ಕಿರುತೆರೆಯಿಂದ ಮಿಸ್‌ ಆಗಲಿದ್ದಾರಾ ರಾಧಾ ಮಿಸ್‌


Team Udayavani, Apr 28, 2019, 6:00 AM IST

1

ಕಿರುತೆರೆಯ ಪ್ರೇಕ್ಷಕರಿಗೆ ರಾಧಾ ಮಿಸ್‌ ಅಂದ್ರೆ ಥಟ್ಟನೆ ನೆನಪಾಗುವ ಹೆಸರು ಶ್ವೇತಾ ಪ್ರಸಾದ್‌. ಹೌದು, ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ರಾಧಾ ರಮಣ ಧಾರಾವಾಹಿಯ ರಾಧಾ ಮಿಸ್‌ ಪಾತ್ರದಲ್ಲಿ ಅಸಂಖ್ಯಾತ ನೋಡುಗರ ಮನ ಗೆದ್ದಿರುವ ನಟಿ ಶ್ವೇತಾ ಪ್ರಸಾದ್‌, ಶೀಘ್ರದಲ್ಲಿಯೇ ರಾಧಾ ರಮಣ ಧಾರಾವಾಹಿಯ ರಾಧಾ ಮಿಸ್‌ ಪಾತ್ರಕ್ಕೆ ಗುಡ್‌ ಬೈ ಹೇಳಲಿದ್ದಾರಂತೆ. ಅಂದಹಾಗೇ, ಈ ವಿಷಯವನ್ನು ಖಚಿತಪಡಿಸಿರುವುದು ಬೇರ್ಯಾರೂ ಅಲ್ಲ, ಸ್ವತಃ ಶ್ವೇತಾ ಪ್ರಸಾದ್‌ ಉರೂಫ್ ರಾಧಾ ಮಿಸ್‌.

ಹೌದು, ನಟಿ ಶ್ವೇತಾ ಪ್ರಸಾದ್‌ ಇನ್ನು ಮುಂದೆ ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿಲ್ಲ. ಅದಕ್ಕೆ ಕಾರಣ ರಾಧಾ ರಮಣ ಧಾರಾವಾಹಿಯಲ್ಲಿ ಶ್ವೇತಾ ಪ್ರಸಾದ್‌ ಅವರ ಒಪ್ಪಂದ ಮುಗಿದಿರುವುದು. ರಾಧಾ ರಮಣ ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿದೆ. ಆದರೂ ರಾಧಾ ರಮಣ ಜನಪ್ರಿಯತೆಯಲ್ಲಿ ಸಾಗುತ್ತಿರುವಾಗ ಅದರಿಂದ ಹೊರಬಂದರೆ, ನಿರ್ಮಾಣ ಸಂಸ್ಥೆಗೆ, ನಿರ್ದೇಶಕರಿಗೆ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ಇಷ್ಟು ಸಮಯ ಶ್ವೇತಾ ಧಾರಾವಾಹಿಯಲ್ಲಿ ಅಭಿನಯ ಮುಂದುವರೆಸಿದ್ದರಂತೆ. ಸದ್ಯ ರಾಧಾ ರಮಣ ಧಾರಾವಾಹಿಯ ನಿರ್ಮಾಣ ಸಂಸ್ಥೆ ಮತ್ತು ನಿರ್ದೇಶಕರು ಕೂಡ ಧಾರಾವಾಹಿಯಿಂದ ಹೊರಹೋಗಲು ಗ್ರೀನ್‌ ಸಿಗ್ನಲ್‌ ಕೊಟ್ಟಿರುವುದರಿಂದ ಶ್ವೇತಾ ಪ್ರಸಾದ್‌ ಇನ್ನೆರಡು ವಾರದೊಳಗೆ ರಾಧಾ ಮಿಸ್‌ ಪಾತ್ರದಿಂದ ಹೊರಬರಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಶ್ವೇತಾ ಪ್ರಸಾದ್‌ ರಾಧಾ ರಮಣ ಧಾರಾವಾಹಿಯಲ್ಲಿ ರಮಣ ಪಾತ್ರಧಾರಿಗೆ ರಾಧಾ ಎಂಬ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ಕಾಣಿಸಿಕೊಂಡಿದ್ದರು. ರಾಧಾ ಪಾತ್ರ ಶ್ವೇತಾ ಅವರಿಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ನೋಡು ನೋಡುತ್ತಿದ್ದಂತೆ ಕಿರುತೆರೆಯಲ್ಲಿ ಶ್ವೇತಾ ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗವೇ ಸೃಷ್ಟಿ ಯಾಗಿತ್ತು. ಇದೇ ವೇಳೆ ಚಿತ್ರರಂಗ ದಿಂದಲೂ ಶ್ವೇತಾ ಪ್ರಸಾದ್‌ಗೆ ಹಲವು ಅವಕಾಶಗಳು ಬರಲು ಶುರು ವಾಯಿತು. ಇತ್ತೀಚೆಗೆ ತೆರೆಕಂಡಿದ್ದ ಕಳ್ಬೆಟ್ಟದ ದರೋಡೆಕೋರರು ಚಿತ್ರದಲ್ಲಿ ಶ್ವೇತಾ ಪ್ರಸಾದ್‌ ನಾಯಕ ನಟಿಯಾಗಿ ಬೆಳ್ಳಿತೆರೆಗೂ ಅಡಿಯಿಟ್ಟಿದ್ದರು. ಸದ್ಯ ರಾಧಾ ರಮಣ ಧಾರಾವಾಹಿಯಿಂದ ಹೊರಬರುತ್ತಿರುವ ಶ್ವೇತಾ ಪ್ರಸಾದ್‌, ಸ್ವಲ್ಪ ದಿನಗಳ ಕಾಲ ನಟನೆಯಿಂದ ಬ್ರೇಕ್‌ ತೆಗೆದುಕೊಂಡು ನಂತರ ಬೇರೆ ಪಾತ್ರದ ಮೂಲಕ ರೀ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ, ರಾಧಾ ರಮಣ ಧಾರಾವಾಹಿಯಿಂದ “ಮಿಸ್‌’ ಆಗಲಿರುವ ರಾಧಾ ಮಿಸ್‌ ಮತ್ತೆ ಬೇರೆ ಧಾರಾವಾಹಿಯಲ್ಲಿ ಕಿರುತೆರೆಯಲ್ಲೇ ಕಾಣಿಸಿಕೊಳ್ಳುತ್ತಾರಾ ಅಥವಾ ಸಿನಿಮಾದ ಮೂಲಕ ಹಿರಿತೆರೆ ಯಲ್ಲಿ ಕಾಣಿಸಿ ಕೊಳ್ಳುತ್ತಾರಾ ಅನ್ನೋದು ಮಾತ್ರ ಸದ್ಯಕ್ಕೆ ಸಸ್ಪೆನ್ಸ್‌ ಆಗಿಯೇ ಉಳಿದಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.