ್ಪ$ ಕಾಣಿಕೆಯೊಂದಿಗೆ ನನ್ನ ಮನೆಗೆ ಬಂದರೆ ಹೇಳುತ್ತೇನೆ” ಎಂದು ಕಳುಹಿಸಿದ. ಅವಳಿಂದ ಪಾರಾಗಿ ಮನೆ ಸೇರಿಕೊಂಡ. ಆದರೆ ಸ್ವಲ್ಪ$ ಹೊತ್ತಿನಲ್ಲಿ ಹೆಂಗಸು ಕಾಣಿಕೆಗಳೊಂದಿಗೆ ಅವನ ಮನೆಗೆ ಬಂದುಬಿಟ್ಟಳು. “”ಕಣ್ಣಿಗೆ ಕಂಡಂತೆ ಹೇಳಿಬಿಟ್ಟೆಯಲ್ಲ! ನಾನು ಸ್ನಾನದ ಮನೆಯಲ್ಲಿ ಆಭರಣಗಳನ್ನು ತೆಗೆದಿರಿಸಿದ್ದು ನೆನಪಿರಲಿಲ್ಲ. ನಿನ್ನ ಮಾತಿನಂತೆ ಸ್ನಾನ ಮಾಡಲು ಹೋದಾಗ ಅದೆಲ್ಲವೂ ಕಾಣಿಸಿದವು. ಸುಮ್ಮನೆ ದಾಸಿಯರ ಮೇಲೆ ಅನುಮಾನಿಸಿದೆ” ಎಂದು ಹೇಳಿ ಅವನಿಗೆ ಕಾಣಿಕೆಗಳನ್ನು ನೀಡಿ ಹೊರಟುಹೋದಳು.

ಒಂದೆರಡು ದಿನಗಳು ಕಳೆದುಹೋದವು. ರಾಜನ ಅರಮನೆಯಿಂದ ಮತ್ತೆ ಕರೆ ಬಂತು. ಅಹ್ಮದ್‌ ಅಲ್ಲಿಗೆ ಹೋದ. “”ನಿನ್ನೆ ರಾತ್ರೆ ಅರಮನೆಯ ಖಜಾನೆಗೆ ನುಗ್ಗಿ ಚಿನ್ನದ ನಾಣ್ಯಗಳು ತುಂಬಿದ್ದ ನಲುವತ್ತು ಮೂಟೆಗಳನ್ನು ಕಳ್ಳರು ಅಪಹರಿಸಿದ್ದಾರೆ. ನಲುವತ್ತು ಮಂದಿ ಕಳ್ಳರು ಬಂದಿರಬಹುದು. ಅವರನ್ನು ಪತ್ತೆ ಮಾಡಬೇಕು” ಎಂದು ಆಜಾnಪಿಸಿದ. ಅಹ್ಮದನಿಗೆ ಮೈಯೆಲ್ಲ ಬೆವತಿತು. ತನಗೆ ಜ್ಯೋತಿಷ ತಿಳಿಯದೆಂದು ಹೇಳಿದರೆ ರಾಜನು ನಂಬಲಾರ. ಕಳ್ಳರ ಪತ್ತೆಯಾಗದಿದ್ದರೆ ಶಿಕ್ಷಿಸದೆ ಇರಲಾರ. ಆದ ಕಾರಣ ಅಹ್ಮದ್‌ ಒಂದು ಉಪಾಯ ಹುಡುಕಿದ. “”ನನಗೆ ಗೊತ್ತಿರುವ ಶಾಸ್ತ್ರದಲ್ಲಿ ದಿನಕ್ಕೆ ಒಬ್ಬ ಕಳ್ಳನನ್ನು ಮಾತ್ರ ಪತ್ತೆ ಮಾಡಲು ಸಾಧ್ಯ. ಹೀಗಾಗಿ ನಲುವತ್ತು ದಿನಗಳು ಕಳೆದ ಕೂಡಲೇ ನಿಮ್ಮಲ್ಲಿಗೆ ಬಂದು ನಿಜ ವಿಷಯ ಹೇಳುತ್ತೇನೆ” ಎಂದು ಹೇಳಿ ಮನೆಗೆ ಬಂದ.

ಅಹ್ಮದನಿಗೆ ಊಟ ರುಚಿಸಲಿಲ್ಲ. ನಿದ್ರೆ ಬರಲಿಲ್ಲ. ಒಂದು ಹಲಗೆಯ ಮೇಲೆ ಕ್ರಮವಾಗಿ ನಲುವತ್ತು ಅಂಕಗಳನ್ನು ಬರೆದ. ಮಧ್ಯರಾತ್ರೆಯಾಗುತ್ತಲೇ ಒಂದು ದಿನ ಕಳೆದುಹೋಯಿತು ಎಂಬ ಚಿಂತೆಯಲ್ಲಿ, “”ಒಂದು ಮುಗಿಯಿತು. ಇನ್ನು ಮೂವತ್ತೂಂಬತ್ತು ಉಳಿದಿದೆ” ಎಂದು ಹೇಳಿ ಒಂದು ಅಂಕಿಯನ್ನು ಹೊಡೆದು ಹಾಕಿದ.

ರಾಜನು ಕಳ್ಳರ ಪತ್ತೆ ಮಾಡಲು ಅಹ್ಮದನಿಗೆ ಹೇಳಿದ ಸಂಗತಿಯನ್ನು ಕಳ್ಳರು ತಿಳಿದುಕೊಂಡಿದ್ದರು. ಕಳ್ಳರ ನಾಯಕನು ಅವನು ಈ ವಿಷಯವನ್ನು ಹೇಗೆ ಕಂಡು ಹಿಡಿಯುತ್ತಾನೆಂದು ತಿಳಿಯಲು ಒಬ್ಬ ಕಳ್ಳನನ್ನು ರಾತ್ರೆ ಅವನ ಮನೆಯ ಹಿಂದೆ ಅಡಗಿ ಕುಳಿತಿರಲು ಹೇಳಿದ. ಮಧ್ಯರಾತ್ರೆ ಅಹ್ಮದ್‌, “ಒಂದು ಹೋಯಿತು, ಮೂವತ್ತೂಂಬತ್ತು ಉಳಿಯಿತು’ ಎನ್ನುತ್ತಲೇ ತಾನು ಬಂದಿರುವುದು ಅವನಿಗೆ ಗೊತ್ತಾಗಿದೆಯೇ ಎಂದು ಕಳ್ಳನಿಗೆ ಸಂಶಯ ಬಂದಿತು. ಇದನ್ನು ಹೋಗಿ ತನ್ನ ನಾಯಕನಿಗೆ ತಿಳಿಸಿದ. ನಿಜ ಪರೀಕ್ಷೆಗಾಗಿ ನಾಯಕನು ಮರುದಿನ ಇಬ್ಬರನ್ನು ಅಲ್ಲಿಗೆ ಕಳುಹಿಸಿದ. ಮಧ್ಯರಾತ್ರೆ ಅಹ್ಮದ್‌, “”ಎರಡು ಹೋಯಿತು, ಮೂವತ್ತೆಂಟು ಉಳಿಯಿತು” ಎಂದು ಹೇಳಿ ಹಲಗೆಯ ಮೇಲಿದ್ದ ಎರಡನೆಯ ಅಂಕೆಯನ್ನು ಒರೆಸಿ ಹಾಕಿದ.

ಹೀಗೆ ದಿನವೂ ಒಬ್ಬೊಬ್ಬರಾಗಿ ಕಳ್ಳರ ಸಂಖ್ಯೆ ಹೆಚ್ಚಿಸುತ್ತ ಅಹ್ಮದ್‌ ಮನೆಯ ಬಳಿಗೆ ಬರತೊಡಗಿದರು. ಅಹ್ಮದ್‌ ಮಧ್ಯರಾತ್ರೆ ಸಂಖ್ಯೆಯನ್ನು ಹೇಳುವುದು ಕಂಡು ಅವರಿಗೆ ತಮ್ಮ ನಿಜ ವಿಷಯ ಅವನಿಗೆ ತಿಳಿದಿದೆಯೆಂದು ಖಾತ್ರಿಯಾಯಿತು. ಕಳ್ಳರು ನಾಯಕನೊಂದಿಗೆ ಅವನ ಮನೆಗೆ ಬಂದರು, “”ನೀನು ಎಂತಹ ಮೇಧಾವಿಯೆಂಬುದು ನಮಗೆ ಈಗ ಅರ್ಥವಾಗಿದೆ. ಅರಮನೆಯ ಚಿನ್ನದ ಮೂಟೆಗಳನ್ನು ಅಲ್ಲೇ ಸನಿಹದಲ್ಲಿರಿಸಿ ದೇಶ ಬಿಟ್ಟು ಹೋಗುತ್ತೇವೆ. ನಮಗೆ ಶಿಕ್ಷೆಯಾಗದಂತೆ ನೋಡಿಕೊಳ್ಳಬೇಕು” ಎಂದು ಕೇಳಿಕೊಂಡರು.

ನಲುವತ್ತು ದಿನಗಳ ಮೊದಲೇ ಕಳುವಾದ ಚಿನ್ನ ಮರಳಿ ಲಭಿಸಿದಾಗ ರಾಜನಿಗೆ ಸಂತೋಷವಾಯಿತು. “”ನಿನ್ನಂತಹ ದೈವಜ್ಞ ನನ್ನ ಬಳಿಯಲ್ಲೇ ಇರಬೇಕು. ಸುಂದರಿಯಾದ ನನ್ನ ಒಬ್ಬಳೇ ಮಗಳ ಕೈಹಿಡಿದು ಅರಮನೆಯಲ್ಲಿ ಇದ್ದುಬಿಡು. ಮುಂದೆ ಈ ರಾಜ್ಯಕ್ಕೆ ನೀನೇ ರಾಜನಾಗಬೇಕು” ಎಂದು ಹೇಳಿದ.

ಪ. ರಾಮಕೃಷ್ಣ ಶಾಸ್ತ್ರಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Guru Purnima: ಅವರ ಜೀವನವೇ ನನಗೊಂದು ಸಂದೇಶ

Guru Purnima: ಅವರ ಜೀವನವೇ ನನಗೊಂದು ಸಂದೇಶ

Guru Purnima Spcl: ಅರಿವೆಂಬ ಗುರುವು ಗುರುವೆಂಬ ಅರಿವು

Guru Purnima Spcl: ಅರಿವೆಂಬ ಗುರುವು ಗುರುವೆಂಬ ಅರಿವು

Guru Purnima Spcl: ಅಮ್ಮ, ರಾಜ್‌, ವಿಷ್ಣು ನನ್ನ ಗುರುಗಳು!

Guru Purnima Spcl: ಅಮ್ಮ, ರಾಜ್‌, ವಿಷ್ಣು ನನ್ನ ಗುರುಗಳು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.