ಮಲೆನಾಡ  ಚೆಲುವೆ ಮೇಘಶ್ರೀ


Team Udayavani, Nov 18, 2018, 6:00 AM IST

1.jpg

ಕನ್ನಡ ಚಿತ್ರರಂಗದಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಪರಭಾಷೆಯ ನಟಿಯರೇ ದೊಡ್ಡ ಸಂಖ್ಯೆಯಲ್ಲಿ ಕಾಣುತ್ತಾರೆ ಎಂಬ ಆರೋಪ ನಿಧಾನವಾಗಿ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿದೆ. ಇದಕ್ಕೆ ಪೂರಕವೆಂಬಂತೆ, ಕಳೆದ ವರ್ಷ ಸುಮಾರು ಇನ್ನೂರಕ್ಕೂ ಹೆಚ್ಚಿನ ಕನ್ನಡ ಚಿತ್ರಗಳು ತೆರೆಗೆ ಬಂದಿದ್ದು, ಅದರಲ್ಲಿ ಸುಮಾರು ನೂರೈವತ್ತಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಚ್ಚ ಕನ್ನಡದ ಪ್ರತಿಭೆಗಳೇ ತೆರೆಯ ಮೇಲೆ ಕಾಣಿಸಿಕೊಂಡಿದ್ದವು ಎಂಬುದು ಮತ್ತೂಂದು ಗಮನಾರ್ಹ ಸಂಗತಿ. ಇನ್ನು ಈ ವರ್ಷದ ಆರಂಭದಿಂದಲೂ ಸೆಟ್ಟೇರುತ್ತಿರುವ ಮತ್ತು ಬಿಡುಗಡೆಯಾಗುತ್ತಿರುವ ಬಹುತೇಕ ಚಿತ್ರಗಳಲ್ಲಿ ಕನ್ನಡದ ನವನಟಿಯರ ಹೆಸರೇ ರಾರಾಜಿಸುತ್ತಿದೆ. ಹೀಗೆ ವರ್ಷದ ಏಪ್ರಿಲ್‌ನಲ್ಲಿ ತೆರೆಕಂಡ ಕೃಷ್ಣ ತುಳಸಿ ಚಿತ್ರದ ಮೂಲಕ ನಾಯಕ ನಟಿಯಾಗಿ ಚಂದನವನಕ್ಕೆ ಪರಿಚಯವಾದ ಚೆಲುವೆ ಮೇಘಶ್ರೀ. 

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮೇಘಶ್ರೀ ಬಾಲ್ಯದ ಶಿಕ್ಷಣದ ನಂತರ, ಪೋಷಕರ ಜತೆ ಮುಖ ಮಾಡಿದ್ದು ಬೆಂಗಳೂರಿನತ್ತ. ಅಭಿನಯದ ಕಡೆಗಿದ್ದ ಆಸಕ್ತಿ, ಸ್ವತ್ಛ ಭಾಷೆಯ ಉಚ್ಚಾರಣೆ, ಜತೆಗೊಪ್ಪುವ ಅಂದ ಈ ಹುಡುಗಿಗೆ ನಿಧಾನವಾಗಿ ಅವಕಾಶಗಳ ಬಾಗಿಲನ್ನು ತೆರೆಯಿತು. ಸಂಚಾರಿ ವಿಜಯ್‌ ನಾಯಕ ನಟನಾಗಿ ಅಭಿನಯಿಸಿದ ಕೃಷ್ಣ ತುಳಸಿ ಚಿತ್ರದಲ್ಲಿ ನಾಯಕಿಯ ಪಾತ್ರವನ್ನು ಗಿಟ್ಟಿಸಿಕೊಂಡ ಮೇಘಶ್ರೀ ತನ್ನ ಮೊದಲ ಚಿತ್ರದಲ್ಲೇ ನೋಡುಗರ ಗಮನ ಸೆಳೆಯಲು ಯಶಸ್ವಿಯಾದರು. ಕೃಷ್ಣ ತುಳಸಿ  ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಅಷ್ಟಾಗಿ ಸದ್ದು ಮಾಡದಿದ್ದರೂ, ಮೇಘಶ್ರೀ ಅಭಿನಯದ ಬಗ್ಗೆ ಎಲ್ಲೆಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿಬಂದವು. 

ಕೃಷ್ಣ ತುಳಸಿ  ಚಿತ್ರದ ನಂತರ ಮೇಘಶ್ರೀ ಅಭಿನಯಿಸಿರುವ ವಿಜಯ್‌ ಸೂರ್ಯ ನಾಯಕ ನಟನಾಗಿರುವ ಕದ್ದು ಮುಚ್ಚಿ ಚಿತ್ರ ಕೂಡ ತೆರೆಗೆ ಬರಲು ಸಿದ್ಧವಾಗಿದೆ. ಇದರೊಂದಿಗೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅಭಿನಯದ ದಶರಥ, ಚಿರಂಜೀವಿ ಸರ್ಜಾ ಅಭಿನಯದ ರಾಜಾ ಮಾರ್ತಾಂಡ, ಯಶಸ್‌ ಸೂರ್ಯ ಅವರೊಂದಿಗೆ ಅಮೃತವರ್ಷಿಣಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡದ ಜತೆಜತೆಗೆ ತೆಲುಗು ಚಿತ್ರರಂಗದಲ್ಲೂ ಬೇಡಿಕೆ ಪಡೆದುಕೊಳ್ಳುತ್ತಿರುವ ಮೇಘಶ್ರೀ ಎನ್‌ಟಿಆರ್‌ ಮೊಮ್ಮಗ ತಾರಖ್‌ರತ್ನ ಅವರಿಗೂ ನಾಯಕಿಯಾಗಿ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ತಮ್ಮ ಬಣ್ಣದ ಬದುಕಿನ ಪ್ರಯಾಣದ ಬಗ್ಗೆ ಮಾತನಾಡುವ ಮೇಘಶ್ರೀ, “ನಾನು ನಾಯಕಿಯಾಗಿ ಪ್ರೇಕ್ಷಕರ ಮುಂದೆ ಬರಬೇಕು ಎಂಬುದಕ್ಕಿಂತ ಒಬ್ಬ ನಟಿಯಾಗಿ, ಕಲಾವಿದೆಯಾಗಿ ಪ್ರೇಕ್ಷಕರ ಮನಸ್ಸಿನಲ್ಲಿ ಪಾತ್ರಗಳಲ್ಲಿ ಉಳಿದುಕೊಳ್ಳಬೇಕು. ಒಬ್ಬ ಕಲಾವಿದೆಯಾಗಿ ನನಗೆ ಯಾವುದೇ ಭಾಷೆಯ ಗಡಿಯಿಲ್ಲ. ನನಗೆ ಸೂಕ್ತವೆನಿಸುವ ಮತ್ತು ಸಮರ್ಥವಾಗಿ ನಿರ್ವಹಿಸಬಲ್ಲೆ ಎಂಬ ಪಾತ್ರಗಳು ಸಿಕ್ಕರೆ ಅಂತಹ ಚಿತ್ರಗಳಲ್ಲಿ ಖಂಡಿತ ಅಭಿನಯಿಸುತ್ತೇನೆ. ಪಾತ್ರ ಎಷ್ಟು ದೊಡ್ಡದು, ಚಿಕ್ಕದು ಎನ್ನುವುದಕ್ಕಿಂತ ಅದರ ಪ್ರಾಮುಖ್ಯ ಎಷ್ಟು ಅನ್ನುವುದಷ್ಟೇ ನನಗೆ ಮುಖ್ಯ’ ಎನ್ನುತ್ತಾರೆ ಮೇಘಶ್ರೀ. 

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.