ಕೊಡಗಿನ ಬೆಡಗಿಯ ಕಂಬ್ಯಾಕ್ ಸ್ಟೋರಿ
Team Udayavani, Feb 24, 2019, 12:30 AM IST
ಸಾಮಾನ್ಯವಾಗಿ ನಾಯಕ ನಟಿಯರು ಮದುವೆಯಾದ ಮೇಲೆ ಚಿತ್ರರಂಗಕ್ಕೆ ಗುಡ್ ಬೈ ಹೇಳ್ಳೋದೆ ಹೆಚ್ಚು. ಅದರಲ್ಲೂ ಕನ್ನಡ ಚಿತ್ರರಂಗದ ಮಟ್ಟಿಗೆ ಹೇಳುವುದಾದರೆ, ಮದುವೆಯಾದ ನಾಯಕ ನಟಿಯರು ಮತ್ತೆ ಚಿತ್ರರಂಗಕ್ಕೆ ಬರುತ್ತೇವೆ ಎಂದರೂ, ಅಲ್ಲಿ ಅವರಿಗೆ ಮತ್ತೆ ನಾಯಕಿಯ ಪಾತ್ರಗಳು ಸಿಗೋದು ತುಂಬ ವಿರಳ. ಹೀಗೆ ಬಂದ ಬಹುತೇಕ ನಟಿಯರು ಚಿತ್ರಗಳಲ್ಲಿ ಹೀರೋ-ಹೀರೋಯಿನ್ಗೆ ಅಕ್ಕ, ಅತ್ತಿಗೆ, ತಾಯಿ ಪಾತ್ರಕ್ಕಷ್ಟೇ ಸೀಮಿತವಾದ ಉದಾಹರಣೆಗಳು ಸಾಕಷ್ಟು ಸಿಗುತ್ತವೆ.
ಈಗ ಈ ವಿಷಯವನ್ನು ಪ್ರಸ್ತಾಪಿಸುತ್ತಿರುವುದಕ್ಕೆ ಒಂದು ಕಾರಣವಿದೆ. ಪಂಚರಂಗಿ, ಅಣ್ಣಾಬಾಂಡ್, ಕೃಷ್ಣನ್ ಮ್ಯಾರೇಜ್ ಸ್ಟೋರಿ ಮೊದಲಾದ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ನಿಧಿ ಸುಬ್ಬಯ್ಯ 2017ರ ಫೆಬ್ರವರಿ ತಿಂಗಳಲ್ಲಿ ಲವೇಶ್ ಕುಮಾರ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಎಲ್ಲಾ ನಟಿಯರಂತೆ ನಿಧಿ ಸುಬ್ಬಯ್ಯ ಕೂಡ ಮದುವೆಯ ಬಳಿಕ ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂದು ಕೆಲವರು ಭಾವಿಸಿದ್ದರು. ಇನ್ನೂ ಕೆಲವರು ನಿಧಿ ಮತ್ತೆ ಚಿತ್ರರಂಗಕ್ಕೆ ಬಂದರೆ ಪೋಷಕ ಪಾತ್ರಗಳಿಗಷ್ಟೇ ಸೀಮಿತವಾಗಬಹುದು ಎಂದುಕೊಂಡಿದ್ದರು. ಆದರೆ ಈಗ ನಿಧಿ ಸುಬ್ಬಯ್ಯ ಈ ಎಲ್ಲ ನಿರೀಕ್ಷೆಗಳನ್ನು ಹುಸಿಗೊಳಿಸಿ ಚಿತ್ರರಂಗದಲ್ಲಿ ಮತ್ತೆ ಹೀರೋಯಿನ್ ಆಗಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ತಯಾರಿಯಲ್ಲಿದ್ದಾರೆ.
ಹೌದು, ಮತ್ತೆ ತೆರೆಮೇಲೆ ಬರಲು ತೆರೆಮರೆಯಲ್ಲೇ ಒಂದಷ್ಟು ತಯಾರಿ ಮಾಡಿಕೊಂಡಿರುವ ನಿಧಿ ಸುಬ್ಬಯ್ಯ, ದ್ವಾರಕೀಶ್ ಬ್ಯಾನರ್ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಆನಂದ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫೋಟೋಶೂಟ್ನಲ್ಲಿ ಕಾಣಿಸಿಕೊಂಡಿದ್ದ ನಿಧಿ, ಈಗಾಗಲೇ ಶೂಟಿಂಗ್ನಲ್ಲೂ ಕೂಡ ಭಾಗವಹಿಸುತ್ತಿದ್ದಾರೆ. ಇನ್ನು ಆನಂದ್ ಚಿತ್ರಕ್ಕೆ ಪಿ. ವಾಸು ನಿರ್ದೇಶನವಿದ್ದು, ಚಿತ್ರದಲ್ಲಿ ನಿಧಿ ಸುಬ್ಬಯ್ಯ ಜೊತೆ ರಚಿತಾ ರಾಮ್ ಕೂಡ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಕನ್ನಡದಲ್ಲಿ 5ಜಿ ಚಿತ್ರದ ಬಳಿಕ, ಬಾಲಿವುಡ್ನತ್ತ ಮುಖ ಮಾಡಿದ್ದ ನಿಧಿ ರೆಬಾ ಎಂಬ ಹಿಂದಿ ಚಿತ್ರದಲ್ಲೂ ನಟಿಸಿದ್ದರು. ಅದಾದ ಬಳಿಕ ಹಸೆಮಣೆ ಏರಿದ್ದ ನಿಧಿ, ಖಾಸಗಿ ಜೀವನದಲ್ಲಿ ಬ್ಯುಸಿಯಾಗಿದ್ದರು. ಇದೀಗ, ಸಣ್ಣದೊಂದು ಬ್ರೇಕ್ನ ನಂತರ ಬೆಳ್ಳಿತೆರೆಗೆ ವಾಪಸ್ ಆಗಿರುವ ನಿಧಿ ಹಿಂದಿನಂತೆ ಮತ್ತೆ ತಮ್ಮ ಚಾರ್ಮ್ನಿಂದ ಸಿನಿಪ್ರಿಯರನ್ನು ಸೆಳೆಯಲು ಯಶಸ್ವಿಯಾಗುತ್ತಾರಾ? ಅನ್ನೋದನ್ನ ಕಾದು ನೋಡಬೇಕು. ಈಗಾಗಲೇ ನಿಧಿ ನಾಯಕಿಯಾಗಿರುವ ಆನಂದ್ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು,ಇದೇ ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್